ಹಿಂದೂ ಟೆರರಿಸಂ ಎನ್ನುವುದನ್ನು ನಾನು ಕೇಳಿಯೇ ಇಲ್ಲ: ಗೋವಿಂದ್ ಕಾರಜೋಳ
ಮೈಸೂರು, ಜನವರಿ 21: ಹಿಂದೂಗಳಲ್ಲಿ ಟೆರರಿಸಂ ಎನ್ನುವುದಿಲ್ಲ, ಹಿಂದೂ ಟೆರರಿಸಂ ಎನ್ನುವ ಪದವನ್ನೇ ನಾನು ಇದುವರೆಗೂ ಕೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಲ್ಲಿ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಟೆರರಸ್ಟ್ ಎಂದರೆ ಅದು ಪಾಕಿಸ್ತಾನದಿಂದ ಬಂದವರು ಎಂದು ತಿಳಿದುಕೊಂಡಿದ್ದೇನೆ ಎಂದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವುದರ ಬಗ್ಗೆ ಸೂಕ್ತ ತನಿಖೆಯಾಗಲಿ. ತನಿಖಾ ಹಂತದಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುವುದು ಬೇಡ ಎಂದರು.

ಸಚಿವ ಸಂಪುಟ ವಿಸ್ತರಣೆಯಿಂದ ಪ್ರಳಯ ಆಗಲ್ಲ
"ಇಡೀ ಪ್ರಕರಣದ ಕುರಿತು ಸರಿಯಾದ ಮಾಹಿತಿ ಇಲ್ಲ, ನಿನ್ನೆ ನಾನು ದೆಹಲಿಯಲ್ಲಿದ್ದೆ. ಇಂದು ಮೈಸೂರಿಗೆ ಬಂದಿದ್ದೇನೆ. ಬಾಂಬ್ ಪ್ರಕರಣದ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ" ಎಂದು ಹೇಳಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಜಗತ್ತು ಪ್ರಳಯ ಆಗಿಬಿಡುವುದಿಲ್ಲ ಎಂದು ವಿಪಕ್ಷ ನಾಯಯಕ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಕಾರಜೋಳ ತಿರುಗೇಟು ನೀಡಿದರು.

"ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸ್ಥಾನಮಾನ ನೀಡಬೇಕು"
"ಸಚಿವ ಸಂಪುಟ ವಿಸ್ತರಣೆ ಆಗುತ್ತೆ. ಆದರೆ ಸಿದ್ದರಾಮಯ್ಯ ಹೇಳುವಂತೆ ಸ್ಫೋಟವೂ ಆಗುವುದಿಲ್ಲ, ಏನೂ ಆಗುವುದಿಲ್ಲ. ಸಿದ್ದರಾಮಯ್ಯ ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂಬುದನ್ನು ನಮ್ಮ ನಾಯಕರು ನಿರ್ಧಾರ ಮಾಡುತ್ತಾರೆ" ಎಂದರು.
"ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಬೇಕು ಎಂಬುದು ನನ್ನ ಅಭಿಪ್ರಾಯ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಭಿನ್ನಾಭಿಪ್ರಾಯವೂ ಇಲ್ಲ" ಎಂದು ಅಭಿಪ್ರಾಯಪಟ್ಟರು.

"ಇಂದಿರಾ ಗಾಂಧಿ ಕಾಲದಲ್ಲಿಯೇ ಪೌರತ್ವಕ್ಕೆ ತಿದ್ದುಪಡಿ"
"ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿ ಅಲ್ಲಿನ ಕಿರುಕುಳಕ್ಕೆ ನೊಂದು ಬಂದವರಿಗೂ ಪೌರತ್ವ ಕೊಡಬಾರದೇ? ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವ ಕಾರಣನಕ್ಕಾಗಿ ಇಷ್ಟು ವಿರೋಧ ಮಾಡುತ್ತಿವೆ ಗೊತ್ತಿಲ್ಲ" ಎಂದು ಪ್ರಶ್ನಿಸಿದರು.
ಜವಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಕಾಲದಲ್ಲಿಯೇ ಪೌರತ್ವ ಕಾಯ್ದೆಗೆ ತಿದ್ದುಪಡಿ ಆಗಿದೆ. ಆಗ ವಿರೋಧ ಮಾಡದ ಕಾಂಗ್ರೆಸ್ ನವರು ಈಗ ಯಾಕೆ ಇಷ್ಟೊಂದು ಪ್ರತಿರೋಧ ತೋರುತ್ತಿದ್ದಾರೆ. ಅವರಿಗಾಗುವ ಕಷ್ಟವಾದರೂ ಏನು ಎಂದು ಮಾತಿನ ಚಾಟಿ ಬೀಸಿದರು.

ಕಾಂಗ್ರೆಸ್ ಪಕ್ಷಕ್ಕೆ ವೋಟ್ ಬ್ಯಾಂಕ್ ಚಿಂತೆ
"ಕಿರುಕುಳ, ಅತ್ಯಾಚಾರಕ್ಕೆ ಒಳಗಾದವರಿಗೆ ಪೌರತ್ವ ನೀಡುತ್ತಿದ್ದೇವೆ. ಜೊತೆಗೆ ಅಕ್ರಮ ವಲಸಿಗರನ್ನು ದೇಶದಿಂದ ಹೊರಕ್ಕೆ ಕಳುಹಿಸುತ್ತಿದ್ದೇವೆ.ವಲಸಿಗರು ಇಲ್ಲಿ ಇರುವುದರಿಂದ ದೇಶಕ್ಕೆ ಆರ್ಥಿಕ ಹೊರೆಯಾಗುತ್ತಿದೆ.ವಿಪಕ್ಷಗಳು ಮಾತ್ರ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಅವರಿಗೆ ವೋಟ್ ಬ್ಯಾಂಕ್ ಚಿಂತೆಯಾಗಿದೆ. ಹೀಗಾಗಿ ಇಲ್ಲಿಯ ಜನರನ್ನು ದೇಶದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಇಲ್ಲಿಯೇ ನೆಲೆಸಿರುವ ಯಾರೊಬ್ಬರಿಗೂ ತೊಂದರೆ ಕೊಡುವ ಉದ್ದೇಶ ಇಲ್ಲ" ಎಂದು ಗೋವಿಂದ್ ಕಾರಜೋಳ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications