ಸೂರ್ಯಕಾಂತಿಯ ಈ ತೋಟದಲ್ಲಿ ಸೆಲ್ಫಿ ತಗೊಳಕ್ಕೆ ಜಸ್ಟ್ 20 ರುಪೀಸ್
ಮೈಸೂರು, ಜೂನ್ 29: ಟ್ರೆಂಡ್ ನ ನೋಡಿ, ಅದರಿಂದ ಹಣ ಮಾಡುವವರನ್ನು ಬುದ್ಧಿವಂತರು ಅಂತಲೇ ಕರೆಯುತ್ತೇವೆ. ಸದ್ಯಕ್ಕಂತೂ ಎಲ್ಲೆಡೆ ಸೆಲ್ಫಿ ಬಗ್ಗೆ ವಿಪರೀತ ಆಕರ್ಷಣೆ ಇದೆ. ಅದರ ಪ್ರಯೋಜನವನ್ನು ಇಲ್ಲಿನ ರೈತರೊಬ್ಬರು ಮಾಡಿಕೊಂಡಿದ್ದಾರೆ. ತಾವು ಬೆಳೆದ ಬೆಳೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ದರ ನಿಗದಿ ಮಾಡಿದ್ದಾರೆ.
ಹೌದು, ರೈತರೊಬ್ಬರು ತಾವು ಬೆಳೆದ ಬೆಳೆ ಮುಂದೆ ಸೆಲ್ಫಿ ತೆಗೆಸಿಕೊಳ್ಳಲು ಬಯಸುವವರಿಗೆ ದರ ನಿಗದಿ ಮಾಡಿದ್ದಾರೆ ಕಣ್ರೀ. ಮುಂಗಾರು ಮಳೆ ಕೈಕೊಟ್ಟು ಬೆಳೆ ಒಣಗುತ್ತಿರುವ ಇಂತಹ ಸಂದರ್ಭದಲ್ಲಿ ಚಾಮಾರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ ಕುಮಾರ್ ಎಂಬ ರೈತರಿಗೆ ಇಂಥ ಐಡಿಯಾ ಬಂದಿದೆ.

ತಾವು ಸೂರ್ಯಕಾಂತಿ ಬೆಳೆದಿದ್ದು, ಈ ಬೆಳೆ ಸೊಂಪಾಗಿ ಬೆಳೆದು ನಿಂತಿದೆ. ತೋಟದ ತುಂಬೆಲ್ಲಾ ಸೂರ್ಯಕಾಂತಿ ಹೂವು ಅರಳಿ ನಿಂತಿದೆ. ಈ ಹೂಗಳ ಮುಂದೆ ಸೆಲ್ಫಿ ತೆಗೆದುಕೊಳ್ಳುವ ಪ್ರವಾಸಿಗರಿಗೆ ಒಂದು ಸೆಲ್ಫಿಗೆ 20 ರುಪಾಯಿ ನಿಗದಿ ಮಾಡಿದ್ದಾರೆ. ಸೆಲ್ಫಿ ಪ್ರಿಯರು ಹೆಚ್ಚಾಗಿ ಹೊಲದೊಳಗೆ ಬರುತ್ತಿರುವುದರಿಂದ ಸೂರ್ಯಕಾಂತಿ ಹೂಗಳು ಹಾಳಾಗುತ್ತಿದ್ದು, ಇದನ್ನು ಕಂಡ ರೈತರು ಒಂದು ಸೆಲ್ಫಿ ತೆಗೆದುಕೊಳ್ಳಲು 20 ರುಪಾಯಿ ದರ ನಿಗದಿ ಮಾಡಿ ಬೋರ್ಡ್ ಹಾಕಿದ್ದಾರೆ.

ಊಟಿ, ಕೇರಳ, ಮೈಸೂರಿಗೆ ಆಗಮಿಸುವ ಪ್ರವಾಸಿಗರು ಈ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದು, ರೈತರಿಗೆ ಸ್ವಲ್ಪ ಆದಾಯ ಬರುತ್ತಿದೆ. ಇಲ್ಲಿ ಪ್ರವಾಸಿಗರು ತೆಗೆದುಕೊಂಡ ಸೆಲ್ಫಿಗಳನ್ನು ತಮ್ಮ ಫೇಸ್ಬುಕ್, ವಾಟ್ಸಪ್ ನಲ್ಲಿ ಹಾಕಿ ಖುಷಿ ಪಡುತ್ತಿದ್ದು, ಈ ಜಾಗದಲ್ಲಿ ಈಗ ಎಳನೀರು, ಐಸ್ ಕ್ರೀಂ ಮಾರಾಟಗಾರರು ವ್ಯಾಪಾರ ಕೂಡ ಶುರು ಮಾಡಿದ್ದಾರೆ.

ಸೂರ್ಯಕಾಂತಿ ಬೆಳೆಯಿಂದ ನಿತ್ಯ 3 ರಿಂದ 4 ಸಾವಿರ ರುಪಾಯಿ ಹಣ ಸಂಪಾದನೆಯಾಗುತ್ತಿದೆ. ಅದು ಯುವ ಜನಾಂಗದ ಸೆಲ್ಫೀ ಕ್ರೇಜ್ ಬಳಕೆ ಮಾಡಿಕೊಂಡು. ರೈತ ಕುಮಾರ್ ಮತ್ತೊಂದು ಆದಾಯದ ಮೂಲ ಮಾಡಿಕೊಂಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications