ಇದು ಪ್ರಚಾರವೋ, ವಿಜಯೋತ್ಸವವೋ ಗೊತ್ತಾಗುತ್ತಿಲ್ಲ: ಬಿ.ಎಸ್.ವೈ
ಮೈಸೂರು, ಮಾರ್ಚ್ 13 : ನಂಜನಗೂಡಿನಲ್ಲಿ ಜನರು ನೀರಿಕ್ಷೆಗೂ ಮೀರಿ ಬೆಂಬಲ ನೀಡುತ್ತಿದ್ದಾರೆ, ನಾನು ಬಂದಿದ್ದು ಪ್ರಚಾರಕ್ಕೋ ಅಥವಾ ವಿಜಯೋತ್ಸವಕ್ಕೋ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಉಪಚುನಾವಣೆಯ ಪ್ರಚಾರದಲ್ಲಿದ್ದ ಅವರು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು.
ಮಾರ್ಚ್ 15ರಂದು ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಕೃಷ್ಣ ಬಿಜೆಪಿ ಸೇರುವ ಸಂದರ್ಭದಲ್ಲಿ ನಾನು ಕೂಡ ದೆಹಲಿಯಲ್ಲಿ ಇರುತ್ತೇನೆ. ನಾಳೆ ದೆಹಲಿಗೆ ತೆರಳಿ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದವರು ಹೇಳಿದರು.[ಕೊನೆಗೂ ಎಸ್ ಎಂ ಕೃಷ್ಣ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್!]

ಕಳಲೆ ಕೇಶವಮೂರ್ತಿ ಹಾಗೂ ಶ್ರೀನಿವಾಸ್ ಪ್ರಸಾದ್ ನಡುವೆ ಪೈಪೋಟಿ ಇದೆ ಎನ್ನುವ ಮೂಲಕ ಸಿದ್ದರಾಮಯ್ಯ ಸೋಲೊಪ್ಪಿಕೊಂಡಿದ್ದಾರೆ. ಅವರು ಯಡಿಯೂರಪ್ಪ ಮತ್ತು ಪ್ರಧಾನಿಯನ್ನು ಹೀಗೇ ಟೀಕೆ ಮಾಡುತ್ತಿದ್ದರೆ ನಾವು ಬಂದು ಪ್ರಚಾರ ಮಾಡುವ ಅಗತ್ಯವಿಲ್ಲ. ಅವರೇ ಆ ಕೆಲಸ ಮಾಡುತ್ತಿದ್ದಾರೆ ಎಂದು ಹಾಸ್ಯಭರಿತವಾಗಿ ಹೇಳಿ ನಕ್ಕರು. ಹತಾಶೆಯಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ಟೀಕೆ ಮಾಡುತ್ತಿದ್ದಾರೆ. ಬೌದ್ಧಿಕ ಸ್ಥಿಮಿತ ಕಳೆದುಕೊಂಡಿರೋದು ನಾನೋ ಅಥವಾ ಸಿದ್ದರಾಮಯ್ಯನವರೋ ಎನ್ನುವುದು ಇದರಿಂದಲೇ ಗೊತ್ತಾಗಲಿದೆ ಎಂದರು.[ನಂಜನಗೂಡು ಉಪ ಚುನಾವಣೆ ಪ್ರಚಾರಕ್ಕಿಳಿದ ಯಡಿಯೂರಪ್ಪ]

ಶೃಂಗೇರಿ ಶ್ರೀಗಳ ಆಶೀರ್ವಾದ
ನ೦ಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೈಸೂರಿನ ನಟರಾಜ ಕಾಲೇಜು ಬಳಿ ಇರುವ ಶಂಕರ ಮಠಕ್ಕೆ ತೆರಳಿ ಶೃಂಗೇರಿ ಮಠದ ಭಾರತೀ ತೀರ್ಥ ಸ್ವಾಮೀಜಿಗಳ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಪಕ್ಷದ ಅನೇಕ ನಾಯಕರೊ೦ದಿಗೆ ಹರದನಹಳ್ಳಿ, ನೆಲ್ಲಿತಾಳಪುರ ಮತ್ತು ಹುಲ್ಲಹಳ್ಳಿ, ಶಿರಮಳ್ಳಿ ಗ್ರಾಮ ಪಂಚಾಯಿತಿ ಮೊದಲಾದ ಗ್ರಾಮಗಳಲ್ಲಿ ಚುನಾವಣಾ ಸಭೆಗಳನ್ನು ನಡೆಸಿದರು. ಮಾಜಿ ಸಚಿವ ಸೋಮಣ್ಣ, ಸಂಸದೆ ಶೋಭಾ ಕರಂದ್ಲಾಜೆ ಯಡಿಯೂರಪ್ಪನವರ ಜೊತೆಗಿದ್ದರು.
More From
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications