ಕಪಿಲೆಯ ರೌದ್ರತೆಗೆ ಮುಳುಗಿದ ಸುತ್ತೂರು ಸೇತುವೆ , ಸಂಪರ್ಕ ಕಡಿತ
Recommended Video

ಮೈಸೂರು, ಆಗಸ್ಟ್ 11: ಕೇರಳದ ವೈನಾಡಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿ ಕಪಿಲಾ ನದಿಗೆ ಸುಮಾರು 80ಸಾವಿರ ಕ್ಯೂಸೆಕ್ ನೀರನ್ನು ಹರಿಯ ಬಿಡಲಾಗಿದೆ.
ಇದರ ಪರಿಣಾಮ ಹೆಚ್.ಡಿ.ಕೋಟೆ ತಾಲೂಕು ಸೇರಿದಂತೆ ನಂಜನಗೂಡಿನ ಬಹುಭಾಗ ಮುಳುಗಡೆಯಾಗಿದ್ದು ಸುತ್ತೂರು ಸೇತುವೆ ಮುಳುಗಡೆಯಾಗಿರುವ ಕಾರಣ ಸುತ್ತೂರು ಕ್ಷೇತ್ರಕ್ಕೆ ಸಂಪರ್ಕ ಕಡಿತಗೊಂಡಿದೆ.
ಇದುವರೆಗೆ ಸೇತುವೆ ಮುಳುಗಡೆಯಾಗುವಷ್ಟರ ಮಟ್ಟಿಗೆ ನೀರು ಕಪಿಲ ನದಿಯಲ್ಲಿ ಹರಿದಿರಲಿಲ್ಲ. ಆದರೆ ಕಳೆದೊಂದು ತಿಂಗಳ ಹಿಂದೆ ನೀರು ತುಂಬಿ ಹರಿದಾಗ ಸೇತುವೆ ಮುಳುಗುವ ಭೀತಿ ಉಂಟಾಗಿತ್ತು. ಆದರೆ ಬಳಿಕ ಪ್ರವಾಹ ತಗ್ಗಿದ ಹಿನ್ನಲೆಯಲ್ಲಿ ಸೇತುವೆ ಮುಳುಗಡೆಯಾಗಿರಲಿಲ್ಲ.

80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಆದರೆ ಶುಕ್ರವಾರ ಕಬಿನಿ ಜಲಾಶಯದಿಂದ ಸುಮಾರು 80ಸಾವಿರ ಕ್ಯೂಸೆಕ್ ನೀರನ್ನು ಬಿಟ್ಟ ಪರಿಣಾಮ ಅಪಾರ ಪ್ರಮಾಣದ ನೀರು ಹರಿದು ಬಂದು ಸೇತುವೆ ಮುಳುಗಡೆಯಾಗಿದೆ. ಇದರಿಂದ ಐತಿಹಾಸಿಕ ಸುತ್ತೂರು ಕ್ಷೇತ್ರ ಮತ್ತು ಮೈಸೂರು ನಡುವೆ ಸಂಪರ್ಕ ಕಡಿತಗೊಂಡಿದೆ.

ಕೋಟ್ಯಂತರ ಬೆಳೆ ನಷ್ಟ
ಇನ್ನು ಹಲವು ಜಮೀನುಗಳಿಗೆ ನೀರು ನುಗ್ಗಿದ್ದು ಕೋಟ್ಯಂತರ ರೂ. ಬೆಳೆ ನಷ್ಟ ಸಂಭವಿಸಿದೆ. ಕೇರಳದಲ್ಲಿ ಮಳೆ ಕಡಿಮೆಯಾಗಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾದರೆ ಮಾತ್ರ ಪ್ರವಾಹ ತಗ್ಗುತ್ತದೆ. ಇದೇ ರೀತಿ ಮುಂದುವರೆದರೆ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಹೆಚ್ಚಿದೆ.

ನಾಟಿ ಮಾಡಿದ್ದ ಭತ್ತ ನೀರು ಪಾಲು
ಸುತ್ತೂರು ವ್ಯಾಪ್ತಿಯಲ್ಲಿ ಜನ ಹೆಚ್ಚಾಗಿ ಭತ್ತದ ಕೃಷಿಯನ್ನೇ ನಂಬಿದ್ದು ವಿಶಾಲ ಭತ್ತದ ಬಯಲುಗಳಿವೆ. ಈಗಾಗಲೇ ಪೈರು ಹಾಕಿ ನಾಟಿಗೆ ಬಂದಿದ್ದರೆ ಕೆಲವೆಡೆ ರೈತರು ನಾಟಿಯನ್ನು ಆರಂಭಿಸಿದ್ದರು. ಆದರೆ ಅದು ನೀರು ಪಾಲಾಗಿದ್ದು, ರೈತರು ಕೈಹೊತ್ತು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರವಾಹ ಇನ್ನಷ್ಟು ಹೆಚ್ಚಾಗುವ ಭೀತಿ
ಈಗಾಗಲೇ ಪ್ರವಾಹದಿಂದಾಗಿ ಸೇತುವೆ ಮುಳುಗಿದ್ದು ಪ್ರವಾಹ ಇನ್ನೂ ಹೆಚ್ಚಾಗುವ ಭೀತಿ ವ್ಯಕ್ತಪಡಿಸಲಾಗಿದೆ. ಕೇರಳದಲ್ಲಿ ಮಳೆ ಬಿಡುವು ಕೊಡುವ ಮುನ್ಸೂಚನೆ ತೋರುತ್ತಿಲ್ಲ ಹಾಗಾಗಿ ನೀರಿನ ಹರಿವು ಇನ್ನೂ ಹೆಚ್ಚಾಗಲಿದೆ. ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸದ್ಯಕ್ಕೆ ಪ್ರವಾಹ ಇಳಿದರೆ ಸಾಕಪ್ಪಾ ಎಂದು ದೇವರಲ್ಲಿ ಪ್ರಾರ್ಥಿಸುವಂತಾಗಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications