ಮೈಸೂರಿನಲ್ಲಿ ವಿವಿ ಪ್ಯಾಟ್ ಗೆ ಎದುರಾಗಿದೆ ಬಿಸಿಲ ಸಮಸ್ಯೆ!
ಮೈಸೂರು, ಏಪ್ರಿಲ್ 17: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಮತದಾನದಲ್ಲಿ ಬಳಕೆಯಾಗುತ್ತಿರುವ ವಿವಿ ಪ್ಯಾಟ್ , ಮತ ಖಾತರಿ ಯಂತ್ರಕ್ಕೆ ರಾಜ್ಯದಲ್ಲಿ ಏರುತ್ತಿರುವ ಬಿಸಿಲು ಸವಾಲಾಗಿದೆ. ಇದು ಸಿಬ್ಬಂದಿಗೆ ಚಿಂತೆಗೀಡು ಮಾಡುವಂತೆ ಮಾಡಿದೆ.
ಹೌದು, ವಿದ್ಯುನ್ಮಾನ ಮತ ಯಂತ್ರದ ಜತೆಗೆ ವಿವಿ ಪ್ಯಾಟ್ ಯಂತ್ರ ಸಹ ಅಳವಡಿಸಲಾಗಿದೆ. ಸೆನ್ಸಾರ್ ನಿಂದ ಕೆಲಸ ಮಾಡುವ ಈ ಯಂತ್ರವನ್ನು ತಂಪಾದ ಸ್ಥಳದಲ್ಲಿಯೇ ಇಡಬೇಕು. ಬಿಸಿಲು ಹೆಚ್ಚಾದ ಪ್ರದೇಶಗಳಲ್ಲಿ ಯಂತ್ರವನ್ನು ಸಂರಕ್ಷಿಸುವುದು ಹೇಗೆ ಎಂಬ ಪ್ರಶ್ನೆ ಮತಗಟ್ಟೆಯ ಸಿಬ್ಬಂದಿಗೆ ಕಾಡುತ್ತಿದೆ.
ಇವಿಎಂನಲ್ಲಿ ಮತ ಚಲಾವಣೆಯಾದ 7 ಸೆಕೆಂಡ್ ಒಳಗಾಗಿ ಮತ ಪಡೆದ ಅಭ್ಯರ್ಥಿ ವಿವರ ವಿವಿ ಪ್ಯಾಟ್ ಯಂತ್ರದ ಗಾಜಿನ ಪೆಟ್ಟಿಗೆಯಲ್ಲಿ ಕಾಣಿಸುತ್ತದೆ. ಈ ವಿವರವನ್ನು ಒಳಗೊಂಡ ಚೀಟಿ ಪ್ರತ್ಯೇಕ ಪೆಟ್ಟಿಗೆಯಲ್ಲಿ ಬೀಳುತ್ತದೆ. ಉಷ್ಣಾಂಶ ಹೆಚ್ಚಾದ ಪಕ್ಷದಲ್ಲಿ ಇದು ಕಾರ್ಯನಿರ್ವಹಿಸುವುದು ಅನುಮಾನ ಎನ್ನುತ್ತಾರೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು.

ಸೂಕ್ಷ್ಮ ಯಂತ್ರವಾಗಿರುವ ವಿವಿ ಪ್ಯಾಟ್ ಅನ್ನು ಮತಗಟ್ಟೆಯಲ್ಲಿ ಹೆಚ್ಚು ಶಾಖ, ಬೆಳಕು ಇರುವ ಜಾಗದಲ್ಲಿ ಇಡಬಾರದು ಎಂದು ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಗೆ ಹೊರಟ ಸಿಬ್ಬಂದಿಗಳಿಗೆ ಸೂಚನೆ ನೀಡಲಾಯಿತು. ಮೈಸೂರಿನ ಅನೇಕ ಭಾಗಗಳಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಹೆಚ್ಚು ಬಿಸಿಲು ಉಂಟಾದರೆ ಏನು ಮಾಡುವುದು ಎಂಬ ಸಮಸ್ಯೆ ಕಾಡಿದೆ.
ಬೆಳಗ್ಗೆ 11 ರಿಂದ ಮಧ್ಯಾಹ್ನ 3.30ರ ಅವಧಿಯಲ್ಲಿ ಹೆಚ್ಚು ಬಿಸಿಲಿದ್ದರೆ ವಿವಿ ಪ್ಯಾಟ್ ಕೈಕೊಡುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ಸಮಯದಲ್ಲಿ ಉಷ್ಣಾಂಶ ಹೆಚ್ಚಾಗಿರುವುದೇ ಇದಕ್ಕೆ ಕಾರಣ. ಇಂದಿನ ಉಷ್ಣಾಂಶದ 34 ಡಿಗ್ರಿ ಸೆಲ್ಸಿಯಸ್ ಇದೆ. 38 - 40 ಡಿಗ್ರಿಗಿಂತ ತಾಪಮಾನ ಹೆಚ್ಚಾದರೆ ವಿವಿ ಪ್ಯಾಟ್ ಕೆಲಸದಲ್ಲಿ ಏರು - ಪೇರಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹೆಸರು ಹೇಳಲಿಚ್ಚಿಸದ ಅಧಿಕಾರಿಗಳು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications