ದೇವಾಲಯದ ಪ್ರಸಾದದಲ್ಲಿ ವಿಷ ಹೆಚ್ಚಿನ ಪ್ರಮಾಣದಲ್ಲಿ ಬೆರೆಸಿದ್ದಾರೆ: ವೈದ್ಯಾಧಿಕಾರಿ
ಮೈಸೂರು, ಡಿಸೆಂಬರ್ 16: ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ ಸಾವನ್ನಪ್ಪುತ್ತಿರುವ ಸಂಖ್ಯೆ ಏರುತ್ತಲೇ ಇದ್ದು, ಪ್ರಸಾದದಲ್ಲಿ ರೋಗರ್ ಎಂಬ ಕ್ರಿಮಿನಾಶಕ ಪತ್ತೆಯಾಗಿರುವುದು ತಿಳಿದುಬಂದಿದೆ.
ಕಳೆದೆರಡು ದಿನಗಳಿಂದಲೂ ನಗರದ ಹಲವು ಆಸ್ಪತ್ರೆಗಳಲ್ಲಿ 100ಕ್ಕೂಹೆಚ್ಚು ಜನರಿಗೆ ವೈದ್ಯರು ಆಟ್ರೊಪೈನ್ ಸಲ್ಫೇಟ್ ಎಂಬ ಔಷಧಿ ನೀಡಿದ್ದರು. ಅವರೆಲ್ಲರೂ ಸದ್ಯ ಚಿಕಿತ್ಸೆಗೆ ಒಗ್ಗಿಕೊಳ್ಳುತ್ತಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಈ ಆಟ್ರೊಪೈನ್ ಸಲ್ಫೇಟ್ ಎಂಬ ಔಷಧಿಯನ್ನು ಆರ್ಗನೊ ಫಾಸ್ಪರಸ್ ಹೆಸರಿನ ಅಂಶದ ಸೇವನೆ ಮಾಡಿದವರಿಗೆ ನೀಡುತ್ತಾರೆ. ಮೈಸೂರಿನ ಹಲವು ಆಸ್ಪತ್ರೆಯಲ್ಲಿ ಈಗಾಗಲೇ ಕೆಲವರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಚಿಕಿತ್ಸೆ ನೀಡುವಾಗ ಹೊಟ್ಟೆಯಲ್ಲಿರುವ ರಾಸಾಯನಿಕಗಳನ್ನು ತೆಗೆದಿರುವುದರಿಂದ ಮೇಲ್ನೋಟಕ್ಕೆ ಯಾವ ರಾಸಾಯನಿಕದಿಂದ ಸಾವು ಸಂಭವಿಸಿದೆ ಎಂದು ಹೇಳುವುದು ಬಹಳ ಕಷ್ಟ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸುತ್ತಾರೆ.

ಅಸ್ವಸ್ಥರಿಗೆ ನೀಡಲಾಗಿರುವ ಆಟ್ರೊಪೈನ್ ಸಲ್ಫೇಟ್ ಔಷಧದಿಂದ ಕನಿಷ್ಠ 3 ದಿನಗಳ ಕಾಲ ಮಂಪರು ಕವಿದಿರುತ್ತದೆ. ಈ ಸಮಯದಲ್ಲಿ ಕೆಲವರು ಮನಸ್ಸಿನ ಮೇಲೆ ನಿಯಂತ್ರಣ ಕಳೆದುಕೊಳ್ಳುತ್ತಾರೆ. ಹೀಗಾಗಿ, ಮೂರು ದಿನಗಳ ಕಾಲ ಅವರು ನೀಡುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೆ.ಆರ್.ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಜೇಶ್ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ರೋಗರ್ ಅನ್ನು ಒಂದು ಬಾಟಲ್ ನಷ್ಟು ಬೆರೆಸಿದರೆ ಇಷ್ಟೊಂದು ಮಂದಿ ಅಸ್ವಸ್ಥರಾಗುತ್ತಿರಲಿಲ್ಲ. ಹೆಚ್ಚಿನ ಪ್ರಮಾಣದಲ್ಲಿಯೇ ಬೆರೆಸಿದ್ದಾರೆಂಬುದು ಇಲ್ಲಿ ಸ್ಪಷ್ಟವಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications