ಮೈಸೂರು: ಕರಾಮು ವಿವಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ
ಮೈಸೂರು, ಜೂನ್, 30: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಜುಲೈ 2ರಂದು ನಡೆಯುವ ವಿವಿಯ 18ನೇ ಘಟಿಕೋತ್ಸವದ ಗೌರವ ಡಾಕ್ಟರೇಟ್ ಪದವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರಾಮುವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ತಿಳಿಸಿದರು.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಅತಿಥಿಗೃಹ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲತಃ ಶಿಕ್ಷಕರು ಹಾಗೂ ಆದಿವಾಸಿ ಮಹಿಳೆ ಆಗಿರುವ ಕಾರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವ ಡಿ.ಲಿಟ್(ಗೌರವ ಡಾಕ್ಟರೇಟ್)ಪದವಿ ನೀಡಲು ಆಯ್ಕೆ ಮಾಡಲಾಗಿದೆ.

ಹಾಗೆಯೇ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎನ್. ರಾಮಚಂದ್ರ, ಆರೋಗ್ಯ ಕ್ಷೇತ್ರದ ಸೇವೆಯನ್ನು ಗುರುತಿಸಿ ವೆಂಕಟಲಕ್ಷ್ಮಿ ನರಸಿಂಹರಾಜು ಸೇರಿ ಒಟ್ಟು ಮೂವರು ಡಿ.ಲಿಟ್ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಗೌರವ ಡಾಕ್ಟರೇಟ್ಗೆ ಆಯ್ಕೆ ಆಗಿರುವ ವಿಷಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಿಳಿಸಲಾಗಿದೆ. ಜುಲೈ 2ರಂದು ನಡೆಯುವ ಕರಾಮು ವಿವಿ ಘಟಿಕೋತ್ಸವಕ್ಕೆ ಅವರನ್ನು ಆಹ್ವಾನಿಸಲಾಗಿದೆ. ಆ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯವರು ಬಾರದಿದ್ದರೆ, ಜುಲೈ 3ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಆ ವೇಳೆ ಬೆಂಗಳೂರಿನ ರಾಜಭವನದಲ್ಲಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಬಾರಿ ಒಬ್ಬ ಮಹಿಳೆಗೆ ರಾಜ್ಯ ಶಾಸ್ತ್ರದಲ್ಲಿ ಪಿಎಚ್ಡಿ ಪದವಿ ನೀಡಲಾಗಿದೆ. ಸ್ನಾತಕೋತ್ತರದಲ್ಲಿ 7,057 ವಿದ್ಯಾರ್ಥಿಗಳು ತೇರ್ಗಡೆಯಾದರೇ, ಸ್ನಾತಕ ಪದವಿಯಲ್ಲಿ 1,664 ಉತ್ತೀರ್ಣ ಆಗಿದ್ದಾರೆ ಎಂದು ತಿಳಿಸಿದರು.
ಇನ್ನು ಘಟಿಕೋತ್ಸವದಲ್ಲಿ ಪಿಎಚ್ಡಿ 1, ಚಿನ್ನದ ಪದಕ 44, 27 ಮಂದಿಗೆ ನಗದು ಬಹುಮಾನ ನೀಡಲಾಗುತ್ತದೆ. ಮತ್ತು 8,722 ಅಭ್ಯರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ. ಈ ಪೈಕಿ 5,241 ಮಹಿಳೆಯರು ಹಾಗೂ 3,481 ಪುರುಷರು ಅರ್ಹರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications