ವನಮಹೋತ್ಸವ ಸಪ್ತಾಹಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ, 1 ಲಕ್ಷಕ್ಕೂ ಹೆಚ್ಚು ಗಿಡ ನೆಡುವ ಗುರಿ
ಮೈಸೂರು, ಜೂನ್, 29: ಜಿಲ್ಲಾ ವನಮಹೋತ್ಸವ ಸಮಿತಿ ವತಿಯಿಂದ ವನಮಹೋತ್ಸವ ಸಪ್ತಾಹದ ಅಂಗವಾಗಿ ಜುಲೈ 1ರಿಂದ 7 ರವರಗೆ ಮೈಸೂರು ಜಿಲ್ಲೆಯಾದ್ಯಂತ 1 ಲಕ್ಷ 43 ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.
ಬುಧವಾರ ಸಂಜೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಗೂಗಲ್ ಮೀಟ್ ಸಭೆಯಲ್ಲಿ ಮಾತನಾಡಿದ ಅವರು, ವನಮಹೋತ್ಸವ ಸಪ್ತಾಹವನ್ನು ಜಿಲ್ಲೆಯಾದ್ಯಂತ ಸಂಘ ಸಂಸ್ಥೆಗಳ ನೆರವಿನಿಂದ ಯಶಸ್ವಿಗೊಳಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಅಲ್ಲದೆ ಇದೆ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖಾ ವತಿಯಿಂದ ನೆಡಲಾಗುವ ಗಿಡಗಳ ಸಂಖ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಜಿಲ್ಲಾ ಪಂಚಾಯಿತಿ ವತಿಯಿಂದ 1 ಲಕ್ಷ 28 ಸಾವಿರ, ಪೊಲೀಸ್ ಅಧೀಕ್ಷಕರ ಕಛೇರಿಯಿಂದ 803, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಪಿರಿಯಾಪಟ್ಟಣ 697, ಶಿಶು ಯೋಜನಾಭಿವೃದ್ದಿ ಕಛೇರಿ ಮೈಸೂರು ಗ್ರಾಮಾಂತರ ಯೋಜನೆ ವತಿಯಿಂದ 923, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 3000, ಮಹಾನಗರ ಪಾಲಿಕೆಯಿಂದ 5000 ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಗಿಡಗಳ ನೆಡಲು ಯೋಜಿಸಿರುವುದಾಗಿ ಮಾಹಿತಿ ನೀಡಿದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜು ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಸಸ್ಯ ಕ್ಷೇತ್ರಗಳಲ್ಲಿ ವಿವಿಧ ಅಳತೆಯ ಸಸ್ಯಗಳು ಲಭ್ಯವಿದ್ದು, ಸಸಿಗಳನ್ನು ರೈತರು, ಸಾರ್ವಜನಿಕರು ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದಾಗಿರುತ್ತದೆ ಎನ್ನುವ ಮಾಹಿತಿಯನ್ನು ನೀಡಿದರು.
ಅಲ್ಲದೆ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ರೈತರು ತಮ್ಮ ಜಮೀನಿನಲ್ಲಿ ನೆಡುವ ಸಸಿಗಳಿಗೆ ಮೌಲ್ಯಾಮಾಪನ ಮಾಡಿ ಬದುಕುಳಿದ ಸಸಿಗಳಿಗೆ ಮೊದಲನೇ ವರ್ಷಕ್ಕೆ 35 ರೂಪಾಯಿ, ಎರಡನೇ ವರ್ಷಕ್ಕೆ 40 ರೂ., ಹಾಗೂ ಮೂರನೇ ವರ್ಷಕ್ಕೆ 50 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಜಾಗತಿಕ ತಾಪಮಾನ ಹಾಗೂ ಪರಿಸರ ಸಂರಕ್ಷಣೆಗಾಗಿ ಎಲ್ಲರೂ ಕೈ ಜೋಡಿ೧ಸಬೇಕು ಎಂದರು. ಇನ್ನು ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications