ಹೋಟೆಲ್ ಆಗಿ ಬದಲಾಗುತ್ತಿದೆ ಮೈಸೂರಿನ ಪಾರಂಪರಿಕ ಕಟ್ಟಡ ಗನ್ ಹೌಸ್
ಮೈಸೂರು, ಸೆಪ್ಟೆಂಬರ್.21: ಸಾಂಸ್ಕೃತಿಕ ನಗರಿ ಮೈಸೂರಿನ ಪಾರಂಪರಿಕ ಕಟ್ಟಡ ಗನ್ ಹೌಸ್ ಗೆ ಮರುಜೀವ ನೀಡಲಾಗುತ್ತಿದ್ದು, ಗನ್ ಹೌಸ್, ಬಿಲ್ಡಿಂಗ್ ಇಂಪಿರಿಯಲ್ ಹೋಟೆಲ್ ಆಗಿ ಪುನರ್ ಸ್ಥಾಪನೆಗೆ ಚಾಲನೆ ನೀಡಲಾಗುತ್ತಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದರು.
ನಿನ್ನೆ (ಸೆ.20) ಗನ್ ಹೌಸ್ ದುರಸ್ತಿ ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಅವರು, ಈ ಗನ್ ಹೌಸ್ ಅನ್ನು ಪ್ರತಿಷ್ಠಿತ ಹೋಟೆಲ್ ಉದ್ಯಮಕ್ಕೆ ತೊಡಗಿಸಬೇಕೆಂಬುದು ಶ್ರೀಕಂಠದತ್ತ ಒಡೆಯರ್ ಅವರ ಕನಸಾಗಿತ್ತು. ಅಷ್ಟೇ ಅಲ್ಲ, ಹೋಟೆಲ್ ಉದ್ಯಮ ಅವರಿಗೆ ಇಷ್ಟ. ಅವರ ಇಷ್ಟದಂತೆ ನಾನೂ ಹೋಟೆಲ್ ನಿರ್ಮಾಣಕ್ಕೆ ಮುಂದಾಗಿದ್ದೀನಿ.
ಹೋಟೆಲ್ ಪರವಾನಿಗೆಯು ನನ್ನ ಹೆಸರಿನಲ್ಲಿಯೇ ಇರಲಿದೆ. ಇದರಿಂದ ಜನರಿಗೆ ಒಂದಷ್ಟು ಅನುಕೂಲವಾಗಲಿದೆ ಎಂದರು. ಇದರ ಮೂಲ ಕಟ್ಟಡಕ್ಕೆ ಯಾವುದೇ ಹಾನಿ ಉಂಟು ಮಾಡದೆ ಕಟ್ಟಡವನ್ನು ದುರಸ್ಥಿ ಮಾಡಲಾಗುತ್ತದೆ. ಕಟ್ಟಡದ ಸುತ್ತ-ಮುತ್ತ ಅನುಕೂಲಕ್ಕೆ ತಕ್ಕಂತೆ ಟೆಂಟ್ ನಿರ್ಮಾಣ ಮಾಡಲಾಗುತ್ತದೆ.

ಜತೆಗೆ ಹಿಂದಿನ ಗತವೈಭವ ಮರುಕಳಿಸುವಂತೆ ಕಟ್ಟಡದ ನಿರ್ಮಾಣಕ್ಕೆ ಪ್ರಯತ್ನ ಮಾಡಲಾಗುತ್ತದೆ ಎಂದು ಪ್ರಮೋದಾದೇವಿ ಒಡೆಯರ್ ತಿಳಿಸಿದರು. ಮೈಸೂರಿಗೆ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೋಟೆಲ್ ಆರಂಭಿಸಲಾಗುವುದು.
ಮುಖ್ಯವಾಗಿ ದಸರಾ ಸಂದರ್ಭದಲ್ಲಿ ಬಂದು ಹೋಗುವವರಿಗೆ ಯಾವುದೇ ಅನಾನುಕೂಲವಾಗಬಾರದು. ಪ್ರಸ್ತುತ ಸುನಂದ ಗಿರೀಶ್ ಎಂಬುವವರಿಂದ ಹೋಟೆಲ್ ನಿರ್ಮಾಣ ಮಾಡಲಾಗುತ್ತಿದ್ದು, ಅದು ಮಲ್ಟಿ ಕ್ಯುಸಿನ್ ಹೋಟೆಲ್ ಆಗಲಿದೆ. ಕಟ್ಟಡದ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಖಾಸಗಿ ಸಂಸ್ಥೆಯಿಂದ ಕಾಮಗಾರಿ ನಡೆಯಲಿದೆ.
ಇನ್ನು 3 ತಿಂಗಳಲ್ಲಿ ಈ ಹೋಟೆಲ್ ತಲೆ ಎತ್ತಲಿದ್ದು, ಈಗಾಗಲೇ ಜಾಗ ಬಾಡಿಗೆ ಪಡೆದು ಕಾಮಗಾರಿ ಆರಂಭ ಮಾಡಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications