ಮಹದೇವ್ ಪ್ರಸಾದ್ ಅವರಿಗೆ ಸಿದ್ದು ಅಂತಿಮ ನಮನ
ಮೈಸೂರು, ಜನವರಿ 3: ಕಾಂಗ್ರೆಸ್ ಹಿರಿಯ ಮುಖಂಡ ಎಚ್,ಎಸ್, ಮಹದೇವ ಪ್ರಸಾದ್ ನಿಧನ ಹಿನ್ನೆಲೆ ಚಿಕ್ಕಮಗಳೂರಿನಿಂದ ಮೈಸೂರಿಗೆ ಮಹದೇವ ಪ್ರಸಾದ್ ಪಾರ್ಥೀವ ಶರೀರವನ್ನು ತಂದಿದ್ದು, ಸಾರ್ವತ್ರಿಕ ದರ್ಶನಕ್ಕೆ ಇಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ
ಮಹದೇವ್ ಪ್ರಸಾದ್ ಅವರ ಪಾರ್ಥೀವ ಶರೀರವನ್ನು ಮೈಸೂರಿನ ಕುವೆಂಪು ನಗರದ ನಿವಾಸದಲ್ಲಿ ಇರಿಸಿದ್ದು ಅನೇಕ ರಾಜಕೀಯ ನಾಯಕರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಂತಿಮ ನಮನವನ್ನು ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆಯಲು ಮಂಡಕಳ್ಳಿ ವಿಮಾನ ನಿಲ್ದಾಣದಿಂದ ನಿವಾಸಕ್ಕೆ ತೆರಳಿದರು.[ಮಹದೇವ ಪ್ರಸಾದ್ ನಿಧನ : ಮುಖಂಡರ ಅಂತಿಮ ನುಡಿ]
ಈಗಾಗಲೇ ಕಾಂಗ್ರೆಸ್ಸಿನ ಡಿ.ಕೆ. ಶಿವಕುಮಾರ್, ಕೆ.ಜೆ.ಜಾರ್ಜ್ ಆಗಮಿಸಿದ್ದು ಮಹದೇವ್ ಪ್ರಸಾದ್ ಅವರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹಿರಿಯ ಮುಖಂಡ
ಎಚ್. ಎಸ್. ಮಹದೇವ ಪ್ರಸಾದ್ ಅವರ ಪಾರ್ಥೀವ ಶರೀರಕ್ಕೆ ಹುಗುಚ್ಚ ಅರ್ಪಿಸಿದರು. ನಂತರ ಮಹದೇವ ಪ್ರಸಾದ್ ಪತ್ನಿ ಗೀತಾ ಮತ್ತ ಮಗ ಗಣೇಶ್ ಪ್ರಸಾದ್ ಮತ್ತು ಮಗಳು, ಅಳಿಯ ರೊಂದಿಗೆ ಸಮಾಲೋಚನೆ ನಡೆಸಿ ಸಾಂತ್ವನ ಹೇಳಿದರು.