ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈಗ ವಿಶ್ವನಾಥ್ ಗೆ ಸಿಕ್ಕಿದೆ ಒಕ್ಕಲಿಗರ ಬಲ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 28: ಹುಣಸೂರು ಉಪ ಚುನಾವಣಾ ಕಣ ರಂಗೇರುತ್ತಿದೆ. ಈ ನಡುವೆ ಹುಣಸೂರಿನಲ್ಲಿ ಬಿಜೆಪಿಯಿಂದ ಒಕ್ಕಲಿಗರ ಮತ ಬೇಟೆ ಮುಂದುವರೆದಿದ್ದು ಕಾಂಗ್ರೆಸ್ ಮುಖಂಡರೊಬ್ಬರನ್ನು ಬಿಜೆಪಿಗೆ ಕರೆತರಲು ಸಿ.ಪಿ.ಯೋಗೇಶ್ವರ್ ನಡೆಸಿದ ಸಂಧಾನ ಯಶಸ್ವಿಯಾಗಿದೆ.

ಹುಣಸೂರಿನ ತಾಲೂಕು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರು ಮತ್ತು ಮೈಸೂರು ಹಾಲು ಒಕ್ಕೂಟದ ಮಾಜಿ‌ ಅಧ್ಯಕ್ಷ ಹಾಗೂ ಕಾಂಗ್ರೆಸ್ ನ ಮುಖಂಡರಾದ ರಾಮಕೃಷ್ಣಗೌಡ ಅವರು ತಮ್ಮ ನೂರಾರು ಬೆಂಬಲಿಗರೂಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಹುಣಸೂರು ಚುನಾವಣೆ: ಬಿಜೆಪಿಯ ಈ 'ನಾಯಕ'ರಿಗೆ ಪ್ರತಿಷ್ಠೆಯ ಪ್ರಶ್ನೆಹುಣಸೂರು ಚುನಾವಣೆ: ಬಿಜೆಪಿಯ ಈ 'ನಾಯಕ'ರಿಗೆ ಪ್ರತಿಷ್ಠೆಯ ಪ್ರಶ್ನೆ

ತೇಗದ ನಾಡಿನಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದು, ಸಿ.ಪಿ.ಯೋಗೇಶ್ವರ್ ತಂತ್ರದಿಂದ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಗೆ ಒಕ್ಕಲಿಗರ ಬಲ ದಿನೇ ದಿನೇ ಹೆಚ್ಚುತ್ತಿದೆ. ಈ ಮಧ್ಯೆ ಹುಣಸೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಒಕ್ಕಲಿಗ ಮತ ಗಳಿಸಿದರೆ ಬಿಜೆಪಿ ಗೆಲುವು ಸುಲಭವಾಗಲಿದೆ ಎಂಬುದು ಬಿಜೆಪಿ ಮುಖಂಡರ ಲೆಕ್ಕಾಚಾರ.

Hunasuru Congress Candidate Ramakrishnagowda Joined BJP Today

ಹೀಗಾಗಿ ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ನ ಮುಖಂಡರಾದ ರಾಮಕೃಷ್ಣಗೌಡರ ಜತೆ ಮಾತುಕತೆ ನಡೆಸಿ ಬಿಜೆಪಿಗೆ ಸೆಳೆದಿದ್ದಾರೆ. ರಾಮಕೃಷ್ಣಗೌಡರು ತಮ್ಮ ಬೆಂಬಲಿಗರೊಂದಿಗೆ ಕಮಲ ಮುಡಿಯಲು ಮುಂದಾಗಿದ್ದಾರೆ.

English summary
Congress candidate Ramakrishnagowda in hunasuru joined Bjp today, CP Yogeshwar succeeded in negotiation
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X