ರೋಹಿಣಿ ಸಿಂಧೂರಿ ತಮ್ಮ ನಡವಳಿಕೆ ತಿದ್ದಿಕೊಳ್ಳಲಿ: ಮಾಜಿ ಸಚಿವ ಎ.ಮಂಜು
ಮೈಸೂರು, ಜೂನ್ 12: "ನಿರ್ಗಮಿತ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಚಾರ ಪ್ರಿಯೆ, ಹಿರಿಯ ರಾಜಕಾರಣಿಗಳಿಗೆ ಗೌರವ ನೀಡಲ್ಲ. ಒಬ್ಬ ಶಾಸಕರ ಕುರಿತು ಏಕವಚನದಲ್ಲಿ ಮಾತನಾಡೋದು ಸರಿಯಲ್ಲ. ಈ ರೀತಿಯ ವರ್ತನೆಯನ್ನು ರೋಹಿಣಿ ಸಿಂಧೂರಿ ಸರಿಪಡಿಸಿಕೊಳ್ಳಬೇಕು" ಎಂದು ಮಾಜಿ ಸಚಿವ ಎ. ಮಂಜು ವಾಗ್ದಾಳಿ ನಡೆಸಿದರು.
"ರೋಹಿಣಿ ಸಿಂಧೂರಿ ತಮ್ಮ ನಡವಳಿಕೆ ಸರಿ ಮಾಡಿಕೊಂಡರೆ ಅವರು ಓರ್ವ ಉತ್ತಮ ಅಧಿಕಾರಿ ಎಂದ ಅವರು, ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯನ್ನು ನಾನು ಹತ್ತಿರದಿಂದ ಬಲ್ಲೆ. ಅವರ ಆಡಳಿತದ ಸಂದರ್ಭದಲ್ಲಿ ನಾನು ಸಾಕಷ್ಟು ನೋವು ಅನುಭವಿಸಿದ್ದೇನೆ. ಹೀಗಾಗಿಯೇ ಅವರ ಬಗ್ಗೆ ನಾನು ಮಾತನಾಡುತ್ತಿದ್ದೇನೆ'' ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮೈಸೂರಿನ ಭೂ ಮಾಫಿಯಾ ಬಗ್ಗೆ ಮಾತನಾಡಿದ್ದಾರೆ. ಆದರೆ, ಅವರು ಯಾಕೆ ಈತನಕ ಒಂದೇ ಒಂದು ಎಫ್ಐಆರ್ ಮಾಡಿಲ್ಲ ಎಂದು ಪ್ರಶ್ನಿಸಿದರಲ್ಲದೆ, ಎಲ್ಲರೂ ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿದ್ದಾರೆ. ಆದರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿ ದಂಧೆ ಮಾಡಬಾರದು ಎಂದರು.

"ಎಷ್ಟೋ ಅಧಿಕಾರಿಗಳು ಮೈಸೂರಿಗೆ ಬಂದು ಹೋಗಿದ್ದಾರೆ. ಈವರೆಗೂ ಭೂ ಮಾಫಿಯಾದವರ ವಿರುದ್ಧ ಯಾಕೆ ಎಫ್ಐಆರ್ ಆಗಿಲ್ಲ? ಭೂ ಮಾಫಿಯಾ ಮಾಡಿದ್ದಾರೆ ಎಂದು ಡಿಸಿಯಾಗಿದ್ದ ರೋಹಿಣಿ ಹೇಳಿದ್ದಾರೆ. ಆದರೆ ಅವರ ಮೇಲೆ ಎಫ್ಐಆರ್ ಯಾಕೆ ಮಾಡಿಸಿಲ್ಲ. ಕೇವಲ ಪ್ರಚಾರಕ್ಕೆ ಮಾಡುವುದಲ್ಲ. ಸಾರ್ವಜನಿಕ ಆಸ್ತಿ, ಸರ್ಕಾರದ ಆಸ್ತಿಯ ಬಗ್ಗೆ ಆನ್ ರೆಕಾರ್ಡ್ ಇರುತ್ತದೆ. ನಾನು ಯಾರ ಪರವೂ, ವಿರುದ್ಧವೂ ಮಾತನಾಡಲ್ಲ. ರಾಜಕಾರಣಿಗಳು, ಸಂಬಂಧಿಕರು ರಿಯಲ್ ಎಸ್ಟೇಟ್ನಲ್ಲಿ ಆಸ್ತಿ ಮಾಡುವ ರೀತಿ, ಅಧಿಕಾರಿಗಳ ನೆಂಟರು, ಸಂಬಂಧಿಕರ ಹೆಸರಲ್ಲಿ ಆಸ್ತಿ ಮಾಡಿದ್ದಾರೆ ಅನ್ನೋದು ಮುಂದಿನ ದಿನಗಳಲ್ಲಿ ಹೊರಗೆ ಬರುತ್ತದೆ'' ಎಂದು ಎಚ್ಚರಿಕೆ ನೀಡಿದರು.

Recommended Video
"ಕೆರೆ, ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಬೇಕು ಅಂತ ರೋಹಿಣಿ ಸಿಂಧೂರಿ ಹೇಳಿಕೊಂಡಿದ್ದಾರೆ. ಆದರೆ, ಹಾಸನದಲ್ಲಿ ಕೆರೆ ಉಳುವಿಗಾಗಿ ಜನರೇ ಸ್ವಂತ ಹಣದಲ್ಲಿ ಕೆರೆ ನಿರ್ಮಿಸಲು ಮುಂದಾಗಿದ್ದರು. ಆಗ ರೋಹಿಣಿ ಸಿಂಧೂರಿಯೇ ಹಾಸನದ ಡಿಸಿಯಾಗಿದ್ದರು. ಈ ಸಂಬಂಧ ಜನತೆ ಅಹ್ವಾನ ನೀಡಿದ್ದ ವೇಳೆ ಕೆರೆ ಬಳಿ ಬಂದು ಕಾರಿನಿಂದ ಕೆಳಗೆ ಇಳಿಯಲೇ ಇಲ್ಲ'' ಎಂದು ಟೀಕಿಸಿದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications