ಅಗತ್ಯವಿಲ್ಲದಿದ್ದರೇ ಇಲ್ಲಿ ಬಿಡಿ, ಅಗತ್ಯವಿದ್ದರೆ ತೆಗೆದುಕೊಳ್ಳಿ!
ಜೀವನವೆಂಬುದು ಎಷ್ಟು ವಿಚಿತ್ರ ನೋಡಿ. ಕೆಲವರಿಗೆ ಶ್ರೀಮಂತಿಕೆ ತುಳುಕಾಡುತ್ತಿರುತ್ತದೆ, ಹಲವರಿಗೆ ಬಡತನವೆಂಬುದು ಕಿತ್ತು ತಿನ್ನುತ್ತಿರುತ್ತದೆ. ಹರಿದ ಬಟ್ಟೆಯನ್ನು ತೊಟ್ಟು, ಕಿತ್ತುಹೋಗಿರುವ ಚಪ್ಪಲಿಯನ್ನೇ ಮೆಟ್ಟಿಕೊಂಡು ಜೀವನವೆಂಬ ಬಂಡಿಯನ್ನು ಸಾಗಿಸುತ್ತಿರುವವರು ಎಷ್ಟೋ?
ಅವರು ಆಕಾಶಕ್ಕೆ ಏಣಿ ಹಾಕುವುದನ್ನು ಬಿಟ್ಟಿರುತ್ತಾರೆ, ಕನಸು ಕಾಣುವುದನ್ನೂ ನಿಲ್ಲಿಸಿರುತ್ತಾರೆ. ಇದ್ದರೆ ಮೃಷ್ಟಾನ್ನ, ಇಲ್ಲದಿದ್ದರೆ ತಣ್ಣೀರೇ ಗತಿ. ನಮಗೇಕೆ ಅವೆಲ್ಲಾ? ಅವರವರ ಹಣೆಬರಹ ಎಂದು ಸುಮ್ಮನಿರುವವರೇ ಹೆಚ್ಚು. ಆದರೆ ಇಲ್ಲೊಂದು ತಂಡ ಇಂತಹ ಬಡವರಿಗೆ ವಂಚಿತವಾಗಿರುವ ಈ ಎಲ್ಲಾ ಸೌಲಭ್ಯವನ್ನು ಒದಗಿಸಲು ಮುಂದಾಗಿದೆ.
ಮೈಸೂರಿನಲ್ಲಿ ಖಾಸಗಿ ಎನ್ಜಿಒವೊಂದು 'ಕರುಣೆಯ ಗೋಡೆ' ಎಂಬ ಮಳಿಗೆಯನ್ನು ನಗರದ ಕೆ.ಆರ್ ಎಸ್ ರಸ್ತೆಯ ದಾಸಪ್ಪ ವೃತ್ತದ ಬಳಿ ಪ್ರಾರಂಭಿಸಿದೆ. ಈ ಮಳಿಗೆಯಲ್ಲಿ ನಮಗೆ ಬೇಡವಾದ ವಸ್ತುಗಳಾದ ಬ್ಯಾಗ್, ಪುಸ್ತಕ, ಶೂಗಳನ್ನು ಬಿಟ್ಟು ಹೋಗಬಹುದು. ಇಲ್ಲೊಂದು ವಿಶೇಷವಿದೆ.
ಇಲ್ಲಿ ನಮಗೆ ಬೇಡದ ಪುಸ್ತಕಗಳು, ಬ್ಯಾಗ್ಸ್, ಶೂ, ಬಟ್ಟೆಗಳು, ಏನೇ ಇದ್ದರೂ ಇಲ್ಲಿ ನೀಡಿದಲ್ಲಿ ದುಬಾರಿ ಬೆಲೆ ಕೊಟ್ಟು ಖರೀದಿಸಲಾಗದವರು ಕೊಂಡೊಯ್ಯಬಹುದು. ಅಗತ್ಯವಿಲ್ಲದಿದ್ದರೆ ಇಲ್ಲಿ ಬಿಡಿ, ಅಗತ್ಯವಿದ್ದರೆ ತೆಗೆದುಕೊಳ್ಳಿ ಎಂಬ ಬರಹದಡಿ ಕರುಣೆಯ ಗೋಡೆ ತಲೆಯೆತ್ತಿ ನಿಂತಿದೆ.
ಯಂಗ್ ಇಂಡಿಯನ್ ನ ಮೈಸೂರು ವಿಭಾಗದ ಮುಖ್ಯಸ್ಥೆ ಅಕ್ಷರ ಕುಮಾರ್ ಅವರು ಈ ಸಂಸ್ಥೆ ಬೆಳೆದುಬಂದ ಬಗ್ಗೆ, ನಡೆಸುತ್ತಿರುವ ಚಟುವಟಿಕೆಗಳ ಬಗ್ಗೆ ಒನ್ಇಂಡಿಯಾ ಕನ್ನಡದೊಡನೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ.

ಯಂಗ್ ಇಂಡಿಯನ್ ತಂಡದ ಉದ್ದೇಶವೇನು?
'ಯಂಗ್ ಇಂಡಿಯನ್' ಎಂಬ ಹೆಸರಿನ ಈ ಎನ್ ಜಿ ಓ, ಮೈಸೂರಿನಲ್ಲಿ ಸುಮಾರು 60ಕ್ಕೂ ಹೆಚ್ಚು ಯುವ ತರುಣರ ಪಡೆಯನ್ನು ಕಟ್ಟಿದೆ. ಇವರ ಕಾಯಕವೇ ಬಡವರ ಸೇವೆ. ವೃತ್ತಿಯಲ್ಲಿ ಇವರೆಲ್ಲರು ಉನ್ನತ ಹುದ್ದೆಯಲ್ಲಿದ್ದಾರೆ. ಆದರೆ ತಮ್ಮ ಸಮಾಜಮುಖಿ ಕಾಯಕಗಳಿಂದಲೇ ಬಡವರ ಸೇವೆಗೆ ಮುಂದಾಗಿದ್ದಾರೆ. ಇಂಥವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ.

ಯೋಜನೆ ರೂಪುಗೊಂಡಿದ್ದು ಹೇಗೆ?
ಇದೇ ತೆರನಾದ ಯೋಜನೆ ಸದ್ಯ ಹೈದರಾಬಾದ್ ಸೇರಿದಂತೆ ಹಲವು ರಾಜ್ಯಗಳಲ್ಲಿದೆ. ನಮ್ಮ ರಾಜ್ಯದಲ್ಲಿ ಎಂದಿಗೂ ಕೂಡ ಈ ರೀತಿಯ ಯೋಜನೆ ಜಾರಿಗೆ ತರುವಲ್ಲಿ ಯಾರೂ ಮುಂದೆ ಬಂದಿರಲಿಲ್ಲ. ಹಾಗಾಗಿ ಒಮ್ಮೆ ಹಾಗೆಯೇ ಮಾತಿಗೆ ಕುಳಿತಾಗ ಮೈಸೂರಿನಲ್ಲಿ ಈ ಯೋಜನೆಯನ್ನು ಆರಂಭಿಸದರೆ ಹೇಗೇ ಎಂಬ ಕಲ್ಪನೆ ಮೂಡಿತು. ಅದಕ್ಕೆ ಎಲ್ಲರ ಸಹಕಾರವೂ ದೊರೆಯಿತು. ನಮ್ಮ ತಂಡದ ಸದಸ್ಯರಾದ ನಿಧಿ ಶಾ, ಪ್ರತಿಭಾ ನಾಯ್ಕ್, ವಿನಯ್ ಶಂಕರ್, ಚೈತ್ರ ನಾರಾಯಣ್, ರಾಧ ಎಲ್ಲರೂ ಈ ಯೋಜನೆಗಾಗಿ ಶ್ರಮಿಸಿದೆವು.

ಯಾರೂ ಇದನ್ನು ದುರುಪಯೋಗಪಡಿಸಿಕೊಂಡಿಲ್ಲ
ಯೋಜನೆಯನ್ನು ಜಾರಿಗೆ ತಂದಿದ್ದು, ಜನರು ಇದರ ಸದುಪಯೋಗಪಡಿಸಿಕೊಳ್ಳಬೇಕೇ ಹೊರತು, ಇದರ ದುರುಪಯೋಗವಲ್ಲ. ಜನರ ಪ್ರತಿಕ್ರಿಯೆ ನೋಡಿ ನಮಗೆ ಸಂತಸವಾಗುತ್ತಿದೆ. ಇನ್ನು ಮೇಯರ್ ನಮ್ಮ ಯೋಜನೆಗೆ ಸಹಾಯವಾಗಲೆಂದು ಸಿಸಿಟಿವಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ತಂಡದಿಂದ ಮತ್ತಷ್ಟು ಯೋಜನೆ ಜಾರಿಗೆ ತರುತ್ತೇವೆ ಎನ್ನುತ್ತಾರೆ ಅಕ್ಷರ.

ಈ ಮಳಿಗೆ ಹೇಗೆ ಕಾರ್ಯನಿರ್ವಹಿಸುತ್ತದೆ?
ಈ ಮಳಿಗೆಯಲ್ಲಿ ನಮಗೆ ಬೇಡವಾದ ವಸ್ತುಗಳಾದ ಬ್ಯಾಗ್, ಪುಸ್ತಕ, ಶೂಗಳನ್ನು ಬಿಟ್ಟು ಹೋಗಬಹುದು. ನಿಮಗೆ ಬೇಕಾದ ವಸ್ತುಗಳು ಈ ಮಳಿಗೆಯಲ್ಲಿದರೆ ಉಚಿತವಾಗಿ ಕೊಂಡೊಯ್ಯಬಹುದು ಎಂಬ ಪರಿಕಲ್ಪನೆಯಿಂದ ಈ ಮಳಿಗೆಯನ್ನ ಪ್ರಾರಂಭಿಸಲಾಗಿದೆ. ದುಬಾರಿ ಹಣಕೊಟ್ಟು ಖರೀದಿಸಲಾಗದವರು ಇಲ್ಲಿಂದ ವಸ್ತುಗಳನ್ನು ಕೊಂಡೊಯ್ಯಬಹುದು. ಆದರಿಂದಲೇ ಈ ಮಳಿಗೆಯ ಮೇಲೆ ನಿಮಗೆ 'ಅಗತ್ಯವಿಲ್ಲದಿದ್ದರೇ ಇಲ್ಲಿ ಬಿಡಿ, ಅಗತ್ಯವಿದ್ದರೆ ತೆಗೆದುಕೊಳ್ಳಿ' ಎಂಬ ಪರಿಕಲ್ಪನೆಯಿಂದ ಈ ಅಂಗಡಿಗೆ 'ಕರುಣೆಯ ಗೋಡೆ' ಎಂದು ಹೆಸರಿಡಲಾಗಿದೆ.

ಇಂದಿನ ಪೀಳಿಗೆಯ ಯುವಕರಿಗೆ ಮಾದರಿ
ನಮ್ಮ ಯುವಜನರು ಎಂದರೇ ಸಾಕು ಮೊಬೈಲ್, ಚಾಟಿಂಗ್, ನೆಟ್, ಬ್ರೌಸಿಂಗ್ ಎಂದು ಬಡಬಡಾಯಿಸುವವರೇ ಹೆಚ್ಚು. ಅಂಥವರಿಗೆ ಈ ತಂಡ ಮಾಡುತ್ತಿರುವ ಸಮಾಜಮುಖಿ ಕಾಯಕ ಮಾದರಿ ಎನ್ನಬಹುದು. ಮಾನವೀಯತೆಯೊಂದಿದ್ದರೆ ಎಂಥ ಕೆಲಸ ಕೂಡ ಸಾಧ್ಯ ಎನ್ನುವುದನ್ನು ಇವರು ತೋರಿಸಿಕೊಟ್ಟಿದ್ದಾರೆ. ಹ್ಯಾಟ್ಸ್ ಆಫ್ ಟು ಯಂಗ್ ಇಂಡಿಯನ್ ಟೀಂ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications