ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಮುಕ್ತ ವಿವಿಯ 95 ಸಾವಿರ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪ್ರಮಾಣ ಪತ್ರ

|
Google Oneindia Kannada News

ಮೈಸೂರು, ಜುಲೈ 13: ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಓದಿದ್ದ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪದವಿ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಉಚ್ಚ ನ್ಯಾಯಾಲಯ ಆದೇಶಿಸಿದೆ. ಯುಜಿಸಿ ಮಾನ್ಯತೆ ರದ್ದಾಗಿದ್ದ ಹಿನ್ನೆಲೆಯಲ್ಲಿ 2013ರಿಂದ 2018ರವರೆಗೆ ಪರೀಕ್ಷೆ ಬರೆದವರ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ತಡೆಹಿಡಿಯಲಾಗಿತ್ತು. ಆದ್ದರಿಂದ 95 ಸಾವಿರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು.

 ಕರಾಮುವಿ 2019-20ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭ ಕರಾಮುವಿ 2019-20ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭ

ಡಿ. ಶಿವಲಿಂಗಯ್ಯ ಅವರು ವಿವಿ ಕುಲಪತಿಯಾಗಿದ್ದ ಸಂದರ್ಭ, ಯುಜಿಸಿ ಮಾನ್ಯತೆ ನವೀಕರಣಕ್ಕೆ ಸಾಕಷ್ಟು ಶ್ರಮ ವಹಿಸಿದ್ದರು. ಇತ್ತೀಚೆಗೆ ಈ ಸ್ಥಾನಕ್ಕೆ ನೇಮಕಗೊಂಡ ಡಾ. ವಿದ್ಯಾಶಂಕರ್ ಕೂಡ ಈ ನಿಟ್ಟಿನಲ್ಲಿ ಮುತುವರ್ಜಿ ವಹಿಸಿದ್ದರು.

High court ordered to KSOU give marks card for 95,000 students

ರಾಜ್ಯ ಉಚ್ಚ ನ್ಯಾಯಾಲಯವು ತಾತ್ಕಾಲಿಕ ಪದವಿ ಪ್ರಮಾಣ ಪತ್ರ ನೀಡಲು ಕೆಎಸ್ಒಯುಗೆ ನಿರ್ದೇಶನ ನೀಡಿದೆ. ಈ ಮೂಲಕ ಯುಜಿಸಿ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಕೆಎಸ್ಒಯು ಮೊದಲ ಹೆಜ್ಜೆ ಇಟ್ಟಿದೆ. ಅದಕ್ಕಾಗಿ ಕುಲಪತಿ ವಿದ್ಯಾಶಂಕರ ಅವರಿಗೆ ಅಭಿನಂದನೆ ಸಲ್ಲಿಸಿರುವುದಾಗಿ ಸಂಸದ ಪ್ರತಾಪ್ ಸಿಂಹ ಟ್ವೀಟಿಸಿದ್ದಾರೆ.

English summary
High court ordered KSOU to provide temporary certificates to 95,000 students. Because of ugc accredition cancelled, the students who wrote degree and master degree exams between 2013-2018 put on hold.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X