ಗೌರಿ ಲಂಕೇಶ್ ಅಂದ್ರೆ ಯಾರಂತ ಗೊತ್ತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್
ಮೈಸೂರು, ಸೆಪ್ಟೆಂಬರ್ 13: "ನನಗೆ ಗೌರಿಯಾಗಲಿ, ಅವರ ತಂದೆಯಾಗಲಿ ಯಾರು ಎಂದು ತಿಳಿದಿಲ್ಲ" ಎಂದು ಆರ್ ಎಸ್ ಎಸ್ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರನ್ನು ಗೌರಿ ಲಂಕೇಶ್ ಹತ್ಯೆ ಕುರಿತು ಪತ್ರಕರ್ತರು ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ.
"ನನಗೆ ಗೌರಿಯಾಗಲಿ ಅವರ ತಂದೆಯಾಗಲಿ ಯಾರು ಎಂದು ತಿಳಿದಿಲ್ಲ. ಗೌರಿ ಒಂದು ವಿಚಾರಗಳನ್ನು ಇಟ್ಟುಕೊಂಡು ಬರೆಯುತ್ತಿದ್ದು, ಅದಕ್ಕೂ ನನಗೂ ಸಂಬಂಧ ಇಲ್ಲ. ಗೌರಿ ನನ್ನ ಬಗ್ಗೆ ಬರೆದ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಯಾರೇ ಆಗಲಿ ಹಿಂಸೆಯನ್ನು ಸಹಿಸಲ್ಲ. ಅದರಲ್ಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಿಂಸೆಯನ್ನು ಸಹಿಸಲ್ಲ. ಎಲ್ಲರಿಗೂ ಬರೆಯುವ ಸ್ವಾತಂತ್ರ್ಯವಿದೆ. ಆದರೆ ಚಾರಿತ್ರ್ಯ ಹನನವಾಗುವ ರೀತಿಯಲ್ಲಿ ಯಾರೂ ಬರೆಯಬಾರದು."

"ರಾಷ್ಟ್ರೀಯ ಸ್ವಯಂ ಸೇವಕ ಸಂಘ ವೈಚಾರಿಕ ಹೋರಾಟವನ್ನು ನಡೆಸುತ್ತದೆಯೇ ಹೊರತು ದೈಹಿಕ ಹೋರಾಟವನ್ನು ಒಪ್ಪುವುದಿಲ್ಲ. ನಮ್ಮದು ಎಡವೂ ಅಲ್ಲ ಬಲವೂ ಅಲ್ಲ, ಕೇವಲ ರಾಷ್ಟ್ರೀಯ ವಾದವೊಂದೇ. ದೇಶದ, ಜನರ ಹಿತಕ್ಕಾಗಿ ನಾವು ಏನು ಬೇಕಿದ್ದರೂ ಮಾಡುತ್ತೇವೆ. ಬುದ್ಧಿ ಜೀವಿಗಳು ದೇಶದ ಹಿತ ಮರೆತು ವಿದೇಶ ಸಂಸ್ಕೃತಿ ಬೆಳೆಸಲು ಹೋಗುತ್ತಾರೆ" ಎಂದರು.
ಮಕ್ಕಳ ಬಿಸಿಯೂಟಕ್ಕೆ ಕೊಳ್ಳಿಯಿಟ್ಟದ್ದು ಸಿದ್ದರಾಮಯ್ಯ
ಮಕ್ಕಳ ತುತ್ತು ಅನ್ನಕ್ಕೂ ಕಲ್ಲು ಹಾಕಿ, ಅವರ ಬಿಸಿಯೂಟಕ್ಕೆ ಕೊಳ್ಳಿಯಿಟ್ಟ ಸಿಎಂ ಸಿದ್ದರಾಮಯ್ಯ ಎಂದಿಗೂ ಅಭಿವೃದ್ಧಿ ಕಾಣುವುದಿಲ್ಲ. ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ವಿಚಾರದಲ್ಲಿ ಆಟವಾಡಬಾರದು ಎಂದು ಸಹ ಅವರು ಪ್ರತಿಕ್ರಿಯಿಸಿದರು..
'ಭಿಕ್ಷಾಂದೇಹಿ' ಎಂಬ ಸಾಮಾಜಿಕ ಅಭಿಯಾನದ ಮೂಲಕ ಹಲವಾರು ನಾಗರಿಕರಿಂದ 555ಕ್ಕೂ ಅಧಿಕ ಅಕ್ಕಿ ಚೀಲಗಳನ್ನು ಸಂಗ್ರಹಿಸಲಾಗಿದ್ದು, ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಶಾಲಾ ಆಡಳಿತಕ್ಕೆ ಹಸ್ತಾಂತರಿಸುವ ಸಂದರ್ಭದಲ್ಲಿ ಅವರು ಮಾತನಾಡಿದರು. ಸರ್ಕಾರ ಮೂಕಾಂಬಿಕಾ ದೇವಸ್ಥಾನದ ನಿಧಿಯಿಂದ ಮಕ್ಕಳ ಬಿಸಿಯೂಟಕ್ಕೆ ಬರುತ್ತಿದ್ದ ಅಕ್ಕಿಯನ್ನು ನಿಲ್ಲಿಸಿರುವುದು ಅಕ್ಷಮ್ಯ ಅಪರಾಧ. ಎಲ್ಲರಿಗೂ ಭಾಗ್ಯ ಕೊಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ ಸರ್ಕಾರ ಚಿಕ್ಕ ಮಕ್ಕಳಿಗೆ ಅನ್ನ ನೀಡುವುದನ್ನೇ ನಿಲ್ಲಿಸಿದೆ. ಇದು ಸರಿಯಲ್ಲ ಎಂದರು.
ದೇವಸ್ಥಾನದಲ್ಲಿ ಭಕ್ತರು ನೀಡಿದ್ದ ಒಂದು ನಿಧಿಯಲ್ಲಿ ಬೇರೆಯವರಿಗೆ ನೀಡುವ ಕುರಿತ ಅನುಮತಿಯಿದ್ದು, ಶಾಲೆಗೆ ಬಿಸಿಯೂಟಕ್ಕೆ ಅಕ್ಕಿ ನೀಡುತ್ತಿತ್ತು. ಅದರಲ್ಲೂ ಶಿಕ್ಷಣದ ಪಾತ್ರ ಸಮಾಜದಲ್ಲಿ ದೊಡ್ಡದು. ಶಿಕ್ಷಣಕ್ಕಾಗಿ ಬರುವ ಮಕ್ಕಳ ಹೊಟ್ಟೆಯ ಮೇಲೆ ಹೊಡೆಯುವ ಮೂಲಕ ತಪ್ಪಿನ ಹೆಜ್ಜೆಯನ್ನಿರಿಸಿದೆ ಇದನ್ನು ಯಾರೂ ಒಪ್ಪಲ್ಲ ಎಂದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications