ಮೈಸೂರಿನ ಕಲಾಮಂದಿರದಲ್ಲಿ ತಲೆಎತ್ತಲಿದೆ ಹೆರಿಟೇಜ್ ಪಾರ್ಕ್
ಮೈಸೂರು, ಮೇ 29: ಮೈಸೂರು ಸಾಂಸ್ಕೃತಿಕ, ಹಾಗೆಯೇ ಅರಮನೆ ನಗರಿ. ಇಲ್ಲಿ ಸಾಹಿತ್ಯ, ಕಲೆ, ಸಂಸ್ಕೃತಿ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು ಮೈಸೂರಿನ ಕಲಾಮಂದಿರ. ಈಗ ಈ ಕಲಾಮಂದಿರವನ್ನು ಮತ್ತಷ್ಟು ಸುಂದರಗೊಳಿಸಲು ಪಕ್ಕದಲ್ಲಿ ಉದ್ಯಾನವನವನ್ನು ರೂಪಿಸುವ ಕಾರ್ಯಕ್ಕೆ ಭರಪೂರ ತಯಾರಿ ನಡೆಯುತ್ತಿದೆ.
ಭಾರತೀಯ ನೋಟು ಮುದ್ರಣಾಲಯದ ಸಿಎಸ್ಆರ್ ಅನುದಾನದಡಿ ಕಲಾಮಂದಿರದ ಆವರಣವನ್ನು ಸುಂದರ ಜಾಗವನ್ನಾಗಿ ಪರಿವರ್ತಿಸಲು ಪೂರ್ವ ತಯಾರಿ ನಡೆಯುತ್ತಿದೆ. ಕಲಾಮಂದಿರದ ಆವರಣವನ್ನು ಜನಾಕರ್ಷಣೆಯ ಕೇಂದ್ರವಾಗಿ ರೂಪಾಂತರಗೊಳಿಸುವ ಕಾರ್ಯ ಸಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಭಾರತ ನೋಟು ಮುದ್ರಣಾಲಯ ನೀಡಿದ ಮೊದಲ ಹಂತದ ಸಿಎಸ್ಆರ್ ಅನುದಾನ 20 ಲಕ್ಷ ರೂಪಾಯಿ ಹಣದಲ್ಲಿ ಕಲಾಮಂದಿರದ ಆವರಣವನ್ನು ಅಭಿವೃದ್ಧಿ ಮಾಡುವ ಕಾರ್ಯ ಆರಂಭಿಸಿದೆ. ಇದರೊಟ್ಟಿಗೆ ಕೃತಕ ಜಲಪಾತವನ್ನು ನಿರ್ಮಿಸಲು ತಯಾರಿ ನಡೆಯುತ್ತಿದೆ.

ಸಿಎಸ್ಆರ್ ಅನುದಾನದಲ್ಲಿ 41 ಲಕ್ಷ ರೂಪಾಯಿಗಳನ್ನು ಈಗಾಗಲೇ ಈ ಉದ್ಯಾನವನದ ನಿರ್ಮಾಣಕ್ಕೆ ನೀಡಲಾಗಿದೆ. ಈ ಹಣದಲ್ಲಿ ಕಲಾಮಂದಿರದ ಎದುರಿನ ಉದ್ಯಾನವನ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹನೂರು ಚನ್ನಪ್ಪ ಅವರು, ಕಲಾಮಂದಿರದ ಉದ್ಯಾನವನ್ನು ಪಾರಂಪರಿಕ ಉದ್ಯಾನವನವನ್ನಾಗಿಸುವ ಗುರಿಯನ್ನು ಹೊಂದಿದ್ದಾರೆ.
ಈ ಉದ್ಯಾನವನ ನಿರ್ಮಾಣವಾದರೆ ಕಲಾಮಂದಿರದ ಆವರಣ ಹಸಿರಿನಿಂದ ನಳನಳಿಸುತ್ತದೆ. ಉದ್ಯಾನವನ ಡ್ರೈ ಗಾರ್ಡನ್ ವಿನ್ಯಾಸದಲ್ಲಿದೆ. ಉದ್ಯಾನದ ಮಧ್ಯಭಾಗದಲ್ಲಿ ಕಲ್ಲಿನಿಂದ ವಿನ್ಯಾಸಗೊಳಿಸಲಾಗುತ್ತದೆ. ಕಲಾಮಂದಿರ ಪ್ರವೇಶಿಸುವವರಿಗೆ ಮುಂದಿನ ದಿನಗಳಲ್ಲಿ ಸಂಗೀತವೂ ಜೊತೆಯಾಗಲಿದೆ.
ಭಾರತ ನೋಟು ಮುದ್ರಣಾಲಯ ಕಲಾಮಂದಿರ ಆವರಣ ಮತ್ತು ಉದ್ಯಾನವನ ಅಭಿವೃದ್ಧಿಗೆ ಒಟ್ಟು 61 ಲಕ್ಷ ರೂಗಳ ನೆರವು ನೀಡಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಜೊತೆಗೆ ಕಲಾಮಂದಿರದ ಒಳಾಂಗಣವನ್ನು ಉನ್ನತೀಕರಣ ಮಾಡಲು, ಶೌಚಾಲಯ, ಆಧುನೀಕರಣ ವ್ಯವಸ್ಥೆಗಳು ಮತ್ತು ಮಳೆ ನೀರಿನ ಕೊಯ್ಲು ಅಳವಡಿಸಿಕೊಳ್ಳಲು ಅನುದಾನ ನೀಡುವಂತೆಯೂ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications