ಅಗ್ನಿ ಆಕಸ್ಮಿಕ: ಮೈಸೂರು ಬಳಿಯ ತೆಂಗಿನ ತೋಟ ಭಸ್ಮ

ಮೈಸೂರು- ಬನ್ನೂರು ರಿಂಗ್ ರಸ್ತೆಯ ಬಳಿ ನಡೆದ ಘಟನೆ; ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ಗಾಳಿಯಿಂದಾಗಿ ತೋಟಕ್ಕೆ ತಗುಲಿದ್ದು ಅಗ್ನಿ ಅವಗಢಕ್ಕೆ ಕಾರಣ.

ಮೈಸೂರು, ಫೆಬ್ರವರಿ 24: ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತಕ್ಕೆ ಅಪಾರ ಪ್ರಮಾಣದ ತೆಂಗಿನ ಮರಗಳು ಸುಟ್ಟು ನಾಶವಾದ ಘಟನೆ ಮೈಸೂರು- ಬನ್ನೂರು ರಿಂಗ್ ರಸ್ತೆಯ ಸಮೀಪ ನಡೆದಿದೆ.

Hundreds of Coconut Trees burnt in a fire tragedy near Mysore - Bannur Ring road

ಮೈಸೂರು-ಬನ್ನೂರು ರಿಂಗ್ ರಸ್ತೆಯಲ್ಲಿ ಸಂಗ್ರಹಗೊಂಡಿದ್ದ ತ್ಯಾಜ್ಯ ವಸ್ತುಗಳಿಗೆ ಹಚ್ಚಿದ ಬೆಂಕಿಯು ಜೋರಾಗಿ ಗಾಳಿ ಬೀಸಿದ ಪರಿಣಾಮ ಅಲ್ಲಿಯೇ ಪಕ್ಕದಲ್ಲಿದ್ದ ಸ್ಥಳೀಯ ನಿವಾಸಿ ಶಿವಣ್ಣ ಎಂಬುವವರಿಗೆ ಸೇರಿದ ತೆಂಗಿನ ತೋಟಕ್ಕೆ ತಗುಲಿ ಸುಮಾರು 1 ಎಕರೆ ಜಾಗದಲ್ಲಿ ಬೆಳೆದಿದ್ದ ತೆಂಗಿನ ಮರಗಳು ಸೇರಿದಂತೆ ಇನ್ನಿತರೆ ಮರಗಿಡಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.[ನೆಲಮಂಗಲ ಬಸ್ ಬೆಂಕಿಯಲ್ಲಿ ಗಾಯಗೊಂಡಿದ್ದ ಮಮತಾ ಸಾವು]

Hundreds of Coconut Trees burnt in a fire tragedy near Mysore - Bannur Ring road

ತೋಟಕ್ಕೆ ಬೆಂಕಿ ಬಿದ್ದ ವಿಷಯವನ್ನು ಸಾರ್ವಜನಿಕರು ಅಗ್ನಿ ಶಾಮಕ ಠಾಣೆಗೆ ದೂರವಾಣಿ ಮೂಲಕ ತಿಳಿಸುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನಿಮಂಟಪ ಹಾಗೂ ಸರಸ್ವತಿಪುರಂನ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿಗಳು 4 ಅಗ್ನಿ ಶಾಮಕ ವಾಹನಗಳೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದವು.[ನೆಲಮಂಗಲ ಬಸ್ ಅಗ್ನಿ ದುರಂತಕ್ಕೆ ಪೂಜಾ ಸಾಮಗ್ರಿಯೇ ಕಾರಣ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+