ಸುಮಲತಾ ಬಗ್ಗೆ ರೇವಣ್ಣ ಹೇಳಿಕೆ ವಿಚಾರ:ಪ್ರತಿಕ್ರಿಯೆ ನೀಡಲ್ಲವೆಂದ ಜಿಟಿಡಿ, ಕಾರಣವೇನು?
ಮೈಸೂರು, ಮಾರ್ಚ್ 9: ದೇವೇಗೌಡರ ಕುಟುಂಬ ಈಗ ಒಂದಾಗಿಲ್ಲ. ಅವರೆಲ್ಲರೂ ಬೇರೆ ಬೇರೆಯಾಗಿ ಸಾಕಷ್ಟು ವರ್ಷಗಳೇ ಸಂದಿವೆ ಎಂದು ಸಚಿವ ಜಿಟಿ ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣ ಈಗ ವಿಷಯವಲ್ಲ. ದೇವೇಗೌಡರ ಮಕ್ಕಳಾದ ಬಾಲಕೃಷ್ಣ, ರೇವಣ್ಣ ಹಾಗೂ ಕುಮಾರಸ್ವಾಮಿ ಅವರ ಕುಟುಂಬ ಬೇರೆ- ಬೇರೆಯಾಗಿದೆ. ಇಲ್ಲಿ ಯಾರನ್ನು ನಾಮಿನಿ ಮಾಡುತ್ತಿಲ್ಲ ಎಂದರು.
ಕುಟುಂಬಕ್ಕೂ ಮಿಗಿಲಾಗಿ ಜನರ ಮುಂದೆ ಹೋಗಿ ಅವರು ಆಯ್ಕೆ ಆಗುತ್ತಿದ್ದಾರೆ. ದೇವೇಗೌಡರ ಕುಟುಂಬದಲ್ಲಿ ಮಾತ್ರ ಕುಟುಂಬ ರಾಜಕಾರಣ ಇಲ್ಲ. ದೇಶದ ಸಾಕಷ್ಟು ರಾಜ್ಯಗಳಲ್ಲಿ ಇನ್ನು ಕುಟುಂಬ ರಾಜಕಾರಣ ಇದೆ ಜಿಟಿಡಿ ಆರೋಪಿಸಿದರು.

ಇನ್ನು ಸುಮಲತಾ ಬಗ್ಗೆ ಸಚಿವ ರೇವಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿ, ಬಾಯಿಗೆ ಬಂದಂತೆ ಮಾತನಾಡುವವರಿಗೆಲ್ಲ ಉತ್ತರ ಕೊಡಲು ಸಾಧ್ಯವಿಲ್ಲ. ಯಾರೂ ಕೂಡ ಇನ್ನೊಬ್ಬರಿಗೆ ನೋವಾಗುವ ರೀತಿಯಲ್ಲಿ ರೀತಿ ಮಾತನಾಡಬಾರದು ಎಂದು ಕುಮಾರಸ್ವಾಮಿ ಸೂಚಿಸಿದ್ದು, ಈ ವಿಚಾರದಲ್ಲಿ ಯಾರೂ ತುಟಿ ಬಿಚ್ಚಬಾರದು ಎಂದು ಹೇಳಿದ್ದಾರೆ. ಇದರಿಂದ ನನ್ನನ್ನು ಕಟ್ಟು ಹಾಕಿದ ಹಾಗೆ ಆಗಿದೆ. ಈ ವಿಚಾರವಾಗಿ ನಾನು ಯಾವ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications