ಚುನಾವಣೆಗಾಗಿ ಅಂಬರೀಶ್ ಹೆಸರನ್ನು ಬಳಸಿಲ್ಲ:ಸಿಎಂ ಕುಮಾರಸ್ವಾಮಿ
ಮೈಸೂರು, ಮಾರ್ಚ್ 25:ನಾವು ಚುನಾವಣೆಗಾಗಿ ಅಂಬರೀಶ್ ಹೆಸರನ್ನು ಬಳಸಿಲ್ಲ. ಅಂಬರೀಶ್ ಹೆಸರನ್ನು ಬಳಸದೆ ಮಂಡ್ಯದಲ್ಲಿ ಮತ ಕೇಳುತ್ತೇನೆ. ನಾನು ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಪೂರ್ವಭಾವಿಯಾಗಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಅಂಬರೀಶ್ ಹೆಸರನ್ನು ನಾವು ದುರ್ಬಳಕೆ ಮಾಡಿಕೊಂಡಿಲ್ಲ. ಸ್ನೇಹಿತನಾಗಿ ಅಂಬರೀಶ್ ಜೊತೆ ನಾನು ಹೇಗಿದ್ದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದರು.
ಅಂಬರೀಶ್ ಮೃತರಾದ ಸಂದರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಿದ್ದೆ. ಇದು ಎಲ್ಲರಿಗೂ ಕೂಡ ಗೊತ್ತಿರುವ ಸಂಗತಿ. ಅಂಬರೀಶ್ ಹೆಸರನ್ನ ಬಳಕೆ ಮಾಡಿಕೊಳ್ಳುತ್ತಿರುವವರು ಅವರು. ನಾವು ಅಂಬರೀಶ್ ಹೆಸರನ್ನ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಸುಮಲತಾಗೆ ತಿರುಗೇಟು ನೀಡಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಾನು ಮಂಡ್ಯಗಾಗಿ ದುಡಿಮೆ ಮಾಡಿದ್ದೇನೆ. ಯಾರು ಏನೇ ಹೇಳಿದರೂ, ಮಂಡ್ಯದಲ್ಲಿ ನಿಖಿಲ್ ಗೆಲವು ಖಚಿತ. ಹಾಸನ, ಮಂಡ್ಯ, ತುಮಕೂರು ಕ್ಷೇತ್ರಗಳಲ್ಲಿ ನಮ್ಮನ್ನ ಸೋಲಿಸಲು ಕುತಂತ್ರ ನಡೆಸುತ್ತಿದ್ದಾರೆ. ನಮ್ಮ ಕುಟುಂಬವನ್ನು ಸೋಲಿಸಲು ಅನೇಕರು ಒಳಗೊಳಗೆ ರಾಜಕೀಯ ಮಾಡುತ್ತಿದ್ದಾರೆ. ಆ ಕುತಂತ್ರ ಮಾಡುವವರು ಎಲ್ಲ ಪಕ್ಷದಲ್ಲೂ ಇದ್ದಾರೆ ಎಂದರು. ಮುಂದೆ ಓದಿ..

ಮೋದಿ ಸ್ಪರ್ಧೆ ಮಾಡಿದರೆ ಸ್ವಾಗತಿಸುವೆ
ಕರ್ನಾಟಕದಲ್ಲಿ ಮೋದಿ ಸ್ಪರ್ಧಿಸಿದರೆ ನಮಗೆ ಅದ್ಕಕಿಂತ ದೊಡ್ಡದೇನು ಇಲ್ಲ. ಕರ್ನಾಟಕದಲ್ಲಿ ಮೋದಿ ಸ್ಪರ್ಧೆ ಮಾಡಿದರೆ ಸ್ವಾಗತಿಸುವೆ. ಸಮಸ್ಯೆಗಳ ಬಗ್ಗೆ ಪ್ರಧಾನಿ ಮೋದಿಯವರಿಗೆ ಜ್ಞಾನೋದಯವಾಗಿ ಬಗೆಹರಿಸಲಿ. ನನಗೆ ಟೆನ್ಷನ್ ಕೊಡೋಕೆ ಬಿಜೆಪಿಯವರಿಂದ ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಯಾರಿಗೆ ಯಾರು ಟೆನ್ಷನ್ ಕೊಡಲಿದ್ದಾರೆ?
ಸ್ವಲ್ಪ ದಿನ ವೇಟ್ ಮಾಡಿ ಯಾರಿಗೆ ಯಾರು ಟೆನ್ಷನ್ ಕೊಡಲಿದ್ದಾರೆ ನೋಡಿ ಎಂದ ಸಿಎಂ, ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಕಳೆದ 60 ವರ್ಷಗಳಿಂದ ಒಂದು ವರ್ಗ ಪ್ರಯತ್ನ ಮಾಡುತ್ತಿದೆ. ಅದು ಸಾಧ್ಯವಿಲ್ಲ. ನಾನು 28 ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತೇನೆ.ಸಿದ್ದರಾಮಯ್ಯ ಪ್ರಚಾರಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ನಾವು ಆಹ್ವಾನ ನೀಡಿದ್ದೇವೆ ಎಂದರು.

ಬದುಕುವ ದಾರಿ ತೋರಿಸಿದ್ದು ಈ ಕುಮಾರಸ್ವಾಮಿ
ಮಂಡ್ಯದಲ್ಲಿ ರೈತ ಕುಟುಂಬದ ಅನೇಕ ಹೆಣ್ಣು ಮಕ್ಕಳು ಅನಾಥರಾದಾಗ ಅವರಿಗೆ ಬದುಕುವ ದಾರಿ ತೋರಿಸಿದ್ದು ಈ ಕುಮಾರಸ್ವಾಮಿ. ಅವರು ಕಣ್ಣೀರು ಹಾಕುವಾಗ ಆಯಮ್ಮ ಬಂದಿಲ್ಲ. ಅವರ ಕಣ್ಣೀರು ಒರೆಸಿದ್ದು ನಾನು ಎಂದು ಸುಮಲತಾ ಅವರ ಬಗ್ಗೆ ವ್ಯಂಗ್ಯವಾಡಿದ್ದಾರೆ ಸಿಎಂ.

ನನ್ನ ಕೈ ಹಿಡಿಯುತ್ತಾರೆಂಬ ವಿಶ್ವಾಸವಿದೆ
ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ನಾನು ಎಲ್ಲಾ ಕಡೆಯೂ ಪ್ರಚಾರಕ್ಕೆ ಹೋಗುತ್ತಿದ್ದೇನೆ. ಹೋದಲೆಲ್ಲ ಜನರು ಸ್ಪಂದಿಸುತ್ತಿರುವ ವಾತಾವರಣ ನೋಡಿದರೆ ಮಂಡ್ಯದ ಜನ ನನ್ನ ಕೈ ಹಿಡಿಯುತ್ತಾರೆಂಬ ವಿಶ್ವಾಸ ಇದೆ ಎಂದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications