ಮೈಸೂರಿನಲ್ಲಿ ವಿವಿ ಪ್ಯಾಟ್ ಗೆ ಎದುರಾಗಿದೆ ಬಿಸಿಲ ಸಮಸ್ಯೆ!
ಮೈಸೂರು, ಏಪ್ರಿಲ್ 17: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಮತದಾನದಲ್ಲಿ ಬಳಕೆಯಾಗುತ್ತಿರುವ ವಿವಿ ಪ್ಯಾಟ್ , ಮತ ಖಾತರಿ ಯಂತ್ರಕ್ಕೆ ರಾಜ್ಯದಲ್ಲಿ ಏರುತ್ತಿರುವ ಬಿಸಿಲು ಸವಾಲಾಗಿದೆ. ಇದು ಸಿಬ್ಬಂದಿಗೆ ಚಿಂತೆಗೀಡು ಮಾಡುವಂತೆ ಮಾಡಿದೆ.
ಹೌದು, ವಿದ್ಯುನ್ಮಾನ ಮತ ಯಂತ್ರದ ಜತೆಗೆ ವಿವಿ ಪ್ಯಾಟ್ ಯಂತ್ರ ಸಹ ಅಳವಡಿಸಲಾಗಿದೆ. ಸೆನ್ಸಾರ್ ನಿಂದ ಕೆಲಸ ಮಾಡುವ ಈ ಯಂತ್ರವನ್ನು ತಂಪಾದ ಸ್ಥಳದಲ್ಲಿಯೇ ಇಡಬೇಕು. ಬಿಸಿಲು ಹೆಚ್ಚಾದ ಪ್ರದೇಶಗಳಲ್ಲಿ ಯಂತ್ರವನ್ನು ಸಂರಕ್ಷಿಸುವುದು ಹೇಗೆ ಎಂಬ ಪ್ರಶ್ನೆ ಮತಗಟ್ಟೆಯ ಸಿಬ್ಬಂದಿಗೆ ಕಾಡುತ್ತಿದೆ.
ಇವಿಎಂನಲ್ಲಿ ಮತ ಚಲಾವಣೆಯಾದ 7 ಸೆಕೆಂಡ್ ಒಳಗಾಗಿ ಮತ ಪಡೆದ ಅಭ್ಯರ್ಥಿ ವಿವರ ವಿವಿ ಪ್ಯಾಟ್ ಯಂತ್ರದ ಗಾಜಿನ ಪೆಟ್ಟಿಗೆಯಲ್ಲಿ ಕಾಣಿಸುತ್ತದೆ. ಈ ವಿವರವನ್ನು ಒಳಗೊಂಡ ಚೀಟಿ ಪ್ರತ್ಯೇಕ ಪೆಟ್ಟಿಗೆಯಲ್ಲಿ ಬೀಳುತ್ತದೆ. ಉಷ್ಣಾಂಶ ಹೆಚ್ಚಾದ ಪಕ್ಷದಲ್ಲಿ ಇದು ಕಾರ್ಯನಿರ್ವಹಿಸುವುದು ಅನುಮಾನ ಎನ್ನುತ್ತಾರೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು.

ಸೂಕ್ಷ್ಮ ಯಂತ್ರವಾಗಿರುವ ವಿವಿ ಪ್ಯಾಟ್ ಅನ್ನು ಮತಗಟ್ಟೆಯಲ್ಲಿ ಹೆಚ್ಚು ಶಾಖ, ಬೆಳಕು ಇರುವ ಜಾಗದಲ್ಲಿ ಇಡಬಾರದು ಎಂದು ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಗೆ ಹೊರಟ ಸಿಬ್ಬಂದಿಗಳಿಗೆ ಸೂಚನೆ ನೀಡಲಾಯಿತು. ಮೈಸೂರಿನ ಅನೇಕ ಭಾಗಗಳಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಹೆಚ್ಚು ಬಿಸಿಲು ಉಂಟಾದರೆ ಏನು ಮಾಡುವುದು ಎಂಬ ಸಮಸ್ಯೆ ಕಾಡಿದೆ.
ಬೆಳಗ್ಗೆ 11 ರಿಂದ ಮಧ್ಯಾಹ್ನ 3.30ರ ಅವಧಿಯಲ್ಲಿ ಹೆಚ್ಚು ಬಿಸಿಲಿದ್ದರೆ ವಿವಿ ಪ್ಯಾಟ್ ಕೈಕೊಡುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ಸಮಯದಲ್ಲಿ ಉಷ್ಣಾಂಶ ಹೆಚ್ಚಾಗಿರುವುದೇ ಇದಕ್ಕೆ ಕಾರಣ. ಇಂದಿನ ಉಷ್ಣಾಂಶದ 34 ಡಿಗ್ರಿ ಸೆಲ್ಸಿಯಸ್ ಇದೆ. 38 - 40 ಡಿಗ್ರಿಗಿಂತ ತಾಪಮಾನ ಹೆಚ್ಚಾದರೆ ವಿವಿ ಪ್ಯಾಟ್ ಕೆಲಸದಲ್ಲಿ ಏರು - ಪೇರಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹೆಸರು ಹೇಳಲಿಚ್ಚಿಸದ ಅಧಿಕಾರಿಗಳು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications