ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವನಾಥ್ ಮನವೊಲಿಸುತ್ತೇವೆ: ಸಚಿವ ಸಾ ರಾ ಮಹೇಶ್

|
Google Oneindia Kannada News

ಮೈಸೂರು, ಜೂನ್ 4: ವಿಶ್ವನಾಥ್ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇವೆ ಎಂದು ಸಚಿವ ಸಾ ರಾ ಮಹೇಶ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ವಿಶ್ವನಾಥ್ ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಇವತ್ತು ಜೆಡಿಎಸ್ ಪಕ್ಷದ ಸಭೆ ಇದೆ. ಮೈಸೂರು ಕಾರ್ಯಕ್ರಮಗಳನ್ನು ಮುಗಿಸಿ ಬೆಂಗಳೂರಿಗೆ ತೆರಳುತ್ತೇನೆ. ವಿಶ್ವನಾಥ್ ಹಾಗೂ ಪಕ್ಷದ ವರಿಷ್ಠರ ಜೊತೆ ಮಾತನಾಡುತ್ತೇನೆ ಎಂದರು.

ನಿಮ್ಮನ್ನೇ ಕೇಳಿ ಸರಿಮಾಡಿಕೊಳ್ಳುತ್ತೇನೆ: ಸಚಿವ ಸಾ ರಾ ಮಹೇಶ್ ವ್ಯಂಗ್ಯನಿಮ್ಮನ್ನೇ ಕೇಳಿ ಸರಿಮಾಡಿಕೊಳ್ಳುತ್ತೇನೆ: ಸಚಿವ ಸಾ ರಾ ಮಹೇಶ್ ವ್ಯಂಗ್ಯ

ಇಂದು ಸಂಜೆ ಬೆಂಗಳೂರಿನಲ್ಲಿ ಜೆಡಿಎಸ್ ಸಭೆ ಇದೆ. ಆ ಸಭೆಯಲ್ಲಿ ವಿಶ್ವನಾಥ್ ಅವರ ರಾಜೀನಾಮೆ ಬಗ್ಗೆ ಚರ್ಚೆ ಮಾಡುತ್ತೇವೆ. ಅವರ ರಾಜೀನಾಮೆ ಅಂಗೀಕರಿಸದಂತೆ ಮನವಿ ಮಾಡುತ್ತೇವೆ. ವಿಶ್ವನಾಥ್ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇವೆ ಎಂದು ತಿಳಿಸಿದರು.

I will convince H Vishwanath about his resignation Minister Sa Ra mahesh

ಸಿದ್ದರಾಮಯ್ಯ ಕೈಗೊಂಬೆಯಾಗಬೇಕಾಯಿತು: ರಾಜೀನಾಮೆ ಪತ್ರದಲ್ಲಿ ವಿಶ್ವನಾಥ್ ಆಕ್ರೋಶಸಿದ್ದರಾಮಯ್ಯ ಕೈಗೊಂಬೆಯಾಗಬೇಕಾಯಿತು: ರಾಜೀನಾಮೆ ಪತ್ರದಲ್ಲಿ ವಿಶ್ವನಾಥ್ ಆಕ್ರೋಶ

ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಮ್ಮೊಂದಿಗೆ ಬಿಜೆಪಿ ಶಾಸಕರು ಸಂಪರ್ಕದಲ್ಲಿ ಇದ್ದಾರೆ. ಆದರೆ ನಾವು ಆಪರೇಶನ್ ಮಾಡುವ ಹಂತಕ್ಕೆ ಹೋಗುವುದಿಲ್ಲ. ನಮಗೂ ಅವರಿಗೂ ಯಾವ ವ್ಯತ್ಯಾಸ ಬರುತ್ತದೆ ಎಂದರು.

English summary
Minister Sa Ra Mahesh pressuring to retrieve JDS president h Vishwanath resignation. He said that, I will convince to H Vishwanat about his resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X