ಚಾಮರಾಜದಿಂದ ಜೆಡಿಎಸ್ ಟಿಕೆಟ್ ಸಿಗದಿದ್ದರೆ ನನ್ನ ದಾರಿ ನನಗೆ: ಹರೀಶ್ ಗೌಡ
ಮೈಸೂರು, ಜನವರಿ 20 : "ನನಗೆ ಟಿಕೆಟ್ ಸಿಕ್ಕರೆ ಸಾಕು. ಆ ಪಕ್ಷ- ಈ ಪಕ್ಷ ಅಂತ ನೋಡದೆ ಸ್ಪರ್ಧಿಸಿ, ಗೆಲ್ಲುತ್ತೇನೆ. ಅಕಸ್ಮಾತ್ ಯಾರೂ ಟಿಕೆಟ್ ನೀಡದಿದ್ದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ "ಎಂದು ಜೆಡಿಎಸ್ ಟಿಕೆಟ್ ಅಕಾಂಕ್ಷಿ ಆಗಿರುವ ಕೆ.ಹರೀಶ್ ಗೌಡ ಹೇಳಿದರು.
ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ತಮ್ಮ ಜೀವನಗಾಥೆಯ 'ನಿಮ್ಮೊಳಗೊಬ್ಬ' ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿ, ನನಗೆ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಅವರ ಕಾರ್ಯವೈಖರಿ ಇಷ್ಟವಾಗಿ ಉದ್ಯೋಗವನ್ನು ತ್ಯಜಿಸಿ, ಜೆಡಿಎಸ್ ಪಕ್ಷ ಸೇರಿದ್ದೆ. ಕಳೆದ ಬಾರಿ ವರಿಷ್ಠರ ಆಸೆಯಂತೆ ಶಂಕರಲಿಂಗೇಗೌಡರಿಗೆ ಅಭ್ಯರ್ಥಿ ಸ್ಥಾನವನ್ನು ಬಿಟ್ಟಿದ್ದೆ ಎಂದರು.
ಆದರೆ, ಏನೋ ವ್ಯತ್ಯಾಸವಾಗಿ ಅವರು ಸೋತಿದ್ದರು. ಅದಾದ ಬಳಿಕ ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ರಂಗಪ್ಪ ಅವರು ನನಗೆ ತುಂಬಾ ಆತ್ಮೀಯರು. ವೈಯಕ್ತಿಕವಾಗಿ ಅವರ ಮೇಲೆ ಗೌರವವಿದೆ. 2013ರಲ್ಲಿಯೇ ಚಾಮರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ವರಿಷ್ಠರ ಮಾತಿನಂತೆ ಶಂಕರಲಿಂಗೇಗೌಡರಿಗೆ ಸಂಪೂರ್ಣ ಸಹಕಾರ ನೀಡಿದೆ ಎಂದರು.

"ಮುಂದಿನ ದಿನಗಳಲ್ಲಿ ನಿನಗೆ ಒಳ್ಳೆಯದಾಗುತ್ತೆ ಎಂದು ಪಕ್ಷದ ಹಿರಿಯರು ಹೇಳಿದರು. ಅವರ ಮಾತಿಗೆ ಸಮ್ಮತಿಸಿದೆ. ಆದರೆ ನನಗೆ ಬೇಸರ ಮೂಡಿದೆ. ರಂಗಪ್ಪ ಅವರು ಅಭ್ಯರ್ಥಿಯಾಗುತ್ತಾರೆ ಎಂದು ತಿಳಿದಾಗ ಎರಡು - ಮೂರು ಬಾರಿ ಅವರನ್ನು ಕೇಳಿದೆ. ಆದರೆ ಅವರು ಅದನ್ನು ನಿರಾಕರಿಸಿದ್ದರು. ನನಗೂ ರಾಜಕಾರಣಕ್ಕೂ ಆಗಿ ಬರುವುದಿಲ್ಲ ಎಂದರು. ಪಕ್ಷದ ನಗರ ಅಧ್ಯಕ್ಷನನ್ನಾಗಿ ಮಾಡಿದಾಗ ಎಚ್ಡಿಕೆ ಮತ್ತು ಎಚ್ಡಿಡಿ ಅವರನ್ನು ಕೇಳಿದೆ. ಅವರು ಸಂಪೂರ್ಣ ಭರವಸೆ ನೀಡಿದ್ದರು" ಎಂದರು.
ಕುಮಾರ ಪರ್ವ ಸಮಾವೇಶದಲ್ಲಿ ರಂಗಪ್ಪ ಅವರೇ ಅಭ್ಯರ್ಥಿ ಎಂದು ವಿಶ್ವನಾಥ್ ಹೇಳಿದ್ದರು. ಅಷ್ಟೇ ಅಲ್ಲದೇ ಸಮಾವೇಶಕ್ಕೆ ನನ್ನನ್ನು ಕರೆದಿರಲಿಲ್ಲ. ರಂಗಪ್ಪ ಪಕ್ಷ ಸೇರ್ಪಡೆ ಬಗ್ಗೆ ಕೂಡ ನನ್ನ ಗಮನಕ್ಕೆ ತರಲಿಲ್ಲ. ಆ ವೇಳೆ ರಂಗಪ್ಪನವರು ಚಾಮರಾಜ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದ್ದರು. ಅದು ನನಗೆ ಬೇಸರ ತರಿಸಿತು ಎಂದರು.
ಪಕ್ಷೇತರ ಸ್ಪರ್ಧೆಗೆ ಬೆಂಬಲಿಗರ ಒತ್ತಾಯ
ಇತ್ತ ನನ್ನ ಬೆಂಬಲಿಗರು ಪಕ್ಷೇತರವಾಗಿ ಚುನಾವಣೆ ಎದುರಿಸಿ ಎಂದು ಧೈರ್ಯ ತುಂಬಿದ್ದಾರೆ. ಚಾಮರಾಜ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲೂ ಸಭೆ ನಡೆಸಿದ್ದೇನೆ. ಹೀಗಾಗಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಕ್ಷೇತ್ರದ ಎಲ್ಲ ಭಾಗದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದರು.
ನನಗೆ ಜೆಡಿಎಸ್ ನಲ್ಲಿ ಟಿಕೆಟ್ ಕೈ ತಪ್ಪಲು ಕಾರಣರಾದವರ ಹೆಸರುಗಳನ್ನು ಹೇಳಲು ಇಷ್ಟ ಇಲ್ಲ. ನಾನಾಗಿಯೇ ಪಕ್ಷದಿಂದ ಹೊರಬಂದಿಲ್ಲ. ಪಕ್ಷದಿಂದಲೇ ನನ್ನನ್ನು ಹೊರ ಹಾಕಿದ್ದಾರೆ. ನನಗೆ ಈಗಲೂ ದೇವೇಗೌಡರು, ಕುಮಾರಸ್ವಾಮಿ ಮೇಲೆ ಅಪಾರ ಗೌರವವಿದೆ ಎಂದು ಹೇಳಿದರು.
ಬಿಜೆಪಿ ಸೇರ್ಪಡೆ ಸುಳ್ಳು ವದಂತಿ
ನಾನು ಬಿಜೆಪಿ ಸೇರ್ಪಡೆಗೊಳ್ಳುತ್ತೇನೆ ಎಂಬ ವದಂತಿ ಹಬ್ಬಿತ್ತು. ಆದರೆ ಅದೆಲ್ಲ ಸುಳ್ಳು. ನಾನು ಯಾವುದೇ ಪಕ್ಷಕ್ಕೆ ಹೋಗಿಲ್ಲ. ಹಾಗಂತ ಕೈಕಟ್ಟಿ ಕೂರುವುದಿಲ್ಲ. ಒಳ್ಳೆಯ ಅವಕಾಶಗಳು ಸಿಕ್ಕರೆ, ಬೆಂಬಲಿಗರ ಬಳಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹರೀಶ್ ಗೌಡ ಹೇಳಿದರು.
ಹರೀಶ್ ಗೌಡ ನಮ್ಮ ಹುಡುಗ ಎಂದಿರುವ ರಂಗಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಯಾರ ಹುಡುಗನೂ ಅಲ್ಲ. ನಾನು ಚಾಮರಾಜ ಕ್ಷೇತ್ರದ ಹುಡುಗ. ಹನ್ನೆರಡು ವರ್ಷದಿಂದ ಜನರ ಸೇವೆ ಮಾಡುತ್ತಾ ಬಂದಿದ್ದೇನೆ. ಒಟ್ಟಾರೆಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ. ನಾಳೆಯಿಂದ ಚಾಮರಾಜ ಕ್ಷೇತ್ರದಲ್ಲಿ ಪಾದಯಾತ್ರೆ ಕೈಗೊಳ್ಳಲಿದ್ದೇನೆ. ಮನೆ ಮನೆಗೆ ತೆರಳಿ ಜನರ ಬೆಂಬಲ ಕೇಳಲಿದ್ದೇನೆ ಎಂದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications