ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

ಮೈಸೂರು, ಸೆ. 28: ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ 2009 ಬ್ಯಾಚಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಮತ್ತೊಮ್ಮೆ ವರ್ಗಾವಣೆ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಕರ್ನಾಟಕ ಸರ್ಕಾರವು ಸೋಮವಾರ ಸಂಜೆ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಅವರು ಅದಕ್ಕೂ ಮೊದಲು ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದರು.

IAS officer Rohini Sindhuri is now Mysuru DC

ಕಟ್ಟಡ ಹಾಗೂ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ ಕಾರ್ಯದರ್ಶಿ, ಹಾಸನ ಜಿಲ್ಲಾಧಿಕಾರಿಯಾಗಿದ್ದರು.ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಣಿಯವರನ್ನು ವರ್ಗಾವಣೆ ಮಾಡಿ, ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರದ ಆದೇಶ ನೀಡಿತ್ತು.

ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿದೆ. ಕೋರ್ಟ್ ಆದೇಶದಂತೆ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯುವಂತೆ ಆದೇಶ ಹೊರಡಿಸಿದೆ.

ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ರೋಹಿಣಿ ಸಿಂಧೂರಿ ದಾಸರಿ ಅವರು ಕಳೆದ ಫೆಬ್ರವರಿಯಿಂದ ಇಲ್ಲಿ ತನಕ ನಾಲ್ಕನೇ ಇಲಾಖೆ ನೋಡುತ್ತಿದ್ದಾರೆ.

ಮೈಸೂರು ದಸರಾಕ್ಕೂ ಮುನ್ನ ಹಾಲಿ ಜಿಲ್ಲಾಧಿಕಾರಿ ಬಿ ಶರತ್ ಅವರನ್ನು ವರ್ಗಾವಣೆ ಮಾಡದಂತೆ ಸರ್ಕಾರದ ಮೇಲೆ ಅವರ ಸಮುದಾಯದವರು ಒತ್ತಡ ಹೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+