ಸಿಎಂ ಆಗುತ್ತಿರುವುದು ಸಂಪೂರ್ಣ ತೃಪ್ತಿ ತಂದಿಲ್ಲ: ಕುಮಾರಸ್ವಾಮಿ
Recommended Video

ಮೈಸೂರು, ಮೇ 23 : ಇಂದಿನ ಪರಿಸ್ಥಿತಿಯಲ್ಲಿ ಸಿಎಂ ಆಗುತ್ತಿರುವುದು ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ. ಮನಸ್ಸಿನಲ್ಲಿ ಒಂದಷ್ಟು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ ಎಂದು ನಿಯೋಜಿತ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಚಾಮುಂಡೇಶ್ಚರಿಗೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್ ಗೆ ಬಂದಿಳಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬರಬೇಕೆಂಬುದು ನನ್ನ ಆಸೆಯಾಗಿತ್ತು ಎಂದು ತಿಳಿಸಿದರು.
ಇಂದು ಪರಮೇಶ್ವರ್ ನನ್ನೊಂದಿಗೆ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಸಚಿವ ಸಂಪುಟದ ಸದಸ್ಯರ ಪ್ರಮಾಣಚನ ನಂತರ ಗೊತ್ತಾಗಲಿದೆ. ಸಾಲ ಮನ್ನಾ ವಿಚಾರದಲ್ಲಿ ಯೂ ಟರ್ನ್, ರೈಟ್ ಟರ್ನ್ ಯಾವುದೂ ಇಲ್ಲ. ಸಮಯ ಬೇಕು ಅಷ್ಟೆ ಎಂದು ತನ್ನ ವಿರೋಧಿಗಳಿಗೆ ಟಾಂಗ್ ನೀಡಿದರು.

ಸಮ್ಮಿಶ್ರ ಸರ್ಕಾರವಾದ ಕಾರಣ ಕಾಂಗ್ರೆಸ್ ಪಕ್ಷವನ್ನು ವಿಶ್ವಾಸಕ್ಕೆ ಪಡೆದು ಆಡಳಿತ ಮಾಡಬೇಕಾಗಿದೆ. ರೈತರ ಸಾಲ ಮನ್ನಾ ಬಗ್ಗೆ ಗಂಭೀರ ಚಿಂತನೆ ಆರಂಭವಾಗಿದೆ. ರೈತರು ಹಾಗೂ ರೈತ ಮುಖಂಡರು ತಾಳ್ಮೆ ವಹಿಸಬೇಕು ಎಂದು ಭರವಸೆ ಕೊಟ್ಟರು.
ನಾನು ನೀಡಿದ ವಾಗ್ದಾನಗಳನ್ನು ಈಡೇರಿಸದೆ ಇರುವುದಿಲ್ಲ. ಕುಮಾರಸ್ವಾಮಿ ಜನರ ಮಧ್ಯೆ ಬೆಳೆದವನು. ಅವರಿಗೋಸ್ಕರನೇ ಅಧಿಕಾರಕ್ಕೆ ಬಂದಿರೋದು ಎಂಬ ನಂಬಿಕೆ ಇರಲಿ. ರೈತರ ಪರಿಸ್ಥಿತಿ ಕೇವಲ ಸಾಲ ಮನ್ನಾಕ್ಕೆ ಸೀಮಿತಗೊಳಿಸುವುದಿಲ್ಲ.
ಇಸ್ರೇಲ್ ಮಾದರಿಯ ಕೃಷಿ ನೀತಿ ಸೇರಿದಂತೆ ಹಲವಾರು ಸುಧಾರಿತ ಕೃಷಿ ತರುವ ಆಲೋಚನೆ ಇದೆ. ನನ್ನ ಕಾರ್ಯ ವೈಖರಿ ಎಂದಿನಂತೆಯೇ ಇರುತ್ತದೆ. ಸಮ್ಮಿಶ್ರ ಸರ್ಕಾರದಲ್ಲಿ ಇತಿಮಿತಿಗಳ ನಡುವೆ ಉತ್ತಮ ಆಡಳಿತ ನೀಡುವೆ.
ಜನಸಾಮಾನ್ಯರಿಗೆ ಸಿಎಂ ಮನೆ ಬಾಗಿಲು ಸದಾ ತೆರದಿರುತ್ತದೆ. ಜನಸಾಮಾನ್ಯರಿಗೆ ನೇರವಾಗಿ ಸ್ಪಂದಿಸುವುದೇ ನನ್ನ ಉದ್ದೇಶ. ರೈತ ಮುಖಂಡರು ಜಾತಿ ನೆಲೆಯಲ್ಲಿ ಆಲೋಚನೆ ಮಾಡಬಾರದು ಬಿಜೆಪಿಯವರು ಕರಾಳ ದಿನಾಚರಣೆ ಮಾಡಲಿ, ಅಭ್ಯಂತರವಿಲ್ಲ.
ವಿಶ್ವಾಸಮತ ಮುಗಿದ ಮೇಲೆ ರಾಜಕಾರಣ ಬದಿಗಿಟ್ಟು ರಾಜ್ಯ ಕಟ್ಟುವ ಕೆಲಸದಲ್ಲಿ ಅವರು ಭಾಗಿಯಾಗಲಿ ಎಂದು ತಿಳಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications