ಮಹದೇವಪ್ರಸಾದ್ ಮೈಸೂರು ನಿವಾಸದಲ್ಲಿ ಮಡುಗಟ್ಟಿದ ಶೋಕ
ಮೈಸೂರು, ಜನವರಿ 3 : ರಾಜ್ಯದ ಸಕ್ಕರೆ ಹಾಗೂ ಸಹಕಾರ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ (58) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು, ಅವರ ಮೈಸೂರಿನ ಕುವೆಂಪುನಗರ ನಿವಾಸದಲ್ಲಿ ಶೋಕ ಮಡುಗಟ್ಟಿದೆ.
ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಸಹಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಮಹದೇವಪ್ರಸಾದ್ ಮಂಗಳವಾರ ಬೆಳಿಗ್ಗೆ 5.30ರಿಂದ 6 ಗಂಟೆಯ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎನ್ನಲಾಗುತ್ತಿದೆ. ಬೆಳಿಗ್ಗೆ 9.45 ಆದರೂ ಕಾರ್ಯಕ್ರಮಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಹೋಗಿ ನೋಡಲಾಗಿ ಅವರು ಪ್ರಜ್ಞೆ ಇಲ್ಲದೇ ಮಲಗಿದ್ದರು. ಕೂಡಲೇ ವೈದ್ಯರು ಪರಿಶೀಲಿಸಿದ್ದು ವಿಧಿವಶರಾಗಿರುವುದನ್ನು ದೃಢಪಡಿಸಿದರು.[ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ]

ಸಚಿವರು ಪತ್ನಿ ಡಾ.ಗೀತಾ, ಮಗ ಗಣೇಶ್ ಪ್ರಸಾದ್ ಮತ್ತು ಮಗಳು ಹಾಗೂ ಅಳಿಯನನ್ನು ಅಗಲಿದ್ದಾರೆ. ಅಪಾರ ಅಭಿಮಾನಿಗಳನ್ನು, ಬೆಂಬಲಿಗರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.[ವ್ಯಕ್ತಿಚಿತ್ರ : ಸಜ್ಜನ ರಾಜಕಾರಣಿ ಎಚ್ ಎಸ್ ಮಹದೇವ ಪ್ರಸಾದ್]
ಸಚಿವರ ಕುವೆಂಪುನಗರದ ನಿವಾಸದಲ್ಲಿ ಪತ್ನಿ, ಹಾಗೂ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ಅವರ ಅಪಾರ ಅಭಿಮಾನಿಗಳು, ಬೆಂಬಲಿಗರು ಮನೆ ಮುಂದೆ ಜಮಾಯಿಸಿದ್ದಾರೆ. ಎಲ್ಲೆಲ್ಲೂ ಶೋಕ ಮಡುಗಟ್ಟಿದೆ. ಸೂತಕ ಛಾಯೆ ಆವರಿಸಿದೆ. ಕುವೆಂಪು ನಗರದ ಅವರ ನಿವಾಸಕ್ಕೆ ಇದೀಗ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದ್ದು, ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಗುಂಡ್ಲುಪೇಟೆಗೆ ಕೊಂಡೊಯ್ದು ಅಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ನಿವಾಸಕ್ಕೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಕುವೆಂಪುನಗರ ಠಾಣೆಯ ಇನ್ಸಪೆಕ್ಟರ್ ಜಗದೀಶ್ ಅವರಿಗೆ ಸೂಕ್ತಭದ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದರು. ಸ್ಥಳದಲ್ಲಿ ಹುಣಸೂರು, ಪಿರಿಯಾಪಟ್ಟಣ ಶಾಸಕರು ಆಗಮಿಸಿದ್ದಾರೆ. ಪಾಲಿಕೆಯ ಸದಸ್ಯರು ಸಹ ಆಗಮಿಸಿದ್ದಾರೆ.
ಗುಂಡ್ಲುಪೇಟೆಯ ಶಾಸಕರಾಗಿದ್ದ ಮಹದೇವಪ್ರಸಾದ್ ಹಾಲಹಳ್ಳಿ ಶ್ರೀಕಾಂತ ಶೆಟ್ಟಿ ಮಹದೇವಪ್ರಸಾದ್ 1958ರ ಅಗಸ್ಟ್ 8ರಂದು ಗುಂಡ್ಲುಪೇಟೆಯಲ್ಲಿ ಜನಿಸಿದ್ದರು. ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಸಂಗಮ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದ ಇವರು ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ಉದ್ಯೋಗಮೇಳಗಳನ್ನು ಆಯೋಜಿಸಿ ಗುರುತಿಸಿಕೊಂಡಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications