Ganesha Chaturthi: ಪರಿಸರ ಸ್ನೇಹಿ ಗಣಪತಿಗೆ ಮೊರೆಹೋದ ಮೈಸೂರು ಜನತೆ
ಪ್ರತಿ ಬಾರಿ ಗಣೇಶ ಹಬ್ಬ ಬಂದಾಗಲೂ ಪರಿಸರದ ಕಾಳಜಿ ಬಗ್ಗೆ ಕೂಡ ಅರಿವು ಮೂಡಿಸಲಾಗುತ್ತದೆ. ಪ್ಲಾಸ್ಟರ್ ಆಫ್ ಪ್ಯಾರಿಸ್, ಅತಿಯಾದ ರಾಸಾಯನಿಕ ಬಣ್ಣ ಬಳಸಿದ ಗಣೇಶನ ಮೂರ್ತಿಗಳ ಬದಲಾಗಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಸುವಂತೆ ಮನವಿ ಮಾಡಲಾಗುತ್ತದೆ. ಮೊದಲೆಲ್ಲಾ ಬಣ್ಣ, ಬಣ್ಣದ ಗಣಪತಿಯನ್ನು ಇಷ್ಟಪಡುತ್ತಿದ್ದ ಜನ ಇದೀಗ ಪರಿಸರ ಸ್ನೇಹಿ, ಯಾವ ಕೃತಕ ಬಣ್ಣವೂ ಇಲ್ಲದ ಮಣ್ಣಿನ ಗಣಪತಿಗೆ ಮನಸೋಲುತ್ತಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೂಡ ಮಣ್ಣಿನ ಗಣಪತಿಗೆ ಡಿಮ್ಯಾಂಡ್ ಜೋರಾಗಿದ್ದು, ಬಗೆಬಗೆಯ ಮೂರ್ತಿಯನ್ನು ಖರೀದಿಸುತ್ತಿದ್ದಾರೆ. ನಗರದಲ್ಲಿ ವಿವಿಧ ಬಗೆಯ ಗೌರಿ ಗಣೇಶ ಮೂರ್ತಿಗಳು ಗಮನ ಸೆಳೆಯುತ್ತಿವೆ. ಅಯೋಧ್ಯೆ ರಾಮ, ಬೆಣ್ಣೆ ಗಣಪ, ರಾಜಸ್ತಾನಿ ಗಣಪ, ತಾಂಡವ ನೃತ್ಯದ ಕಾಲಭೈರವ ಅನೇಕ ಅವತಾರದಲ್ಲಿರುವ ಗಣೇಶ ಮೂರ್ತಿಗಳು ಭಕ್ತರನ್ನು ಆಕರ್ಷಿಸುತ್ತಿವೆ. ನಗರದ ಪ್ರಮುಖ ಬೀದಿಗಳಲ್ಲಿ ಗಣಪತಿ ಮೂರ್ತಿಯನ್ನು ಸಾಲುಸಾಲಾಗಿ ಜೋಡಿಸಿ ಮಾರಾಟ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ಎಲ್ಲವೂ ದುಬಾರಿ ಜನರ ಜೇಬಿಗೆ ಕತ್ತರಿ
ಇನ್ನು ಹಬ್ಬದ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಏಲಕ್ಕಿ ಬಾಳೆ ಕೆಜಿಗೆ 100 ರಿಂದ 120 ರೂಪಾಯಿಗಳವರೆಗೆ ಮಾರಾಟವಾಯಿತು. ಸೇಬು, ಮೂಸಂಬಿ, ದಾಳಿಂಬೆ, ಕಿತ್ತಳೆ, ದ್ರಾಕ್ಷಿ, ಸೀತಾಲ ಸೇರಿದಂತೆ ಮೊದಲಾದ ಹಣ್ಣುಗಳ ಬೆಲೆ ಕನಿಷ್ಠ 30 ರಿಂದ 40 ರೂಪಾಯಿವರೆಗೆ ಏರಿಕೆಯಾಗಿದೆ.
ಹಬ್ಬದ ಹಿನ್ನಲೆಯಲ್ಲಿ ಜನ ಬೆಲೆ ಏರಿಕೆ ನಡುವೆಯೂ ಖರೀದಿ ಮಾಡಿದರು. ದೇವರಾಜ ಮಾರುಕಟ್ಟೆ ಸೇರಿ ಹಲವು ಮಾರುಕಟ್ಟೆಗಳಲ್ಲಿ ಜನ ಸಂದಣಿ ಹೆಚ್ಚಾಗಿತ್ತು. ಗಣಪನ ನೆಚ್ಚಿನ ಗರಿಕೆ, ಬೇಲದ ಹಣ್ಣು, ಎಕ್ಕದ ಹೂವಿನ ಹಾರಕ್ಕೆ ಬೇಡಿಕೆ ಹೆಚ್ಚಾಗಿತ್ತು. ಬಾಳೆಕಂಬ, ಹೂವಿನ ಹಾರದ ಮಾರಾಟ ಕೂಡ ಜೋರಾಗಿತ್ತು.
ಹಬ್ಬದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೂ ಜನ ಮುಗಿಬಿದ್ದರು. ಪ್ರಭಾ, ಒಲಂಪಿಯಾ ಚಿತ್ರಮಂದಿರದ ಬಳಿ, ಸಯ್ಯಾಜಿರಾವ್ ರಸ್ತೆ, ಗಾಂಧಿ ವೃತ್ತ, ಅಗ್ರಹಾರ, ದೇವರಾಜ ಅರಸು ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಬಟ್ಟೆ ಅಂಗಡಿಗಳಲ್ಲಿ ಗ್ರಾಹಕರು ತುಂಬಿದ್ದರು.
ನಾಡಹಬ್ಬ ದಸರಾಗೆ ಭರ್ಜರಿ ತಯಾರಿ ನಡುವೆಯೂ ಮೈಸೂರು ಜನತೆ ಗೌರಿ ಗಣೇಶ ಹಬ್ಬವನ್ನು ಆಚರಿಸುವ ಮೂಲಕ ಖುಷಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಜಂಬೂ ಸವಾರಿ ಆನೆಗಳು ಈಗಾಗಲೇ ಮೈಸೂರಿಗೆ ಬಂದಿದ್ದು ತಾಲೀಮು ನಡೆಸುತ್ತಿವೆ. ಇದು ಮೈಸೂರು ಜನರ ಹಬ್ಬದ ಖುಷಿಯನ್ನು ಡಬಲ್ ಮಾಡಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications