SSLC ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ಹೇಗೆ ಗೊತ್ತಾ?
ಮೈಸೂರು, ಮಾರ್ಚ್ 25: SSLC ಮತ್ತು PUC ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗೋದು ಈಗ ಹೊಸ ವಿಷಯವಾಗಿ ಉಳಿದಿಲ್ಲ. ಈ ಬಾರಿಯೂ ಮತ್ತೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸುದ್ದಿ ಬೆಳಕಿಗೆ ಬಂದತ್ತು. ಇಷ್ಟೆಲ್ಲ ಮುನ್ನೆಚ್ಚರಿಕೆಯ ನಡುವೆಯೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಏಕೆ? ಹೇಗೆ?
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಎಸ್ ಎಸ್ ಎಲ್ ಸಿಯ ಗಣಿತ ವಿಷಯದ ಪ್ರಶ್ನೆ ಪತ್ರಿಕೆ ವಾಟ್ಸ್ಯಾಪ್ ನಲ್ಲಿ ಹರಿದಾಡುತ್ತಿದ್ದ ವಿಷಯ ಬೆಳಕಿಗೆ ಬರುತ್ತಿದ್ದಂತೆಯೇ ಹಲವು ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದರು. ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾ ಎಂದು ಶಪಿಸಿಕೊಳ್ಳುತ್ತಿದ್ದರು.
ಸೋಮವಾರ ಬೆಳಿಗ್ಗೆ ಗಣಿತ ಪರೀಕ್ಷೆ ಆರಂಭವಾಗುತ್ತಿದ್ದಂತೆಯೇ ಮೈಸೂರಿನ ಖಾಸಗಿ ವಿದ್ಯಾರ್ಥಿಯೊಬ್ಬ ಆ ಪ್ರಶ್ನೆ ಪತ್ರಿಕೆಯ ಚಿತ್ರವನ್ನು ಸ್ಮಾರ್ಟ್ ಫೋನ್ ನಲ್ಲಿ ತೆಗೆದು ವಾಟ್ಸ್ಯಾಪ್ ನಲ್ಲಿ ಹರಿಬಿಟ್ಟಿದ್ದ.

ಪರೀಕ್ಷಾ ಕೊಠಡಿಗೆ ಮಹಿಳಾ ಶಿಕ್ಷಕರು ಮೇಲ್ವಿಚಾರಕರಾಗಿ ಬಂದಿದ್ದನ್ನು ಕಂಡ ವಿದ್ಯಾರ್ಥಿ ತನ್ನ ಸ್ಮಾರ್ಟ್ ಫೋನ್ ಅನ್ನು ಒಳವಸ್ತ್ರದಲ್ಲಿ ಬಚ್ಚಿಟ್ಟುಕೊಂಡಿದ್ದ. ನಂತರ ಪ್ರಶ್ನೆ ಪತ್ರಿಕೆಯ ಚಿತ್ರವನ್ನು ಕ್ಲಿಕ್ಕಿಸಿ, ಅದಕ್ಕೆ ಉತ್ತರ ಕಳಿಸುವಂತೆ ಕೇಳಿ ಸ್ನೇಹಿತರಿಗೆ ವ್ಹಾಟ್ಸ್ಯಾಪ್ ಮೂಲಕ ಕೇಳಿದ್ದ. ಪರೀಕ್ಷೆ ಆರಂಭವಾಗುವುದಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ತಿಳಿದು ಪ್ರಕರಣ ಭೇದಿಸಿದ ಪೊಲಿಸರು, ಆರೋಪಿ ಮುಜಾಹಿದ್ ಪಾಶಾ ಎಂಬುವವನ್ನು ವಶಕ್ಕೆ ಪಡೆದಿದ್ದಾರೆ. ಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಮೈಸೂರು ಡಿಡಿಪಿಐ ಪಾಂಡುರಂಗ ದೃಢ ಪಡಿಸಿದ್ದಾರೆ.
ವಿಜಯಪುರದಲ್ಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ವರದಿಯಾಗಿತ್ತು. ಸೋಮವಾರ ಎಸ್ ಎಸ್ ಎಲ್ ಸಿ ಗಣಿತ ಪರೀಕ್ಷೆ ಸೋರಿಕೆಯಾಗಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications