Heavy Rain: ಮೈಸೂರು ಮಳೆಗೆ ಧರೆಗುರುಳಿದ 410 ವಿದ್ಯುತ್ ಕಂಬಗಳು; ವಿದ್ಯುತ್ ಕಡಿತ, ನೀರು ಪೂರೈಕೆಯಲ್ಲಿ ವ್ಯತ್ಯಯ
ಶುಕ್ರವಾರ ರಾತ್ರಿ ಮೈಸೂರಿನಲ್ಲಿ ಸುರಿದ ಮಳೆಗೆ ವಿದ್ಯುತ್ ಕಂಬ ಹಾಗೂ ಮರಗಳು ಧರೆಗುಳಿದಿದ್ದವು. ಪರಿಣಾಮ ನಗರದ 30ಕ್ಕೂ ಹೆಚ್ಚು ವಾರ್ಡ್ಗಳಲ್ಲಿ ನೀರು ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದ್ದು, ಸಾರ್ವಜನಿಕರು ಪರದಾಡುವಂತಾಯಿತು.
ಶುಕ್ರವಾರ ಸುರಿದ ಗುಡುಗು, ಬಿರುಗಾಳಿ ಸಹಿತ ಮಳೆಯಿಂದಾಗಿ 410 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದಲ್ಲದೇ 16 ಟ್ರಾನ್ಸ್ಫಾರ್ಮರ್ (ಟಿಸಿ) ಸುಟ್ಟುಹೋದ ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ಅಸ್ತವ್ಯಸ್ತವಾಗಿದೆ. ಇದರಿಂದ ಅಂದಾಜು 80 ಲಕ್ಷ ರೂ. ನಷ್ಟವಾಗಿದೆ.

ವಿದ್ಯುತ್ ಕಂಬ ದುರಸ್ತಿ ಹಿನ್ನೆಲೆಯಲ್ಲಿ ನಗರಪಾಲಿಕೆ ವಾಣಿ ವಿಲಾಸ ನೀರು ಸರಬರಾಜು ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಗರದೆಲ್ಲೆಡೆ ನೀರು ಪೂರೈಕೆ ಮಾಡಲು ಪರದಾಡಿದರು. ಕುವೆಂಪು ನಗರ, ರಾಮಕೃಷ್ಣ ನಗರ, ಟಿ.ಕೆ.ಲೇಔಟ್, ಸರಸ್ವತಿಪುರಂ, ಹೆಬ್ಬಾಳು, ವಿಜಯ ನಗರ, ನಜರ್ಬಾದ್, ವಿದ್ಯಾರಣ್ಯಪುರಂ, ಜೆಪಿ ನಗರ ಸೇರಿದಂತೆ ಸಾಕಷ್ಟು ಬಡಾವಣೆಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.
ಪರದಾಡಿದ ಸಾರ್ವಜನಿಕರು
ವಿದ್ಯುತ್ ಸ್ಥಗಿತದಿಂದಾಗಿ ಸಾಕಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ಸಿಗದೇ ಸಾರ್ವಜನಿಕರು ಪರದಾಡುವಂತಾಯಿತು. ಅಂಗಡಿ- ಬೇಕರಿಗಳಲ್ಲಿ ಕ್ಯಾನ್ ಮತ್ತು ಬಾಟಲ್ಗಳಿಂದ ನೀರು ತಂದು ಬಳಕೆ ಮಾಡುವಂತಾಯಿತು. ಶುಕ್ರವಾರ ರಾತ್ರಿಯಿಂದಲ್ಲೇ ಕರೆಂಟ್ ಕಟ್ ಆಗಿದ್ದರಿಂದ ಸಂಪ್ನಲ್ಲಿದ್ದ ನೀರು ಬಳಕೆ ಮಾಡಲು ಸಾಧ್ಯವಾಗದೇ ನಿವಾಸಿಗಳು ಪರದಾಡಿದರು.
ಶುಕ್ರವಾರ ಸಂಜೆ ಅರ್ಧ ಗಂಟೆ ಬಿದ್ದ ಮಳೆಗೆ ಮೈಸೂರಿನ ಯುಜಿಡಿ ವ್ಯವಸ್ಥೆಯೇ ಅಸ್ತವ್ಯಸ್ತವಾಗಿದೆ. ಮ್ಯಾನ್ಹೋಲ್ ಉಕ್ಕಿ ಹರಿಯುತ್ತಿವೆ. ಅಜೀಜ್ಶೇಠ್ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ಚರಂಡಿಗಳಲ್ಲಿರುವ ಕಸಕಡ್ಡಿ, ಕೊಳಚೆ ಪದಾರ್ಥದ ರಾಡಿ ರಸ್ತೆಗೆ ಬಂದಿದೆ. ಈ ಕುರಿತು ಸಾರ್ವಜನಿಕರಿಂದ ನಿರಂತರವಾಗಿ ದೂರುಗಳ ಮಹಾಪೂರವೇ ಹರಿದು ಬರುತ್ತಿದೆ.
ನಗರ ವ್ಯಾಪ್ತಿಯಲ್ಲಿ 200, ಗ್ರಾಮಾಂತರ ಭಾಗದಲ್ಲಿ 210 ಸೇರಿ ಒಟ್ಟು ಜಿಲ್ಲೆಯಲ್ಲಿ 410 ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದಲ್ಲದೇ ಮಳೆ ನೀರು ಟಿಸಿ ಇರುವ ಜಾಗದಲ್ಲಿ ಬೀಳುವುದು ಸೇರಿದಂತೆ ಇನ್ನಿತರ ಕಾರಣಗಳಿಗೆ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದಾಗಿ 16 ಕಡೆಗಳಲ್ಲಿ ಟ್ರಾನ್ಸ್ಫಾರ್ಮರ್ ಸುಟ್ಟು ಹೋಗಿವೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications