ಗುಂಡಿನ ಮತ್ತಿನಲ್ಲಿದ್ದ ಹೆಂಡತಿಯ ಪ್ರಾಣ ತೆಗೆದ ಗಂಡ
ಎಚ್.ಡಿ.ಕೋಟೆ, ಏಪ್ರಿಲ್ 11 : ಮದ್ಯದ ನಶೆಯಲ್ಲಿದ್ದ ಪತಿರಾಯ ಪಾನಮತ್ತಳಾಗಿದ್ದ ಪತ್ನಿಗೆ ಹೊಡೆದು ಸಾಯಿಸಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಡಿ.ಬಿ.ಕುಪ್ಪೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಳ್ಳೆ ಹಾಡಿಯಲ್ಲಿ ನಡೆದಿದ್ದು, ಘಟನೆಗೆ ಹಾಡಿಯಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವೇ ಕಾರಣ ಎನ್ನಲಾಗಿದೆ.
ಇತ್ತೀಚೆಗೆ ಗೋಳೂರು ಹಾಡಿಯಲ್ಲಿ ಅಕ್ರಮ ಮದ್ಯ ಕುಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮರೆಯುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಅಕ್ರಮ ಮದ್ಯ ಮಾರಾಟ ನಿಂತಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ. ಬಳ್ಳೆ ಹಾಡಿಯ ಬಹುತೇಕ ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಗ್ರಾಮ ಪಂಚಾಯಿತಿ ಸದಸ್ಯರೇ ಕುಡಿತದ ದಾಸರಾಗಿರುವುದು ವಿಶೇಷ!

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬಳ್ಳೆ ಹಾಡಿಯ ನಿವಾಸಿ ಧನು ಎಂಬಾತನ ಪತ್ನಿ ಸುಚಿತ್ರ(20) ಎಂಬಾಕೆ ಶುಕ್ರವಾರ ರಾತ್ರಿ ಮನೆಯವರೊಂದಿಗೆ ಸೇರಿ ಮದ್ಯ ಸೇವಿಸಿದ್ದಾಳೆ. ಅವಳ ಗಂಡ ಅತ್ತೆ, ನಾದಿನಿ, ಮಾವನೂ ವಿಪರೀತ ಮದ್ಯ ಸೇವಿಸಿದ್ದಾರೆ. ಬಳಿಕ ಗಲಾಟೆ ಆರಂಭವಾಗಿದ್ದು, ಮಾತಿಗೆ ಮಾತು ಬೆಳೆದು ಗಂಡ ಧನು ಹೆಂಡತಿ ಸುಚಿತ್ರಳ ಕಪಾಳಕ್ಕೆ ಹೊಡೆದಿದ್ದಾನೆ. ಪರಿಣಾಮ ಬೆಳಗಿನ ಜಾವ ಮೃತ ಪಟ್ಟಿದ್ದಾಳೆ. ಸುಚಿತ್ರಳಿಗೆ ಶ್ರಾವಣಿ ಎಂಬ ಎರಡು ವರ್ಷದ ಹೆಣ್ಣು ಮಗುವಿದೆ.
ಈ ಬಗ್ಗೆ ಗ್ರಾಮಪಂಚಾಯಿತಿ ಅಧ್ಯಕ್ಷ ತಿರುಪತಿ ಎಚ್.ಡಿ.ಕೋಟೆ ತಹಸೀಲ್ದಾರ್ ಹಾಗೂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಡಿ.ಬಿ.ಕುಪ್ಪೆ ವ್ಯಾಪ್ತಿ ಎಲ್ಲಾ ಗ್ರಾಮಗಳಲ್ಲೂ ಕೂಡ ಮದ್ಯ ಮಾರಾಟ ನಿಷೇಧವಾಗಿದ್ದರೂ ಬಳ್ಳೆ ಹಾಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸಿ ಹಾಡಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ತಡೆಯೊಡ್ಡಬೇಕಿದೆ. ಇಲ್ಲದಿದ್ದರೆ ಇನ್ನೆಷ್ಟು ಜನರು ಬಲಿಯಾಗಬೇಕಾಗುತ್ತದೋ?
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications