ಆನ್ ಲೈನಲ್ಲಿ ಅರ್ಜಿ ಸಲ್ಲಿಸುವಾಗ ಹುಷಾರ್; ಹುಣಸೂರು ಯುವಕನ ಕಥೆ ಕೇಳಿ...
ಮೈಸೂರು, ಮಾರ್ಚ್ 11: ಉದ್ಯೋಗಕ್ಕೆಂದು ಕೇಂದ್ರ ಸರ್ಕಾರಿ ಇಲಾಖೆಗೆ ಅರ್ಜಿ ಸಲ್ಲಿಸಿದ ಹುಣಸೂರಿನ ಯುವಕರೊಬ್ಬರು ಸುಮಾರು 21 ಸಾವಿರ ರೂ.ಗಳನ್ನು ಕಳೆದುಕೊಂಡಿದ್ದಾರೆ.
ಹುಣಸೂರಿನ ಸೋಮನಹಳ್ಳಿ ಗ್ರಾಮದ ಬಿ.ಕಾಂ ಪದವೀಧರ ವಿನೋದ್ ರಾವ್ ಕೇಂದ್ರದ ಕೃಷಿ ಮಂತ್ರಾಲಯದಿಂದ ಕೃಷಿ ಕಾಲ್ ಸೆಂಟರ್ನ ಉದ್ಯೋಗಕ್ಕೆ ಆನ್ ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂಬ ವದಂತಿ ನಂಬಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿ ಪರಿಗಣಿಸಿದ್ದು, ಅಗತ್ಯ ಲ್ಯಾಪ್ಟಾಪ್ ಕಳುಹಿಸಿಕೊಡಲು 21,100 ರೂ.ಗಳನ್ನು ಆನ್ಲೈನ್ನಲ್ಲಿ ಜಮೆ ಮಾಡಲು ಸೂಚಿಸಲಾಗಿತ್ತು. ಇದನ್ನು ನಂಬಿ ವಿನೋದ್ ಹಣ ಕಳುಹಿಸಿದ್ದಾರೆ. ಬಳಿಕ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಅನುಮಾನಗೊಂಡು ವಿಚಾರಿಸಿದ್ದಾರೆ. ಕೇಂದ್ರ ಸರಕಾರದ ಕೃಷಿ ಸಚಿವಾಲಯ ಯಾವುದೇ ಅರ್ಜಿ ಆಹ್ವಾನಿಸಲಿಲ್ಲ ಎನ್ನುವುದು ತಿಳಿದು ಆಘಾತಕ್ಕೆ ಒಳಗಾಗಿದ್ದಾರೆ. ಈ ಕುರಿತು ದೂರು ನೀಡಲಾಗಿದೆ.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆ ನೀಡಿದ್ದು, ಕೇಂದ್ರ ಹಾಗೂ ರಾಜ್ಯ ಕೃಷಿ ಇಲಾಖೆ ಉದ್ಯೋಗಕ್ಕಾಗಿ ಯಾವುದೇ ಜಾಹೀರಾತು ನೀಡಿರಲಿಲ್ಲ. ಈ ಕುರಿತು ರೈತರಿಗೆ, ವಿದ್ಯಾರ್ಥಿಗಳಿಗೆ ಅಥವಾ ಯಾರಿಗಾದರೂ ಕರೆ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆ ಇಲ್ಲವೇ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡುವಂತೆ ಕೋರಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications