Get Updates
Get notified of breaking news, exclusive insights, and must-see stories!

"ಬ್ಲಾಕ್‌ ಮೇಲ್‌ ಮಾಡುತ್ತಿಲ್ಲ, ಅನ್ಯಾಯದ ವಿರುದ್ಧ ಹೋರಾಟವಷ್ಟೆ"

ಮೈಸೂರು, ಮೇ 25: ಮೈಮುಲ್ ನೇಮಕಾತಿ ವಿಚಾರದಲ್ಲಿ ನಾನು ಯಾರನ್ನೂ ಬ್ಲಾಕ್‌ಮೇಲ್‌ ಮಾಡಲು ಹೊರಟಿಲ್ಲ. ನೇಮಕಾತಿಯಲ್ಲಿ ಆಗಿರುವ ಅಕ್ರಮದ, ಅವ್ಯವಹಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದೇನೆ ಎಂದಿದ್ದಾರೆ ಶಾಸಕ ಸಾರಾ ಮಹೇಶ್‌.

Recommended Video

      ಪೊಲೀಸ್ ಇಲಾಖೆಗೆ ಕನ್ನಡ ಚಿತ್ರರಂಗ ಸಲ್ಲಿಸಿದ ವಿಶೇಷ ಸಲಾಂ | SV Production | Sai Kumar

      ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಅನ್ಯಾಯ, ಅಕ್ರಮ ನಡೆದಾಗ ನೋಡಿಕೊಂಡು ಸುಮ್ಮನಿರಲು ನನ್ನಿಂದ ಸಾಧ್ಯವಿಲ್ಲ. ಒಬ್ಬ ಶಾಸಕನಾಗಿ ಖಂಡಿಸುವುದು ನನ್ನ ಜವಾಬ್ದಾರಿ. ನಾನು ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇನೆ" ಎಂದು ಹೇಳಿದರು.

       I Am Fighting Against Injustice Said Sara Mahesh In Mysuru

      ಶಾಸಕ ಜಿ.ಟಿ.ದೇವೇಗೌಡ ಅವರು ಮೈಮುಲ್ ‌ನ ನೇಮಕಾತಿಯಲ್ಲಿ ಎಲ್ಲವೂ ಪಾರದರ್ಶಕವಾಗಿದೆ ಎಂದು ಹೇಳುತ್ತಿದ್ದಾರೆ. ಈ ಮಾತನ್ನು ಅವರು ಸಾರ್ವಜನಿಕವಾಗಿ ಒಪ್ಪಿಕೊಳ್ಳಲಿ. ಹಾಗೆ ಒಪ್ಪಿಕೊಂಡರೆ ಈ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ತಂದು ನಾನು ನೇಮಕಾತಿಯ ವಿರುದ್ಧ ಕೈಗೆತ್ತಿಕೊಂಡಿರುವ ಹೋರಾಟವನ್ನು ಕೈಬಿಡುತ್ತೇನೆ ಎಂದು ಸವಾಲು ಹಾಕಿದರು.

      ಈಚೆಗಷ್ಟೆ ಮೈಮುಲ್ ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವುದಾಗಿ ಸಾರಾ ಮಹೇಶ್ ಆರೋಪ ಮಾಡಿದ್ದರು. ಈ ಕುರಿತು ಆಡಿಯೋವೊಂದನ್ನೂ ಬಿಡುಗಡೆಮಾಡಿದ್ದರು. ಸದ್ಯ, ಮೈಮುಲ್ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+