ಹೋಳಿ ಹಬ್ಬದ ನೆಪದಲ್ಲಿ ಪುಂಡಾಟ ನಡೆಸಿದರೆ ಹುಷಾರ್!
ಮೈಸೂರು, ಮಾರ್ಚ್ 19: ಹೋಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಹೋಳಿ ಹೆಸರಿನಲ್ಲಿ ನಗರದಲ್ಲಿ ಪುಂಡಾಟ ನಡೆಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ನಗರ ಪೊಲೀಸ್ ಕಮೀಷನರ್ ಬಾಲಕೃಷ್ಣ ಎಚ್ಚರಿಸಿದ್ದಾರೆ.
ಹೋಳಿ ಹಬ್ಬವನ್ನು ಮಾ.20 ಮತ್ತು 21 ರಂದು ಆಚರಿಸಲಾಗುತ್ತಿದ್ದು, ಇದನ್ನು ಶಾಂತಿಯುತವಾಗಿ, ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದ್ದು ಒಂದು ವೇಳೆ ಹಬ್ಬದ ನೆಪದಲ್ಲಿ ಕಾನೂನು ಬಾಹಿರವಾಗಿ ನಡೆದುಕೊಂಡರೆ ಮತ್ತು ಆಚರಣೆ ಸಂಬಂಧ ಯಾವುದೇ ರೀತಿಯಲ್ಲಿ ಬಲವಂತ ಚಂದಾ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮೆರವಣಿಗೆ ಮತ್ತು ಕಾಮ ದಹನ ಸ್ಥಳದಲ್ಲಿ ರಕ್ಷಣೆಗಾಗಿ ಪ್ರಾಯೋಜಕರು, ವ್ಯವಸ್ಥಾಪಕರು ತಮ್ಮ ಸಂಘದ ಜನರನ್ನು ನೇಮಿಸಿ ಸೂಕ್ತ ಉಸ್ತುವಾರಿಯನ್ನು ನೋಡಿಕೊಳ್ಳುವುದಲ್ಲದೇ ಸೂಕ್ತ ಮುನ್ನೆಚ್ಚರಿಕೆ ವಹಿಸಿ, ಯಾವುದೇ ಬೆಂಕಿ ಅನಾಹುತಗಳು ಸಂಭವಿಸದಂತೆ ನೋಡಿಕೊಳ್ಳ ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಹತ್ತಿರದ ಪೊಲೀಸ್ ಠಾಣೆಯೊಂದಿಗೆ ಸಂಪರ್ಕವನ್ನಿಟ್ಟುಕೊಳ್ಳುವುದು ಅಗತ್ಯ.

ಕಾರ್ಯಕ್ರಮ ನಡೆಸುವ ಮತ್ತು ಮೆರವಣಿಗೆ ನಡೆಸುವ ಕುರಿತಂತೆ ಮುಂಚಿತವಾಗಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಬಾಲಕೃಷ್ಣ ಸೂಚಿಸಿದ್ದಾರೆ.
ಈ ನಡುವೆ ಚುನಾವಣಾ ನೀತಿ ಸಂಹಿತೆಯೂ ಜಾರಿಯಲ್ಲಿರುವ ಹಿನ್ನಲೆಯಲ್ಲಿ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣಿಗಳಿಗೆ ಅಥವಾ ಪೊಲೀಸ್ ಕಂಟ್ರೋಲ್ ರೂಂಗೆ ದೂರವಾಣಿ ಸಂಖ್ಯೆ 100, 2418139, 2418339ನ್ನು ಸಂಪರ್ಕಿಸಬಹುದಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications