ಮಳೆ ಆರ್ಭಟ: ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ
ಮೈಸೂರು, ಮೇ 19: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಮೇ 19ರಂದು ಒಂದು ದಿನ ಮಳೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ರಜಾ ದಿನಗಳಲ್ಲಿ ಈ ಒಂದು ದಿನದ ಕರ್ತವ್ಯವನ್ನು ನಿರ್ವಹಿಸುವ ಷರತ್ತಿಗೆ ಒಳಪಟ್ಟು ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ( ಒಂದನೇ ತರಗತಿಯಿಂದ 10 ನೇ ತರಗತಿಯವರೆಗೆ) ಈ ದಿನ ಮಾತ್ರ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ತಿಳಿಸಿದ್ದಾರೆ. ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಗುರುವಾರವೂ ಬೆಂಬಿಡದೆ ಕಾಡಿದ ವರುಣನಿಂದಾಗಿ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವವರು ಪರದಾಡುವಂತಾಯಿತು.
ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರದ ರಸ್ತೆಗಳ ಡಾಂಬರ್ ಕೊಚ್ಚಿ ಹೋಗಿ ಹಳ್ಳಬಿದ್ದಿವೆ. ಮಳೆ ನೀರು ಹರಿಯುವ ಸೇತುವೆ ಕೊಚ್ಚಿ ಹೋಗಿದ್ದು, ಕೆಲವೆಡೆ ವಿದ್ಯುತ್ ಕಂಬ ಹಾಗೂ ಮರಗಳು ಧರೆಗುರುಳಿದ ಪರಿಣಾಮ ಸಂಚಾರಕ್ಕೆ ಧಕ್ಕೆಯಾಯಿತು. ಕೆಲವೆಡೆ ಯುಜಿಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿತು. ಬುಧವಾರ ಬೆಳಗ್ಗೆಯಿಂದ ಸಂಜೆವರೆಗೂ ಸುರಿದ ಮಳೆಯಿಂದ ಸಾರ್ವಜನಿಕರ ನಿತ್ಯದ ಚಟುವಟಿಕೆಗೆ ತೊಂದರೆಯಾಯಿತು. ಗುಂಡಿ ಬಿದ್ದಿರುವ ರಸ್ತೆಗಳು ಜತೆಗೆ ಕೆಲವೆಡೆ ಮೊಳಗಳು ತುಂಬಿ ಹರಿದ ಪರಿಣಾಮ ವಾಹನ ಸವಾರರು, ಪಾದಚಾರಿಗಳು, ವ್ಯಾಪಾರಸ್ಥರು ತೊಂದರೆಗೊಳಗಾದರು.
ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ:
ಶಾರದಾದೇವಿನಗರದ ಚಾಮುಂಡೇಶ್ವರಿ ದೇವಸ್ಥಾನದ ಸುತ್ತಮುತ್ತಲಿನ ಮನೆಗಳಿಗೆ ನೀರು ನುಗ್ಗಿತು. ಪಾಲಿಕೆ ಸದಸ್ಯರು ರಾಜಕೀಯ ಕಾರಣಗಳಿಗೆ ಯುಜಿಡಿ ಕಾಮಗಾರಿ ಮಾಡಿಸದೇ ಇರುವುದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ರಾತ್ರಿಯಿಡೀ ಯುಜಿಡಿ ನೀರು ಮನೆಗೆ ನುಗ್ಗಿದ ಪರಿಣಾಮ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ರಾತ್ರಿ ತೀವ್ರ ತೊಂದರೆ ಅನುಭವಿಸಿದರು. ಮನೆ ಮಂದಿ ರಾತ್ರಿ ನಿದ್ದೆಗೆಟ್ಟು ಮನೆಯಿಂದ ನೀರನ್ನು ಹೊರ ಹಾಕುವಂತಾಯಿತು. ಜನಪ್ರತಿನಿಧಿಗಳು ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರಣ್ಯಪುರಂ 4ನೇ ಮೇನ್ 2ನೇ ಕ್ರಾಸ್ನಲ್ಲಿ ಮನೆ ಮುಂದೆ ನಿಂತಿದ್ದ ಕಾರ್ ಮೇಲೆ ಮರ ಉರುಳಿ ಬಿದ್ದು ವಾಹನ ಜಖಂಗೊಂಡಿದೆ. ನಿರಂತರ ಮಳೆ ಯಿಂದಾಗಿ ದೇವರಾಜ ಮಾರುಕಟ್ಟೆ, ಮಂಡಿ ಮಾರು ಕಟ್ಟೆ, ಎಂ.ಜಿ.ರಸ್ತೆ ಮಾರುಕಟ್ಟೆಗಳು ವ್ಯಾಪಾರಸ್ಥರು ಹಾಗೂ ಗ್ರಾಹಕರಿಲ್ಲದೆ ಭಣಗುಡುತ್ತಿದ್ದವು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications