ಮಹದೇವಪ್ರಸಾದ್ ಮೈಸೂರು ನಿವಾಸದಲ್ಲಿ ಮಡುಗಟ್ಟಿದ ಶೋಕ
ಮೈಸೂರು, ಜನವರಿ 3 : ರಾಜ್ಯದ ಸಕ್ಕರೆ ಹಾಗೂ ಸಹಕಾರ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ (58) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು, ಅವರ ಮೈಸೂರಿನ ಕುವೆಂಪುನಗರ ನಿವಾಸದಲ್ಲಿ ಶೋಕ ಮಡುಗಟ್ಟಿದೆ.
ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಸಹಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಮಹದೇವಪ್ರಸಾದ್ ಮಂಗಳವಾರ ಬೆಳಿಗ್ಗೆ 5.30ರಿಂದ 6 ಗಂಟೆಯ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎನ್ನಲಾಗುತ್ತಿದೆ. ಬೆಳಿಗ್ಗೆ 9.45 ಆದರೂ ಕಾರ್ಯಕ್ರಮಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಹೋಗಿ ನೋಡಲಾಗಿ ಅವರು ಪ್ರಜ್ಞೆ ಇಲ್ಲದೇ ಮಲಗಿದ್ದರು. ಕೂಡಲೇ ವೈದ್ಯರು ಪರಿಶೀಲಿಸಿದ್ದು ವಿಧಿವಶರಾಗಿರುವುದನ್ನು ದೃಢಪಡಿಸಿದರು.[ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ]

ಸಚಿವರು ಪತ್ನಿ ಡಾ.ಗೀತಾ, ಮಗ ಗಣೇಶ್ ಪ್ರಸಾದ್ ಮತ್ತು ಮಗಳು ಹಾಗೂ ಅಳಿಯನನ್ನು ಅಗಲಿದ್ದಾರೆ. ಅಪಾರ ಅಭಿಮಾನಿಗಳನ್ನು, ಬೆಂಬಲಿಗರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.[ವ್ಯಕ್ತಿಚಿತ್ರ : ಸಜ್ಜನ ರಾಜಕಾರಣಿ ಎಚ್ ಎಸ್ ಮಹದೇವ ಪ್ರಸಾದ್]
ಸಚಿವರ ಕುವೆಂಪುನಗರದ ನಿವಾಸದಲ್ಲಿ ಪತ್ನಿ, ಹಾಗೂ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ಅವರ ಅಪಾರ ಅಭಿಮಾನಿಗಳು, ಬೆಂಬಲಿಗರು ಮನೆ ಮುಂದೆ ಜಮಾಯಿಸಿದ್ದಾರೆ. ಎಲ್ಲೆಲ್ಲೂ ಶೋಕ ಮಡುಗಟ್ಟಿದೆ. ಸೂತಕ ಛಾಯೆ ಆವರಿಸಿದೆ. ಕುವೆಂಪು ನಗರದ ಅವರ ನಿವಾಸಕ್ಕೆ ಇದೀಗ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದ್ದು, ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಗುಂಡ್ಲುಪೇಟೆಗೆ ಕೊಂಡೊಯ್ದು ಅಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ನಿವಾಸಕ್ಕೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಕುವೆಂಪುನಗರ ಠಾಣೆಯ ಇನ್ಸಪೆಕ್ಟರ್ ಜಗದೀಶ್ ಅವರಿಗೆ ಸೂಕ್ತಭದ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದರು. ಸ್ಥಳದಲ್ಲಿ ಹುಣಸೂರು, ಪಿರಿಯಾಪಟ್ಟಣ ಶಾಸಕರು ಆಗಮಿಸಿದ್ದಾರೆ. ಪಾಲಿಕೆಯ ಸದಸ್ಯರು ಸಹ ಆಗಮಿಸಿದ್ದಾರೆ.
ಗುಂಡ್ಲುಪೇಟೆಯ ಶಾಸಕರಾಗಿದ್ದ ಮಹದೇವಪ್ರಸಾದ್ ಹಾಲಹಳ್ಳಿ ಶ್ರೀಕಾಂತ ಶೆಟ್ಟಿ ಮಹದೇವಪ್ರಸಾದ್ 1958ರ ಅಗಸ್ಟ್ 8ರಂದು ಗುಂಡ್ಲುಪೇಟೆಯಲ್ಲಿ ಜನಿಸಿದ್ದರು. ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಸಂಗಮ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದ ಇವರು ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ಉದ್ಯೋಗಮೇಳಗಳನ್ನು ಆಯೋಜಿಸಿ ಗುರುತಿಸಿಕೊಂಡಿದ್ದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications