ಮಳೆ ಆರ್ಭಟ: ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ
ಮೈಸೂರು, ಮೇ 19: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಮೇ 19ರಂದು ಒಂದು ದಿನ ಮಳೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ರಜಾ ದಿನಗಳಲ್ಲಿ ಈ ಒಂದು ದಿನದ ಕರ್ತವ್ಯವನ್ನು ನಿರ್ವಹಿಸುವ ಷರತ್ತಿಗೆ ಒಳಪಟ್ಟು ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ( ಒಂದನೇ ತರಗತಿಯಿಂದ 10 ನೇ ತರಗತಿಯವರೆಗೆ) ಈ ದಿನ ಮಾತ್ರ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ತಿಳಿಸಿದ್ದಾರೆ. ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಗುರುವಾರವೂ ಬೆಂಬಿಡದೆ ಕಾಡಿದ ವರುಣನಿಂದಾಗಿ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವವರು ಪರದಾಡುವಂತಾಯಿತು.
ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರದ ರಸ್ತೆಗಳ ಡಾಂಬರ್ ಕೊಚ್ಚಿ ಹೋಗಿ ಹಳ್ಳಬಿದ್ದಿವೆ. ಮಳೆ ನೀರು ಹರಿಯುವ ಸೇತುವೆ ಕೊಚ್ಚಿ ಹೋಗಿದ್ದು, ಕೆಲವೆಡೆ ವಿದ್ಯುತ್ ಕಂಬ ಹಾಗೂ ಮರಗಳು ಧರೆಗುರುಳಿದ ಪರಿಣಾಮ ಸಂಚಾರಕ್ಕೆ ಧಕ್ಕೆಯಾಯಿತು. ಕೆಲವೆಡೆ ಯುಜಿಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿತು. ಬುಧವಾರ ಬೆಳಗ್ಗೆಯಿಂದ ಸಂಜೆವರೆಗೂ ಸುರಿದ ಮಳೆಯಿಂದ ಸಾರ್ವಜನಿಕರ ನಿತ್ಯದ ಚಟುವಟಿಕೆಗೆ ತೊಂದರೆಯಾಯಿತು. ಗುಂಡಿ ಬಿದ್ದಿರುವ ರಸ್ತೆಗಳು ಜತೆಗೆ ಕೆಲವೆಡೆ ಮೊಳಗಳು ತುಂಬಿ ಹರಿದ ಪರಿಣಾಮ ವಾಹನ ಸವಾರರು, ಪಾದಚಾರಿಗಳು, ವ್ಯಾಪಾರಸ್ಥರು ತೊಂದರೆಗೊಳಗಾದರು.
ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ:
ಶಾರದಾದೇವಿನಗರದ ಚಾಮುಂಡೇಶ್ವರಿ ದೇವಸ್ಥಾನದ ಸುತ್ತಮುತ್ತಲಿನ ಮನೆಗಳಿಗೆ ನೀರು ನುಗ್ಗಿತು. ಪಾಲಿಕೆ ಸದಸ್ಯರು ರಾಜಕೀಯ ಕಾರಣಗಳಿಗೆ ಯುಜಿಡಿ ಕಾಮಗಾರಿ ಮಾಡಿಸದೇ ಇರುವುದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ರಾತ್ರಿಯಿಡೀ ಯುಜಿಡಿ ನೀರು ಮನೆಗೆ ನುಗ್ಗಿದ ಪರಿಣಾಮ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ರಾತ್ರಿ ತೀವ್ರ ತೊಂದರೆ ಅನುಭವಿಸಿದರು. ಮನೆ ಮಂದಿ ರಾತ್ರಿ ನಿದ್ದೆಗೆಟ್ಟು ಮನೆಯಿಂದ ನೀರನ್ನು ಹೊರ ಹಾಕುವಂತಾಯಿತು. ಜನಪ್ರತಿನಿಧಿಗಳು ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರಣ್ಯಪುರಂ 4ನೇ ಮೇನ್ 2ನೇ ಕ್ರಾಸ್ನಲ್ಲಿ ಮನೆ ಮುಂದೆ ನಿಂತಿದ್ದ ಕಾರ್ ಮೇಲೆ ಮರ ಉರುಳಿ ಬಿದ್ದು ವಾಹನ ಜಖಂಗೊಂಡಿದೆ. ನಿರಂತರ ಮಳೆ ಯಿಂದಾಗಿ ದೇವರಾಜ ಮಾರುಕಟ್ಟೆ, ಮಂಡಿ ಮಾರು ಕಟ್ಟೆ, ಎಂ.ಜಿ.ರಸ್ತೆ ಮಾರುಕಟ್ಟೆಗಳು ವ್ಯಾಪಾರಸ್ಥರು ಹಾಗೂ ಗ್ರಾಹಕರಿಲ್ಲದೆ ಭಣಗುಡುತ್ತಿದ್ದವು.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications