ರೋಗಿಗಳಿಗೆ ಆಸ್ಪತ್ರೆ ಆವರಣದಲ್ಲೇ ಬೆಳೆದ ಸಾವಯವ ಆಹಾರ
ಮೈಸೂರು, ಜ. 5: ಮೈಸೂರಿನ ಆಸ್ಪತ್ರೆಯೊಂದು ರೋಗಿಗಳಿಗೆ ಸಾವಯವ ಆಹಾರ ನೀಡಲು ಮುಂದಾಗಿರುವುದಲ್ಲದೇ ಸ್ವತಃ ತನ್ನ ಆವರಣದಲ್ಲೇ ತರಕಾರಿಗಳನ್ನು ಬೆಳೆಸಲು ಮುಂದಾಗಿದೆ.
ಭಾರತ ಕ್ಯಾನ್ಸರ್ ಆಸ್ಪತ್ರೆ ಮೈಸೂರಿನ ಹೆಬ್ಬಾಳದ 5 ರಿಂದ 6 ಎಕರೆ ಜಾಗದಲ್ಲಿ ಸಾವಯವ ಕೃಷಿ ಮಾಡಲು ಮುಂದಾಗಿದೆ. ಎರೆಹುಳು ಗೊಬ್ಬರ ಬಳಸಿ ಸಂಪೂರ್ಣ ನೈಸರ್ಗಿಕ ಕೃಷಿಯ ಮೂಲಕವೇ ಆಹಾರ ವಸ್ತುಗಳನ್ನು ಬೆಳೆಯಲು ತೀರ್ಮಾನಿಸಿದೆ.[ಮೈಸೂರಿನಲ್ಲೊಬ್ಬ ಹುಳು ಭಕ್ಷಕ 'ರಾಘವೇಂದ್ರ']

ಕೃಷ್ಣ ರಾಜ ಸಾಗರ ಅಣೆಕಟ್ಟು ಸಮೀಪದ ಜಾಗದಲ್ಲಿ ಬೀಟ್ ರೂಟ್, ಮೂಲಂಗಿ, ಕ್ಯಾರೇಟ್, ಮೆಣಸಿನಕಾಯಿ, ಸೊರೆಕಾಯಿ ಸೇರಿದಂತೆ ಎಲ್ಲ ಬಗೆಯ ತರಕಾರಿಗಳನ್ನು ಬೆಳೆಯಲಾಗುವುದು. ಇದಕ್ಕೆ ಹನಿ ನೀರಾವರಿ ಪದ್ಧತಿ ಅನುಸರಿಸಲಾಗುವುದು ಎಂದು ಆಸ್ಪತ್ರೆಯ ಕೆಪಿ ಶಿವಪ್ರಸಾದ್ ತಿಳಿಸಿದ್ದಾರೆ.
ಇದಲ್ಲದೇ ಆಸ್ಪತ್ರೆಯ ಆವರಣದಲ್ಲಿ ಮಾವು, ಹಲಸಿನ ಹಣ್ಣು, ಪಪ್ಪಾಯಿ, ಚಿಕ್ಕೋ ಸೇರಿದಂತೆ ಔಷಧಿ ಸಸ್ಯಗಳನ್ನು ಬೆಳೆಸಲಾಗುವುದು. ಸಾವಯವ ಪದ್ಧತಿಯಲ್ಲೇ ರಾಗಿ ಬೆಳೆಯುವ ಚಿಂತನೆಯೂ ಇದೆ ಎಂದು ತಿಳಿಸಿದರು.[ಮಂಗಳೂರು, ಮೈಸೂರಲ್ಲೂ ಏಪ್ರಿಲ್ 1 ರಿಂದ ಬಿಪಿಒ]
ರೋಗಿಗಳ ಉಪಹಾರ, ಊಟವನ್ನು ತಜ್ಞರ ಮಾರ್ಗದರ್ಶನದಲ್ಲಿ ಸಾವಯವ ಪದ್ಧತಿಯಲ್ಲಿ ಆವರಣದಲ್ಲೇ ಬೆಳೆದ ಪದಾರ್ಥಗಳನ್ನು ಬಳಸಿ ತಯಾರಿಸಲಾಗುವುದು. ಆಹಾರದಲ್ಲಿ ಇರಬೇಕಾದ ಕೊಬ್ಬು, ಪ್ರೋಟಿನ್ ಮತ್ತು ಜೀವಸತ್ವಗಳನ್ನು ಕಾಲಕಾಲಕ್ಕೆ ಪರಿಶಿಲನೆಗೆ ಒಳಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications