ಸೋಮವಾರ ಜಂಬೂ ಸವಾರಿ, ನವರಾತ್ರಿಗೆ ತೆರೆ
ಮೈಸೂರು, ಅ.14 : ವಿಶ್ವವಿಖ್ಯಾತ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಿದ್ಧತೆ ಪ್ರಾರಂಭವಾಗಿದೆ. ಸೋಮವಾರ ಮಧ್ಯಾಹ್ನ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ.
ಅರಮನೆಯಿಂದ ಬನ್ನಿಮಂಟಪದವರೆಗಿನ 5 ಕಿ.ಮೀ. ಜಂಬೂ ಸವಾರಿ ನೋಡಲು ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಆಗಮಿಸಿದ್ದಾರೆ. ಎರಡನೇ ಬಾರಿ ಅರ್ಜುನ 750 ಕೆ.ಜಿ.ತೂಕದ ಅಂಬಾರಿ ಹೊತ್ತು, ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿದ್ದಾನೆ.

ಮಧ್ಯಾಹ್ನ 1.12 ರಿಂದ 1.40ರೊಳಗೆ ಸಲ್ಲುವ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.ಅರಮನೆಯಲ್ಲಿ ಜಂಬೂ ಸವಾರಿಯ ಅಂತಿಮ ಸಿದ್ಧತೆಗಳು ಪ್ರಾರಂಭವಾಗಿವೆ.
ಅಂಬಾರಿ ಹೊತ್ತು ಸಾಗುವ ಅರ್ಜುನನಿಗೆ ಕುಮ್ಕಿ ಆನೆಗಳಾದ ಸರಳಾ, ವರಲಕ್ಷ್ಮೀ ಸಾಥ್ ನೀಡಲಿವೆ. ಅಭಿಮನ್ಯು, ಕರ್ನಾಟಕ ಪೊಲೀಸ್ ಬ್ಯಾಂಡ್ ಇರುವ ಆನೆಗಾಡಿಯನ್ನು ಎಳೆಯಲಿದ್ದಾನೆ. ನಿಶಾನೆ ಆನೆ ಹಿಂದಿನ ನೌಪತ್ ಆನೆಯಾಗಿ ಶ್ರೀರಾಮ ಅಥವಾ ಗಜೇಂದ್ರ ಸಾಗಲಿವೆ.
ಜಂಬೂ ಸವಾರಿ ಮೆರವಣಿಗೆಯಲ್ಲಿ 42 ಟ್ಯಾಬ್ಲೊಗಳು, 60ಕ್ಕೂ ಹೆಚ್ಚಿನ ಕಲಾತಂಡಗಳು ಸೇರಿದಂತೆ 117ಕ್ಕೂ ಅಧಿಕ ವಿವಿಧ ತಂಡಗಳು ಪಾಲ್ಗೊಳ್ಳಲಿವೆ. ಜಂಬೂ ಸವಾರಿಯ ನಂತರ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯಿತಿನೊಂದಿಗೆ ದಸರಾಕ್ಕೆ ಅಧಿಕೃತವಾಗಿ ತೆರೆ ಬೀಳಲಿದೆ.
ಪಂಜಿನ ಕವಾಯಿತಿನಲ್ಲಿ ಈ ಬಾರಿ ಸೇನೆಯ ಯೋಧರು ಟೆಂಟ್ ಪಿಗ್ಗಿಂಗ್ ನಡೆಸಿ ಕೊಡಲಿದ್ದಾರೆ. ಅಲ್ಲದೆ, ಸೇನೆಯ ವೈಟ್ ಹಾರ್ಸ್ ತಂಡ ಬೈಕ್ ಸಾಹಸ ಪ್ರದರ್ಶನವಿದೆ. ಸಂಜೆ 7 ಗಂಟೆಗೆ ನಡೆಯುವ ಈ ಕಾರ್ಯಕ್ರಮಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅತ್ಯುತ್ತಮ ಟ್ಯಾಬ್ಲೊಗೆ 10 ಸಾವಿರ ರೂ.ಬಹುಮಾನ ನೀಡಲಾಗುತ್ತದೆ. ಆರು ವಿಭಾಗಗಳ ಪೈಕಿ ಉತ್ತಮ ಟ್ಯಾಬ್ಲೊಗೆ ತಲಾ ಪ್ರಥಮ, ಇಲಾಖಾ ವಿಭಾಗದಲ್ಲಿ ಎರಡು ಬಹುಮಾನಗಳಿದ್ದು, ಒಟ್ಟು ಬಹುಮಾನ ವೆಚ್ಚ 80 ಸಾವಿರ ರೂ.ಆಗಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications