Rohini Sindhuri : ಸಾರಾ ಮಹೇಶ್ ಜೊತೆ ರೋಹಿಣಿ ಸಿಂಧೂರಿ ರಾಜಿ ಆದ್ರಾ?: ಮಧ್ಯಸ್ಥಿಕೆ ವಹಿಸಿದ್ದು ಯಾರು?
ಕೆ.ಆರ್. ನಗರದ ಶಾಸಕ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಇದೀಗ ಸಂಧಾನದ ಹಂತಕ್ಕೆ ಬಂದಿದ್ದು, ಈ ಸಂಬಂಧ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.
ಮೈಸೂರು, ಫೆಬ್ರವರಿ, 19: ಕೆ.ಆರ್. ನಗರದ ಶಾಸಕ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಇದೀಗ ಸಂಧಾನದ ಹಂತಕ್ಕೆ ಬಂದಿದ್ದು, ಈ ಸಂಬಂಧ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.
ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಆಗಿದ್ದಾಗ ಕಲ್ಯಾಣ ಮಂಟಪದ ಪಕ್ಕದ ಹಾಲ್ ಜಾಗವನ್ನು ಸಾರಾ ಮಹೇಶ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಿದ್ದರು. ಇದು ಸಾರಾ ಮಹೇಶ್ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಆರೋಪ ಸಾಬೀತಾದರೆ ರಾಜಕೀಯ ಸನ್ಯಾಸ್ವತ್ವ ಸ್ವೀಕರಿಸುತ್ತೇನೆ ಎಂದು ಸಾರಾ ಮಹೇಶ್ ಶಪಥ ಮಾಡಿದ್ದರು. ಇವೆಲ್ಲದರ ನಡುವೆ ಇದೀಗ ಮತ್ತೊಬ್ಬ ಐಎಎಸ್ ಅಧಿಕಾರಿ ಮಣಿಮಣ್ಣನ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಚರ್ಚೆಯ ಫೋಟೋ ವೈರಲ್
ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಸಾರಾ ಮಹೇಶ್, ಜಿಲ್ಲಾಧಿಕಾರಿ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿದ್ದಾರೆ ಎಂದು ದಾಖಲೆ ಸಮೇತ ಮಾಹಿತಿ ನೀಡಿದ್ದರು. ಅಧಿವೇಶನದಲ್ಲೂ ರೋಹಿಣಿ ಸಿಂಧೂರಿ ವಿರುದ್ಧ ಗುಡುಗಿದ್ದರು. ಅಲ್ಲದೆ, ಸರ್ಕಾರಿ ಮಟ್ಟದಲ್ಲೇ ತನಿಖೆ ನಡೆಸಲು ಪಟ್ಟು ಹಿಡಿದಿದ್ದರು. ಇದು ರೋಹಿಣಿ ಅವರಿಗೆ ಸಂಕಷ್ಟವನ್ನುಂಟು ಮಾಡಿತ್ತು.

ಇದು ವೃತ್ತಿ ಬದುಕಿನಲ್ಲೂ ಕಪ್ಪು ಚುಕ್ಕಿ ಇಟ್ಟಂತಾಗಿದ್ದು, ಬಡ್ತಿ ಸಿಗದೆ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಡಿಸೆಂಬರ್ನಲ್ಲೇ ರೋಹಿಣಿ ಸಿಂಧೂರಿ ಹಾಗೂ ಸಾರಾ ಮಹೇಶ್ ನಡುವೆ ಸಂಧಾನ ನಡೆದಿತ್ತು ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ, ಅದು ಫಲಪ್ರದವಾಗಿರಲಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿತ್ತು.

ವೈರಲ್ ಆದ ಸಂದೇಶದಲ್ಲಿ ಏನಿದೆ?
ಈ ನಡುವೆ ರೋಹಿಣಿ ಸಿಂಧೂರಿ ಸಾರಾ ಮಹೇಶ್ಗೆ ಮಾಡಿದ್ದಾರೆ ಎನ್ನಲಾದ ಮೇಸೆಜ್ ಕೂಡ ಇದೀಗ ವೈರಲ್ ಆಗಿದೆ. "ನಾನು ಭೂ ಒತ್ತುವರಿ ಬಗ್ಗೆ ವರದಿ ಪಡೆದಿದ್ದೆ. ನನಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ. ನಾನು ನನ್ನ ಕೆಲಸವನ್ನಷ್ಟೇ ಮಾಡಿದ್ದೇನೆ," ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದರು. ಇದೀಗ ಮಣಿವಣ್ಣನ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದೆ ಎನ್ನಲಾಗಿದೆ. ರೋಹಿಣಿ ಸಿಂಧೂರಿ ಹಾಗೂ ಸಾರಾ ಮಹೇಶ್ ನೇರ ನೇರ ಕುಳಿತುಕೊಂಡು ಮಾತನಾಡಿದ್ದು, ಸಂಧಾನ ಫಲಪ್ರದವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications