ಪಕ್ಷದ ಸಂಘಟನೆಯೇ ನನ್ನ ಗುರಿ : ಶ್ರೀನಿವಾಸ್ ಪ್ರಸಾದ್
ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಮುಂದಾಗುತ್ತೇನೆ ಎಂದು ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ತಿಳಿಸಿದರು.
ಮೈಸೂರು, ಮೇ 4 : ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಮುಂದಾಗುತ್ತೇನೆ ಎಂದು ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ತಿಳಿಸಿದರು.
ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಹೈಕಮಾಂಡ್ ನನ್ನ ಮೇಲೆ ನಂಬಿಕೆಯಿಟ್ಟು ಉಪಾಧ್ಯಕ್ಷ ಸ್ಥಾನ ನೀಡಿದೆ. ಆ ಸ್ಥಾನಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ಪಕ್ಷದಲ್ಲಿ ಯುವಕರ ಸಂಖ್ಯೆ ಸಾಕಷ್ಟಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ 2018ರ ಚುನಾವಣೆಗೆ ಪಕ್ಷವನ್ನು ಬಲಪಡಿಸುತ್ತೇನೆ ಎಂದು ಹೇಳಿದರು.[ಈಶ್ವರಪ್ಪಗೆ ಟಾಂಗ್, ಶ್ರೀನಿವಾಸ್ ಪ್ರಸಾದ್ ಗೆ ಉಪಾಧ್ಯಕ್ಷ ಪಟ್ಟ ಕಟ್ಟಿದ ಬಿಎಸ್ವೈ]

ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಯಾವ ರೀತಿ ಗೆದ್ದಿದೆ ಹಾಗೂ ನಾವು ಯಾವುದರಿಂದ ಸೋತಿದ್ದೇವೆ ಎಂದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರು ನನ್ನನ್ನು ಏಕಾಏಕಿ ಸಂಪುಟದಿಂದ ಕೈಬಿಟ್ಟು ಅವಮಾನ ಮಾಡಿದ್ದು, ಬಳಿಕ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಪುಸ್ತಕ ಬರೆಯುತ್ತೇನೆ ಎಂದು ತಿಳಿಸಿದರು.
ನಂಜನಗೂಡು ಉಪ ಚುನಾವಣೆಯಲ್ಲಿ ಕಣಕ್ಕಿಳಿಸಲು ಜೆಡಿಎಸ್ ಗೆ ಅಭ್ಯರ್ಥಿಗಳೇ ಇರಲಿಲ್ಲ. ಇದರಿಂದ ಅಭ್ಯರ್ಥಿಯನ್ನೇ ಹಾಕದೆ ತಟಸ್ಥರಾಗಿದ್ದರು. ಅಂತಹವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 115 ರಿಂದ 120 ಸ್ಥಾನ ಗೆಲ್ಲುತ್ತೇವೆ ಎಂದು ಕುಮಾರಸ್ವಾಮಿ ಕನಸು ಕಾಣುತ್ತಿದ್ದಾರೆ. ಅಭ್ಯರ್ಥಿಯನ್ನೇ ಕಣಕ್ಕಿಳಿಸಲಾಗದವರು 120 ಸ್ಥಾನ ಗೆಲ್ಲಲು ಸಾಧ್ಯವೇ ಎಂದು ವ್ಯಂಗ್ಯವಾಡಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications