ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಬಸವರಾಜ ಹೊರಟ್ಟಿ
ಮೈಸೂರು, ಜೂನ್ 5: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಅದಕ್ಕಾಗಿ ಯಾವ ಲಾಬಿಯೂ ಮಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಗೊಂದಲ ನಿರ್ಮಾಣವಾಗದಂತೆ ಸಮ್ಮಿಶ್ರ ಸರಕಾರ ಸ್ಥಿರವಾಗಬೇಕಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಶಾಸಕರಿಂದಲೂ ತ್ಯಾಗ, ಸಂಯಮ ಹಾಗೂ ಸಹಕಾರ ಬೇಕಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ," ಎಂದು ಹಲವು ಗೊಂದಲಗಳಿಗೆ ತೆರೆ ಎಳೆದರು.
"ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಆರಂಭಿಸಿದ ಆರ್.ಟಿ.ಇ ಯೋಜನೆಯು ದುರ್ಬಳಕೆಯಾಗುತ್ತಿದೆ. ಈ ಯೋಜನೆಯಡಿ ಆಂಗ್ಲ ಮಾಧ್ಯಮಕ್ಕೆ ನೀಡುವ ನೋಂದಣಿಯನ್ನು ರದ್ದು ಮಾಡಬೇಕು. ಮೊದಲು ಕನ್ನಡ ಮಾಧ್ಯಮ, ನಂತರ ಅನುದಾನಿತ ಶಾಲೆಯಲ್ಲಿ ಸೀಟು ಸಿಗದೇ ಇದ್ದರೆ ಮಾತ್ರ ಅನುದಾನ ರಹಿತ ಶಾಲೆಯಲ್ಲಿ ಅವಕಾಶ ನೀಡಬೇಕು. ಅಲ್ಲದೆ ಯೋಜನೆಗೆ 684 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ. ಇದರ ದುರುಪಯೋಗ ತಡೆಯಲು ಕಡಿವಾಣ ಕ್ರಮಗಳನ್ನು ಕೈಗೊಳ್ಳಬೇಕು," ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

"ತಾವು ಸಚಿವರಾಗಿದ್ದ ವೇಳೆ ಶಿಕ್ಷಣ ಕ್ಷೇತ್ರದಲ್ಲಿ ಆಳವಾದ ಅಧ್ಯಯನ ನಡೆಸಿ ಹಲವು ವರದಿಗಳನ್ನು ತಯಾರಿಸಿದ್ದೆವು. ಹಳ್ಳಿಗಾಡಿನ ಬಾಲಕಿಯರು ಶಿಕ್ಷಣ ಉತ್ತೇಜನಕ್ಕಾಗಿ 1649 ಪ್ರೌಢಶಾಲೆ, 200 ಪದವಿ ಕಾಲೇಜನ್ನು ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಜೂರುಗೊಳಿಸಿದ್ದರು. ಅಲ್ಲದೆ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ 500 ಕೋಟಿ ಬಿಡುಗಡೆ, 48 ಸಾವಿರ ಶಿಕ್ಷಕರ ನೇಮಕ, ಬಿಸಿಯೂಟ, ಬೈಸಿಕಲ್ ವಿತರಣೆ , ಶಿಕ್ಷಕರ ವರ್ಗಾವಣೆ ನೀತಿಯನ್ನು ಹೊರಡಿಸಿದ್ದೆವು," ಎಂದು ಸ್ಮರಿಸಿದರು.
"ಕಳಪೆ ಮಟ್ಟದ ಸೈಕಲ್ ನೀಡುವ ಮೂಲಕ ಶಿಕ್ಷಣ ಇಲಾಖೆಯಲ್ಲಿಯೇ ಅಕ್ರಮವೆಸಗುತ್ತಿದ್ದಾರೆ. ಶಿಕ್ಷಣ ಸಚಿವ ಮಾಜಿ ತನ್ವೀರ್ ಸೇಠ್ ಅವರು ಶೈಕ್ಷಣಿಕ ಕ್ಷೇತ್ರ ಸುಧಾರಿಸಲು ಯಾವುದೇ ಕ್ರಮ ವಹಿಸದೇ ಇರುವುದು ದುರಂತ," ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications