Get Updates
Get notified of breaking news, exclusive insights, and must-see stories!

ಮಹದೇವಪ್ರಸಾದ್ ನಿಷ್ಠಾವಂತ ರಾಜಕಾರಣಿ: ಧ್ರುವ ನಾರಾಯಣ್

ಮೈಸೂರು, ಜನವರಿ 5 : ಎಚ್.ಎಸ್. ಮಹದೇವ್ ಪ್ರಸಾದ್ ಅವರು ಅತ್ಯಂತ ಸರಳ ಹಾಗೂ ಸಜ್ಜನಿಕೆಯ ರಾಜಕೀಯ ಶಕ್ತಿ ಎಂದು ಸಂಸದ ಧ್ರುವನಾರಾಯಣ್ ಬಣ್ಣಿಸಿದರು.

ಮೈಸೂರಿನ ಪುರಭವನದಲ್ಲಿ ನಡೆದ ಎಚ್.ಎಸ್. ಮಹದೇವಪ್ರಸಾದ್ ಅವರ ಸಂತಾಪ ಸೂಚಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಧ್ರುವನಾರಾಯಣ ಅವರು, ಮಹದೇವ್ ಪ್ರಸಾದರ ಅಕಾಲಿಕ ಮರಣದಿಂದ ಪಕ್ಷಕ್ಕೆ ಹಾಗೂ ನನಗೆ ವೈಯಕ್ತಿಕವಾಗಿ ನಷ್ಟವಾಗಿದೆ. ನಾನು ಅವರು 2೦ ವರ್ಷದ ಸ್ನೇಹಿತರು. ಅವರು ದೇವರಾಜ ಅರಸ್ ಅವರ ಗರಡಿಯಲ್ಲಿ ಬೆಳೆದವರು. ವಿದ್ಯಾರ್ಥಿ ದೆಸೆಯಲ್ಲಿ ಮುಖಂಡರಾಗಿ ಕೆಲಸ ಮಾಡಿದವರು. ಸ್ವಾತಂತ್ರ್ಯ ಹೋರಾಟಗಾರ ಶ್ರೀಕಂಠಶೆಟ್ಟರ ಮಗನಾಗಿದ್ದ ಅವರು ತಂದೆಯಂತೆ ಹೋರಾಟ ಮಾಡಿ, ಅವರ ಆದರ್ಶಗಳನ್ನು ಪಾಲಿಸಿದ್ದಾರೆ ಎಂದರು.[ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ]

HS Mahadeva prasad Faithful politician say mp druvanarayan

ಸತತ 5 ಬಾರಿ ಸೋಲಿಲ್ಲದ ಸರದಾರನಾಗಿ ಜಯಗಳಿಸಿ ಇವತ್ತು ಚಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಿದ್ದಾರೆ. ಅವರು ಚಾಮರಾಜನಗರ ಕ್ಷೇತ್ರಕ್ಕೆ ಯಾವುದೇ ಕೊರತೆ ಮಾಡಲಿಲ್ಲ. ಜಿಲ್ಲೆಗೆ ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪ್ರತ್ಯೇಕ ಹಾಲು ಒಕ್ಕೂಟ ರಚನೆ ಮಾಡಿದರು. ಕೆರೆಗಳಿಗೆ ನೀರು ತುಂಬಿಸಿದ ಜಿಲ್ಲೆಯ ಏಕೈಕ ನಾಯಕ ಎಂದು ವರ್ಣಿಸಿದರು.

ನಾನೂ ಸೇರಿದಂತೆ ನಾಲ್ಕು ಶಾಸಕರು ಅವರನ್ನು ಕ್ಯಾಪ್ಟನ್ ಎಂದೇ ಕರೆಯುತ್ತಿದ್ದೆವು. ಪಕ್ಷ ಕಟ್ಟಿದ ಧೀಮಂತ ಹಾಗೂ ಉತ್ತಮ ಆಡಳಿತ ನಡೆಸುವ ನಾಯಕ ಎಂದರೆ ಮಹದೇವ ಪ್ರಸಾದರು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ತಿಳಿಸಿದರು.[ಮಹದೇವಪ್ರಸಾದ್ ಮೈಸೂರು ನಿವಾಸದಲ್ಲಿ ಮಡುಗಟ್ಟಿದ ಶೋಕ]

ಸಚಿವ ತನ್ವೀರ್ ಸೇಠ್ ಮಾತನಾಡಿ, ಪ್ರತಿಯೊಬ್ಬರ ಎದೆಯಾಳದಲ್ಲಿ ಹೆಚ್.ಎಸ್. ಮಹದೇವ ಪ್ರಸಾದ್ ನೆಲೆ ನಿಂತಿದ್ದಾರೆ. ಅವರು ಮಾಡಿರುವ ಕಾರ್ಯವೇ ಇದಕ್ಕೆ ಸಾಕ್ಷಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದರು.

ಹೆಚ್.ಎಸ್. ಮಹದೇವಪ್ರಸಾದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ನ ಶಾಸಕರಾದ ವಾಸು, ಮಂಜುನಾಥ್, ಜಿ.ಪಂ. ಸದಸ್ಯೆ ಪುಷ್ಪ ಅಮರನಾಥ್, ಶಿವಣ್ಣ, ಜಿಲ್ಲಾ ಅಧ್ಯಕ್ಷ, ವಿಜಯಕುಮಾರ್ ಇತರರು ಅನೇಕರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+