ನನಗೆ ರೌಡಿಗಳ ಅವಶ್ಯಕತೆ ಇಲ್ಲ: ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಮೈಸೂರು, ಡಿಸೆಂಬರ್, 06: ಸಾವಿರಾರು ಜನ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಾರೆ. ಅವರೆಲ್ಲರ ಜಾತಕ, ಕುಂಡಲಿ ನೋಡಿಕೊಂಡು, ಅವರು ಹಿಂದೆ ಏನಾಗಿದ್ದರು, ಈಗ ಏನು ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ ಎಂದು ಸಂಸದ ಪ್ರತಾಪಸಿಂಹ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ ರೌಡಿ ಬೆತ್ತನಗೆರೆ ಶಂಕರನನ್ನು ಪಕ್ಷಕ್ಕೆ ಸಂಸದರು ಬರಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಜನರೊಂದಿಗೆ ಅಭಿವೃದ್ಧಿ ರಾಜಕಾರಣ ಮಾಡುವ ನನಗೆ ಯಾವ ರೌಡಿಗಳ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷ ಸೇರ್ಪಡೆ ಆಗುವಾಗ ಬೆತ್ತನಗೆರೆ ಶಂಕರ ಇದ್ದದ್ದು ನನಗೆ ತಿಳಿದಿರಲಿಲ್ಲ ಎಂದರು.
ನನ್ನದು ಅಭಿವೃದ್ಧಿ ರಾಜಕಾರಣ
ಎಚ್.ಡಿ.ಕೋಟೆ ನಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಗೂ ಬರುವುದಿಲ್ಲ. ಆದರೂ ಪಕ್ಷದ ನಾಯಕ ಅಪ್ಪಣ್ಣ ಅವರು ಆಹ್ವಾನಿಸಿದರು ಎಂಬ ಕಾರಣಕ್ಕೆ ಪಕ್ಷ ಸೇರಿದವರಿಗೆ ಶಾಲು ಹಾಕಿದ್ದೇನೆ. 9 ವರ್ಷದಿಂದ ರಾಜಕೀಯದಲ್ಲಿ ನನಗೆ ರೌಡಿಗಳ ಸಂಪರ್ಕ ಅವಶ್ಯಕತೆ ಇಲ್ಲ. ನನ್ನದು ಏನಿದ್ದರೂ ಅಭಿವೃದ್ಧಿ ರಾಜಕಾರಣ ಆಗಿದೆ. ಯಾವ ರಿಯಲ್ ಎಸ್ಟೇಟ್ ಕೂಡ ಅವಶ್ಯಕತೆ ಇಲ್ಲ. ರೌಡಿಶೀಟರ್ ಹಾಗೂ ರೌಡಿಗಳ ಸಂಪರ್ಕ ಮಾಡಿ ಜನರನ್ನು ಹೆದರಿಸಬೇಕಾದ ಅನಿವಾರ್ಯವೂ ನನಗಿಲ್ಲ ಎಂದರು.

ಭಯೋತ್ಪಾದನೆ ಚಟುವಟಿಕೆ ಕಡಿಮೆ ಆಗಿದೆ
ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ದೇಶದ ಎ್ಲಲಾ ಭಾಗಗಳಲ್ಲಿ ನಡೆಯುತ್ತಿದ್ದ ಭಯೋತ್ಪಾದನೆ ಚಟುವಟಿಕೆ ಕಡಿಮೆ ಆಗಿದೆ. ಮೋದಿ ಅವರು ಪ್ರತ್ಯೇಕತಾವಾದಿಗಳು ಹಾಗೂ ಭಯೋತ್ಪಾದಕರನ್ನೇ ಬಿಟ್ಟಿಲ್ಲ. ಇನ್ನು ರೌಡಿಗಳನ್ನು ಬಿಡುತ್ತಾರಾ? ರೌಡಿಗಳು ಮನಃ ಪರಿವರ್ತನೆಯಾಗಿ ಬಿಜೆಪಿ ಪಕ್ಷಕ್ಕೆ ಬರುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.ಕೊತ್ವಾಲ್ ರಾಮಚಂದ್ರ, ಜಯರಾಜ್, ಬೆಕ್ಕಿನ ಕಣ್ಣಿನ ರಾಜೇಂದ್ರನಂತಹವರನ್ನು ಇಟ್ಟುಕೊಂಡು ರಾಜಕೀಯ ಮಾಡಿದವರು ನಮಗೆ ಪಾಠ ಹೇಳಿಕೊಡುವ ಅವಶ್ಯಕತೆ ಇಲ್ಲ ತಿರುಗೇಟು ನೀಡಿದರು.

ಸಾರ್ವಜನಿಕ ವಲಯಗಳ ಖಾಸಗೀಕರಣ
ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಸಂವಿಧಾನವನ್ನು ಬದಲಾವಣೆ ಮಾಡುವುದಕ್ಕೆ ನಾವು ಬಂದಿರೋದು ಅಂದಿದ್ದಾರೆ. ಅದನ್ನು ಬದಲಾವಣೆ ಮಾಡಲು ಸಾಧ್ಯವೇ? ಈ ದೇಶದ ಸಂವಿಧಾನವನ್ನು ಯಾರೂ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಸಂವಿಧಾನವನ್ನು ಪರೋಕ್ಷವಾಗಿ ದುರ್ಬಲಗೊಳಿಸುವುದಕ್ಕೆ ಕೈ ಹಾಕಿದ್ದಾರೆ ಎಂದು ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಮೈಸೂರಿನಲ್ಲಿ ಆರೋಪಿಸಿದರು. ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡುವ ಮೂಲಕ ಸಂವಿಧಾನಾತ್ಮಕ ಹಕ್ಕು ಬಾಧ್ಯತೆಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮೂಲ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಎಷ್ಟೇ ಪ್ರಚಂಡ ಬಹುಮತ ಪಡೆದು ಏನೇ ಪ್ರಯತ್ನ ಮಾಡಿದರೂ ಕೂಡ ಸಂವಿಧಾನದ ಬುಡವನ್ನು ಅಲ್ಲಾಡಿಸಲು ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications