ಸೋಮವಾರ ಜಂಬೂ ಸವಾರಿ, ನವರಾತ್ರಿಗೆ ತೆರೆ
ಮೈಸೂರು, ಅ.14 : ವಿಶ್ವವಿಖ್ಯಾತ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಿದ್ಧತೆ ಪ್ರಾರಂಭವಾಗಿದೆ. ಸೋಮವಾರ ಮಧ್ಯಾಹ್ನ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ.
ಅರಮನೆಯಿಂದ ಬನ್ನಿಮಂಟಪದವರೆಗಿನ 5 ಕಿ.ಮೀ. ಜಂಬೂ ಸವಾರಿ ನೋಡಲು ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಆಗಮಿಸಿದ್ದಾರೆ. ಎರಡನೇ ಬಾರಿ ಅರ್ಜುನ 750 ಕೆ.ಜಿ.ತೂಕದ ಅಂಬಾರಿ ಹೊತ್ತು, ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿದ್ದಾನೆ.

ಮಧ್ಯಾಹ್ನ 1.12 ರಿಂದ 1.40ರೊಳಗೆ ಸಲ್ಲುವ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.ಅರಮನೆಯಲ್ಲಿ ಜಂಬೂ ಸವಾರಿಯ ಅಂತಿಮ ಸಿದ್ಧತೆಗಳು ಪ್ರಾರಂಭವಾಗಿವೆ.
ಅಂಬಾರಿ ಹೊತ್ತು ಸಾಗುವ ಅರ್ಜುನನಿಗೆ ಕುಮ್ಕಿ ಆನೆಗಳಾದ ಸರಳಾ, ವರಲಕ್ಷ್ಮೀ ಸಾಥ್ ನೀಡಲಿವೆ. ಅಭಿಮನ್ಯು, ಕರ್ನಾಟಕ ಪೊಲೀಸ್ ಬ್ಯಾಂಡ್ ಇರುವ ಆನೆಗಾಡಿಯನ್ನು ಎಳೆಯಲಿದ್ದಾನೆ. ನಿಶಾನೆ ಆನೆ ಹಿಂದಿನ ನೌಪತ್ ಆನೆಯಾಗಿ ಶ್ರೀರಾಮ ಅಥವಾ ಗಜೇಂದ್ರ ಸಾಗಲಿವೆ.
ಜಂಬೂ ಸವಾರಿ ಮೆರವಣಿಗೆಯಲ್ಲಿ 42 ಟ್ಯಾಬ್ಲೊಗಳು, 60ಕ್ಕೂ ಹೆಚ್ಚಿನ ಕಲಾತಂಡಗಳು ಸೇರಿದಂತೆ 117ಕ್ಕೂ ಅಧಿಕ ವಿವಿಧ ತಂಡಗಳು ಪಾಲ್ಗೊಳ್ಳಲಿವೆ. ಜಂಬೂ ಸವಾರಿಯ ನಂತರ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯಿತಿನೊಂದಿಗೆ ದಸರಾಕ್ಕೆ ಅಧಿಕೃತವಾಗಿ ತೆರೆ ಬೀಳಲಿದೆ.
ಪಂಜಿನ ಕವಾಯಿತಿನಲ್ಲಿ ಈ ಬಾರಿ ಸೇನೆಯ ಯೋಧರು ಟೆಂಟ್ ಪಿಗ್ಗಿಂಗ್ ನಡೆಸಿ ಕೊಡಲಿದ್ದಾರೆ. ಅಲ್ಲದೆ, ಸೇನೆಯ ವೈಟ್ ಹಾರ್ಸ್ ತಂಡ ಬೈಕ್ ಸಾಹಸ ಪ್ರದರ್ಶನವಿದೆ. ಸಂಜೆ 7 ಗಂಟೆಗೆ ನಡೆಯುವ ಈ ಕಾರ್ಯಕ್ರಮಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅತ್ಯುತ್ತಮ ಟ್ಯಾಬ್ಲೊಗೆ 10 ಸಾವಿರ ರೂ.ಬಹುಮಾನ ನೀಡಲಾಗುತ್ತದೆ. ಆರು ವಿಭಾಗಗಳ ಪೈಕಿ ಉತ್ತಮ ಟ್ಯಾಬ್ಲೊಗೆ ತಲಾ ಪ್ರಥಮ, ಇಲಾಖಾ ವಿಭಾಗದಲ್ಲಿ ಎರಡು ಬಹುಮಾನಗಳಿದ್ದು, ಒಟ್ಟು ಬಹುಮಾನ ವೆಚ್ಚ 80 ಸಾವಿರ ರೂ.ಆಗಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications