ನನಗೆ ರೌಡಿಗಳ ಅವಶ್ಯಕತೆ ಇಲ್ಲ: ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಮೈಸೂರು, ಡಿಸೆಂಬರ್, 06: ಸಾವಿರಾರು ಜನ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಾರೆ. ಅವರೆಲ್ಲರ ಜಾತಕ, ಕುಂಡಲಿ ನೋಡಿಕೊಂಡು, ಅವರು ಹಿಂದೆ ಏನಾಗಿದ್ದರು, ಈಗ ಏನು ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ ಎಂದು ಸಂಸದ ಪ್ರತಾಪಸಿಂಹ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ ರೌಡಿ ಬೆತ್ತನಗೆರೆ ಶಂಕರನನ್ನು ಪಕ್ಷಕ್ಕೆ ಸಂಸದರು ಬರಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಜನರೊಂದಿಗೆ ಅಭಿವೃದ್ಧಿ ರಾಜಕಾರಣ ಮಾಡುವ ನನಗೆ ಯಾವ ರೌಡಿಗಳ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷ ಸೇರ್ಪಡೆ ಆಗುವಾಗ ಬೆತ್ತನಗೆರೆ ಶಂಕರ ಇದ್ದದ್ದು ನನಗೆ ತಿಳಿದಿರಲಿಲ್ಲ ಎಂದರು.
ನನ್ನದು ಅಭಿವೃದ್ಧಿ ರಾಜಕಾರಣ
ಎಚ್.ಡಿ.ಕೋಟೆ ನಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಗೂ ಬರುವುದಿಲ್ಲ. ಆದರೂ ಪಕ್ಷದ ನಾಯಕ ಅಪ್ಪಣ್ಣ ಅವರು ಆಹ್ವಾನಿಸಿದರು ಎಂಬ ಕಾರಣಕ್ಕೆ ಪಕ್ಷ ಸೇರಿದವರಿಗೆ ಶಾಲು ಹಾಕಿದ್ದೇನೆ. 9 ವರ್ಷದಿಂದ ರಾಜಕೀಯದಲ್ಲಿ ನನಗೆ ರೌಡಿಗಳ ಸಂಪರ್ಕ ಅವಶ್ಯಕತೆ ಇಲ್ಲ. ನನ್ನದು ಏನಿದ್ದರೂ ಅಭಿವೃದ್ಧಿ ರಾಜಕಾರಣ ಆಗಿದೆ. ಯಾವ ರಿಯಲ್ ಎಸ್ಟೇಟ್ ಕೂಡ ಅವಶ್ಯಕತೆ ಇಲ್ಲ. ರೌಡಿಶೀಟರ್ ಹಾಗೂ ರೌಡಿಗಳ ಸಂಪರ್ಕ ಮಾಡಿ ಜನರನ್ನು ಹೆದರಿಸಬೇಕಾದ ಅನಿವಾರ್ಯವೂ ನನಗಿಲ್ಲ ಎಂದರು.

ಭಯೋತ್ಪಾದನೆ ಚಟುವಟಿಕೆ ಕಡಿಮೆ ಆಗಿದೆ
ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ದೇಶದ ಎ್ಲಲಾ ಭಾಗಗಳಲ್ಲಿ ನಡೆಯುತ್ತಿದ್ದ ಭಯೋತ್ಪಾದನೆ ಚಟುವಟಿಕೆ ಕಡಿಮೆ ಆಗಿದೆ. ಮೋದಿ ಅವರು ಪ್ರತ್ಯೇಕತಾವಾದಿಗಳು ಹಾಗೂ ಭಯೋತ್ಪಾದಕರನ್ನೇ ಬಿಟ್ಟಿಲ್ಲ. ಇನ್ನು ರೌಡಿಗಳನ್ನು ಬಿಡುತ್ತಾರಾ? ರೌಡಿಗಳು ಮನಃ ಪರಿವರ್ತನೆಯಾಗಿ ಬಿಜೆಪಿ ಪಕ್ಷಕ್ಕೆ ಬರುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.ಕೊತ್ವಾಲ್ ರಾಮಚಂದ್ರ, ಜಯರಾಜ್, ಬೆಕ್ಕಿನ ಕಣ್ಣಿನ ರಾಜೇಂದ್ರನಂತಹವರನ್ನು ಇಟ್ಟುಕೊಂಡು ರಾಜಕೀಯ ಮಾಡಿದವರು ನಮಗೆ ಪಾಠ ಹೇಳಿಕೊಡುವ ಅವಶ್ಯಕತೆ ಇಲ್ಲ ತಿರುಗೇಟು ನೀಡಿದರು.

ಸಾರ್ವಜನಿಕ ವಲಯಗಳ ಖಾಸಗೀಕರಣ
ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಸಂವಿಧಾನವನ್ನು ಬದಲಾವಣೆ ಮಾಡುವುದಕ್ಕೆ ನಾವು ಬಂದಿರೋದು ಅಂದಿದ್ದಾರೆ. ಅದನ್ನು ಬದಲಾವಣೆ ಮಾಡಲು ಸಾಧ್ಯವೇ? ಈ ದೇಶದ ಸಂವಿಧಾನವನ್ನು ಯಾರೂ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಸಂವಿಧಾನವನ್ನು ಪರೋಕ್ಷವಾಗಿ ದುರ್ಬಲಗೊಳಿಸುವುದಕ್ಕೆ ಕೈ ಹಾಕಿದ್ದಾರೆ ಎಂದು ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಮೈಸೂರಿನಲ್ಲಿ ಆರೋಪಿಸಿದರು. ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡುವ ಮೂಲಕ ಸಂವಿಧಾನಾತ್ಮಕ ಹಕ್ಕು ಬಾಧ್ಯತೆಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮೂಲ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಎಷ್ಟೇ ಪ್ರಚಂಡ ಬಹುಮತ ಪಡೆದು ಏನೇ ಪ್ರಯತ್ನ ಮಾಡಿದರೂ ಕೂಡ ಸಂವಿಧಾನದ ಬುಡವನ್ನು ಅಲ್ಲಾಡಿಸಲು ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications