ಮೈಸೂರಿನ ಕಲಾಮಂದಿರದಲ್ಲಿ ತಲೆಎತ್ತಲಿದೆ ಹೆರಿಟೇಜ್ ಪಾರ್ಕ್
ಮೈಸೂರು, ಮೇ 29: ಮೈಸೂರು ಸಾಂಸ್ಕೃತಿಕ, ಹಾಗೆಯೇ ಅರಮನೆ ನಗರಿ. ಇಲ್ಲಿ ಸಾಹಿತ್ಯ, ಕಲೆ, ಸಂಸ್ಕೃತಿ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು ಮೈಸೂರಿನ ಕಲಾಮಂದಿರ. ಈಗ ಈ ಕಲಾಮಂದಿರವನ್ನು ಮತ್ತಷ್ಟು ಸುಂದರಗೊಳಿಸಲು ಪಕ್ಕದಲ್ಲಿ ಉದ್ಯಾನವನವನ್ನು ರೂಪಿಸುವ ಕಾರ್ಯಕ್ಕೆ ಭರಪೂರ ತಯಾರಿ ನಡೆಯುತ್ತಿದೆ.
ಭಾರತೀಯ ನೋಟು ಮುದ್ರಣಾಲಯದ ಸಿಎಸ್ಆರ್ ಅನುದಾನದಡಿ ಕಲಾಮಂದಿರದ ಆವರಣವನ್ನು ಸುಂದರ ಜಾಗವನ್ನಾಗಿ ಪರಿವರ್ತಿಸಲು ಪೂರ್ವ ತಯಾರಿ ನಡೆಯುತ್ತಿದೆ. ಕಲಾಮಂದಿರದ ಆವರಣವನ್ನು ಜನಾಕರ್ಷಣೆಯ ಕೇಂದ್ರವಾಗಿ ರೂಪಾಂತರಗೊಳಿಸುವ ಕಾರ್ಯ ಸಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಭಾರತ ನೋಟು ಮುದ್ರಣಾಲಯ ನೀಡಿದ ಮೊದಲ ಹಂತದ ಸಿಎಸ್ಆರ್ ಅನುದಾನ 20 ಲಕ್ಷ ರೂಪಾಯಿ ಹಣದಲ್ಲಿ ಕಲಾಮಂದಿರದ ಆವರಣವನ್ನು ಅಭಿವೃದ್ಧಿ ಮಾಡುವ ಕಾರ್ಯ ಆರಂಭಿಸಿದೆ. ಇದರೊಟ್ಟಿಗೆ ಕೃತಕ ಜಲಪಾತವನ್ನು ನಿರ್ಮಿಸಲು ತಯಾರಿ ನಡೆಯುತ್ತಿದೆ.

ಸಿಎಸ್ಆರ್ ಅನುದಾನದಲ್ಲಿ 41 ಲಕ್ಷ ರೂಪಾಯಿಗಳನ್ನು ಈಗಾಗಲೇ ಈ ಉದ್ಯಾನವನದ ನಿರ್ಮಾಣಕ್ಕೆ ನೀಡಲಾಗಿದೆ. ಈ ಹಣದಲ್ಲಿ ಕಲಾಮಂದಿರದ ಎದುರಿನ ಉದ್ಯಾನವನ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹನೂರು ಚನ್ನಪ್ಪ ಅವರು, ಕಲಾಮಂದಿರದ ಉದ್ಯಾನವನ್ನು ಪಾರಂಪರಿಕ ಉದ್ಯಾನವನವನ್ನಾಗಿಸುವ ಗುರಿಯನ್ನು ಹೊಂದಿದ್ದಾರೆ.
ಈ ಉದ್ಯಾನವನ ನಿರ್ಮಾಣವಾದರೆ ಕಲಾಮಂದಿರದ ಆವರಣ ಹಸಿರಿನಿಂದ ನಳನಳಿಸುತ್ತದೆ. ಉದ್ಯಾನವನ ಡ್ರೈ ಗಾರ್ಡನ್ ವಿನ್ಯಾಸದಲ್ಲಿದೆ. ಉದ್ಯಾನದ ಮಧ್ಯಭಾಗದಲ್ಲಿ ಕಲ್ಲಿನಿಂದ ವಿನ್ಯಾಸಗೊಳಿಸಲಾಗುತ್ತದೆ. ಕಲಾಮಂದಿರ ಪ್ರವೇಶಿಸುವವರಿಗೆ ಮುಂದಿನ ದಿನಗಳಲ್ಲಿ ಸಂಗೀತವೂ ಜೊತೆಯಾಗಲಿದೆ.
ಭಾರತ ನೋಟು ಮುದ್ರಣಾಲಯ ಕಲಾಮಂದಿರ ಆವರಣ ಮತ್ತು ಉದ್ಯಾನವನ ಅಭಿವೃದ್ಧಿಗೆ ಒಟ್ಟು 61 ಲಕ್ಷ ರೂಗಳ ನೆರವು ನೀಡಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಜೊತೆಗೆ ಕಲಾಮಂದಿರದ ಒಳಾಂಗಣವನ್ನು ಉನ್ನತೀಕರಣ ಮಾಡಲು, ಶೌಚಾಲಯ, ಆಧುನೀಕರಣ ವ್ಯವಸ್ಥೆಗಳು ಮತ್ತು ಮಳೆ ನೀರಿನ ಕೊಯ್ಲು ಅಳವಡಿಸಿಕೊಳ್ಳಲು ಅನುದಾನ ನೀಡುವಂತೆಯೂ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications