ಮೈಸೂರಿನ ಹುಡುಗಿಗೆ ಆಪಲ್ ಕಂಪೆನಿ ಸೇರುವ ಆಸೆ!
ಮೈಸೂರು, ಮೇ.13 : ಮೈಸೂರಿನ ಸದ್ವಿದ್ಯಾ ಶಾಲೆಯ ವಿದ್ಯಾರ್ಥಿನಿ ಬಿ.ಯು. ಹೈಮಾವತಿ ಸಂಸ್ಕೃತದಲ್ಲಿ 125, ಇಂಗ್ಲಿಷ್ ನಲ್ಲಿ 99, ಕನ್ನಡದಲ್ಲಿ 100, ಗಣಿತದಲ್ಲಿ 97, ವಿಜ್ಞಾನದಲ್ಲಿ 100, ಸಮಾಜ ವಿಜ್ಞಾನದಲ್ಲಿ 99 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.
ಸೋಮವಾರ ಪ್ರಕಟಗೊಂಡ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಮೈಸೂರಿನ ನಿತ್ಯಾ ಸುರಭಿ ರಾಜ್ಯದಲ್ಲಿ ಪ್ರಥಮ ಸ್ಥಾನಗಳಿಸಿದ್ದರೆ, ಬಿ.ಯು.ಹೈಮಾವತಿ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಆದ್ದರಿಂದ ಫಲಿತಾಂಶ ಮೈಸೂರು ಜಿಲ್ಲೆಗೆ ಡಬ್ಬಲ್ ಖುಷಿ ನೀಡಿದೆ. [ಫಲಿತಾಂಶ ಪಡೆಯಲು ಇಲ್ಲಿ ಕ್ಲಿಕ್ ಮಾಡಿ]

ವಕೀಲರಾಗಿರುವ ಬಿ.ಕೆ. ಉದಯಕುಮಾರ್ ಹಾಗೂ ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್. ಗೌರಮ್ಮ ಅವರ ಏಕೈಕ ಪುತ್ರಿಯಾಗಿರುವ ಹೈಮಾವತಿ ಅವರಿಗೆ ಆಪೆಲ್ ಸಂಸ್ಥೆ ಮುಖ್ಯಸ್ಥ ಸ್ಟೀವ್ ಜಾಬ್ಸ್ ಅವರೇ ಸ್ಫೂರ್ತಿಯಂತೆ. ಭವಿಷ್ಯದಲ್ಲಿ ಆಪೆಲ್ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂಬ ಗುರಿಯನ್ನು ಅವರು ಹೊಂದಿದ್ದಾರೆ. [SSLC ಫಲಿತಾಂಶದ Highlights]
ತಮ್ಮ ಭವಿಷ್ಯದ ಕನಸುಗಳ ಬಗ್ಗೆ ಮಾತನಾಡಿದ ಹೈಮಾವತಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬುದು ನನ್ನ ಆಸೆ. ಈಗ ಬಂದಿರು ಉತ್ತಮ ಅಂಕ ಹೆಚ್ಚು ಸಾಧನೆ ಮಾಡಲು ಸ್ಫೂರ್ತಿ ತುಂಬಿದೆ ಎಂದು ಹೇಳಿದರು.
ಪಿಯುಸಿಯಲ್ಲಿ ಪಿಸಿಎಂಇ ಆಯ್ಕೆ ಮಾಡಿಕೊಂಡು ನಂತರ ಮೆಕ್ಯಾನಿಕಲ್ ಪ್ರಾಸ್ತಿಟಿಕ್ಸ್ ಓದಬೇಕು ಎಂಬುದು ನನ್ನ ಕನಸು ಎಂದು ಹೇಳಿದರು. ಮೊಬೈಲ್ ಉತ್ಪಾದನಾ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಸ್ಟೀವ್ ಜಾಬ್ಸ್ ಹುಟ್ಟುಹಾಕಿದ ಆ್ಯಪೆಲ್ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂಬುದು ನನ್ನ ಕನಸಾಗಿದೆ ಎಂದು ಹೈಮಾವತಿ ಅವರು ಸಂತಸ ಹಂಚಿಕೊಂಡಿದ್ದಾರೆ. ನಮ್ಮ ಕಡೆಯಿಂದ ಹೈಮಾವತಿ ಅವರಿಗೆ ಆಲ್ ದಿ ಬೆಸ್ಟ್.
ಅಂದಹಾಗೆ ಮೇ 8ರಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸದ್ವಿದ್ಯಾ ಕಾಲೇಜಿನ ವಸುಧಾ ಅವರು 600ಕ್ಕೆ 594 ಅಂಕಗಳನ್ನು ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದ್ದರು. ಸದ್ಯ ಎಸ್ಎಸ್ಎಲ್ಸಿ ಫಲಿತಾಂಶದಲ್ಲೂ ಸದ್ವಿದ್ಯಾ ಶಾಲೆ ಮೂರನೇ ಸ್ಥಾನ ಪಡೆದೆ. [ವಸುಧಾ ಸಂದರ್ಶನ ಓದಿ]
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications