ಸಿದ್ದರಾಮಯ್ಯ ವಿರುದ್ಧ ನಾನೇ ಸಮರ್ಥ ಅಭ್ಯರ್ಥಿ: ಜಿ ಟಿ ದೇವೇಗೌಡ
ಮೈಸೂರು, ಜುಲೈ 20 : ಮೈಸೂರಿನ ಜೆಡಿಎಸ್ ನಲ್ಲಿ ಮತ್ತೆ ಭಿನ್ನಮತ ಸ್ಪೋಟಗೊಂಡಿದೆ. ಶಾಸಕ ಜಿಟಿಟ ದೇವೇಗೌಡ ಜೆಡಿಎಸ್ ಜಿಲ್ಲಾಧ್ಯಕ್ಷ ಹರೀಶ್ ಗೌಡ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಇತ್ತೀಚೆಗೆ ಕೆಎಸ್ ಯುಓ ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಜೆಡಿಎಸ್ ಗೆ ಸೇರ್ಪಡೆಗೊಳ್ಳುವ ಸಂದರ್ಭದ ಕಾರ್ಯಕ್ರಮದಲ್ಲಿ ಹರೀಶ್ ಗೌಡ ಭಾಗವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರೇಕೆ ಬಂದಿಲ್ಲ ಎನ್ನುವ ಕುರಿತಾಗಿ ಎಂಎಲ್ಸಿ ಕೆ.ಟಿ. ಶ್ರೀಕಂಠೇಗೌಡ ಮತ್ತು ಅಪ್ಪಾಜಿಗೌಡ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿರುವ ಜಿಟಿಡಿ, 'ಅವರೇಕೆ ಬಂದಿಲ್ಲ ಎನ್ನಲು ಇವರ್ಯಾರು?' ಎಂದು ಪ್ರಶ್ನಿಸುವ ಮೂಲಕ ಟಾಂಗ್ ನೀಡಿ ಪರೋಕ್ಷವಾಗಿ ಹರೀಶ್ ಗೌಡ ಪರವಾಗಿ ಬ್ಯಾಟ್ ಬೀಸಿದ್ದಾರೆ.

ನಾನೇ ಸಮರ್ಥ ವ್ಯಕ್ತಿ:
ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆತಟ್ಟಿ ಚುನಾವನೆಗೆ ನಿಲ್ಲುವುದಾಗಿ ಶಾಸಕ ಜಿಟಿ ದೇವೇಗೌಡ ಮುನ್ಸೂಚನೆ ನೀಡಿದ್ದಾರೆ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಿಎಂ ಅಲ್ಲಾ ಯಾರೇ ಬಂದರೂ ಅಂಜುವುದಿಲ್ಲ ಎಂದಿದ್ದಾರೆ. ಇನ್ನು ಜೆಡಿಎಸ್ ಪಾಲಿಗೆ ದೇವೇಗೌಡರು ಶ್ರೀ ಕೃಷ್ಣ ಇದ್ದಂತೆ, ಕುಮಾರಸ್ವಾಮಿ ಅರ್ಜುನ ಇದ್ದಂತೆ, ಶ್ರೀಕೃಷ್ಣ, ಅರ್ಜುನ ಇರಬೇಕಾದ್ರೆ ನನಗೇಕೆ ಭಯ? ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಚಾಮುಂಡಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರ ವಿರುದ್ಧ ಗೆದ್ದು ಮುಂದಿನ ಸಂಪುಟದಲ್ಲಿ ಮಂತ್ರಿ ಆಗುವುದಾಗಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಸಿದ್ದರಾಮಯ್ಯ ವರುಣಾಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವುದಾಗಿ ಘೋಷಿಸಿದ್ದರು ಈ ಹಿನ್ನೆಲೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಜಿಟಿಡಿ ಈ ರೀತಿ ಉತ್ತರ ನೀಡಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications