ಗೌಡರು ನಂಬುವ ಮಂಗಳವಾರ, ಅಮಾವಾಸ್ಯೆ ಮುಹೂರ್ತ ನಂಬದ ಜಿಟಿಡಿ
Recommended Video

ಮೈಸೂರು, ಜುಲೈ 24 : "ನನಗೆ ಅಮಾವಾಸ್ಯೆ, ಪೂರ್ಣಿಮೆ, ಆಷಾಢ ಎಲ್ಲವೂ ಒಂದೇ. ನಾನು ಯಾವಾಗ ಬೇಕಾದರೂ ನೂತನ ಕಚೇರಿಗೆ ಹೋಗಲು ಸಿದ್ಧವಿದ್ದೇನೆ" ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಆಷಾಢ, ಅಮಾವಾಸ್ಯೆ, ಪೌರ್ಣಮಿ ಎಲ್ಲವೂ ಒಳ್ಳೆ ದಿನವೇ. ನಾನು ಯಾವಾಗ ಬೇಕಾದರೂ ಅಧಿಕೃತ ನಿವಾಸಕ್ಕೆ ಹೋಗುತ್ತೇನೆ. ಶುಭ ಕಾರ್ಯಕ್ಕೆ ಎಲ್ಲವೂ ಒಳ್ಳೆ ದಿನ. ಆದರೆ ನನಗೆ ಇನ್ನೂ ಮನೆಯನ್ನು ಕೊಟ್ಟಿಲ್ಲ. ಸರಕಾರ ನನಗೆ ಮನೆ ಕೊಟ್ಟರೆ ಮಂಗಳವಾರವೇ ಮನೆಗೆ ಹೋಗಲು ಸಿದ್ಧನಿದ್ದೇನೆ ಎಂದರು.
ಮಹಾರಾಣಿ ಕಾಲೇಜಿಗೆ ಸಚಿವರ ಭೇಟಿ
ಮೂರು ದಿನಗಳ ಹಿಂದಷ್ಟೇ ಮೈಸೂರು ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಸಮಸ್ಯೆ ಅಲಿಸಿದ್ದ ಸಚಿವ ಜಿ.ಟಿ.ದೇವೇಗೌಡ, ಅಧಿಕಾರಿಗಳ ಜತೆ ಮತ್ತೆ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಜೊತೆಯಲ್ಲೂ ಚರ್ಚೆ ನಡೆಸಿದ ಸಚಿವ ಜಿಟಿಡಿ, ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿ ಜೊತೆ ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡ, ಶಿಥಿಲಾವಸ್ಥೆ ತಲುಪಿರುವ ಕಟ್ಟಡದ ಪುನರ್ ನಿರ್ಮಾಣ ಸಾಧ್ಯವಿಲ್ಲ. ಪ್ರತಿಯೊಂದು ವಿಭಾಗಕ್ಕೂ ಕಾಂಪ್ಲೆಕ್ಸ್ ಮಾದರಿಯಲ್ಲಿ ಪ್ರತ್ಯೇಕ ಕಟ್ಟಡ ಬೇಕಿದೆ. ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಅನುದಾನ ನೀಡಿದ್ದಾರೆ. ನಬಾರ್ಡ್, ವರ್ಲ್ಡ್ ಬ್ಯಾಂಕ್ ನಿಂದಲೂ ಅನುದಾನಕ್ಕೆ ಬೇಡಿಕೆ ಇಟ್ಟಿದ್ದೇವೆ. ಕಲಾ, ವಾಣಿಜ್ಯ, ವಿಜ್ಞಾನಕ್ಕೆ ಪ್ರತ್ಯೇಕ ಕಟ್ಟಡ ಹಾಸ್ಟೆಲ್ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications