ರಾಜ ಕಾಲುವೆ ಒತ್ತುವರಿಯಾಗಿದ್ದರೆ ನಾನೇ ಅಗೆದುಕೊಡ್ತೀನಿ: ನಟ ದರ್ಶನ್
ಮೈಸೂರು, ಸೆಪ್ಟೆಂಬರ್ 3: ನನ್ನ ಮನೆಯಿಂದ ರಾಜಕಾಲುವೆ ಒತ್ತುವರಿಯಾಗಿದ್ದರೆ ನಾನೇ ಸ್ವತಃ ಅಗೆದುಕೊಡುತ್ತೇನೆ. ಕಾನೂನು ಎಲ್ಲರಿಗೂ ಒಂದೇ ಎಂದು ನಟ ದರ್ಶನ್ ಹೇಳಿದ್ದಾರೆ. ಶುಕ್ರವಾರ ನಾಗರಹಾವು ಸಿನಿಮಾ ಡ್ಯಾನ್ಸ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಕಾಲುವೆ ಒತ್ತುವರಿಯಾಗಿ ನನ್ನ ಮನೆಯಿದ್ದರೆ ನಾನೇ ಬರೆದುಕೊಟ್ಟು ಬಿಡ್ತೀನಿ. ಎಲ್ಲರಿಗೂ ಒಂದೇ ನ್ಯಾಯ ಸ್ವಾಮಿ. ಎಲ್ಲರಿಗೂ ಏನಾಗುತ್ತದೆಯೋ ನನಗೂ ಅದೇ ಆಗುತ್ತದೆ. ಆದರೆ ಈ ಬಗ್ಗೆ ನನಗೆ ಸರಿಯಾಗಿ ಮಾಹಿತಿಯಿಲ್ಲ. ನನ್ನದು 100x200 ನಿವೇಶನ ಅಲ್ಲ 40 x50 ನಿವೇಶನ. ಅಧಿಕಾರಿಗಳು ನಿವೇಶನದ ಸರ್ವೇ ಮಾಡಿದ್ದಾರೆ ಈ ಬಗ್ಗೆ ಇನ್ನೂ ವರದಿ ಕೊಟ್ಟಿಲ್ಲ ಎಂದರು.[ರಾಜಕಾಲುವೆ ಒತ್ತುವರಿ ತೆರವು ಎಂಬ ನಿಗೂಢ ರಹಸ್ಯ!]

ಕಾನೂನು ಪ್ರಕಾರ ಉಳಿದವರಿಗೆ ಏನಾಗುತ್ತದೆಯೋ ನನಗೂ ಆಗಲಿ. ಇದು ನಮ್ಮನೆ ಆರ್ಡರ್ ಅಲ್ಲ. ಸುಪ್ರೀಂಕೋರ್ಟ್ ಆದೇಶ ಎಂದು ಅವರು ಹೇಳಿದರು. ಆ ನಂತರ ಹಾಡಿನ ಚಿತ್ರೀಕರಣದ ಬಗ್ಗೆ ಹೇಳಿದ ಅವರು, ನಾಗರಹಾವು ಚಿತ್ರದ ಹಾಡೊಂದರಲ್ಲಿ ನಟಿಸಿ ಮೇರುನಟನಿಗೆ ಈ ಮೂಲಕ ನಾನು ಗೌರವ ಸಲ್ಲಿಸುತ್ತಿದ್ದೇನೆ. ನಾನು ಮತ್ತು ಅವರು ಮೈಸೂರಿನಿಂದ ಚಿತ್ರರಂಗಕ್ಕೆ ಬಂದವರು ಎಂದರು.['ನಾಗರಹಾವು' ಸೆಟ್ ನಲ್ಲಿ 'ರಾಜಕಾಲುವೆ' ಬಗ್ಗೆ ಗುಡುಗಿದ ದರ್ಶನ್]
ನಾಗರಹಾವು ಚಿತ್ರದ ಟೈಟಲ್ ಸಾಂಗ್ ನಲ್ಲಿ ನಟ ದರ್ಶನ್ ಕಾಣಿಸಿಕೊಳ್ಳುತ್ತಿದ್ದು, ಚಿತ್ರೀಕರಣ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಭರದಿಂದ ಸಾಗುತ್ತಿದೆ. ಚಿತ್ರೀಕರಣ ನೋಡಲು ಅಭಿಮಾನಿಗಳು ಮುಗಿಬೀಳುತ್ತಿದ್ದು, ಸೆಲ್ಫಿ ತೆಗೆಸಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಅದರೆ ನಿರಾಸೆಯಿಂದ ಹಿಂತಿರುಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.[ಒತ್ತುವರಿ ತೆರವಿಗೆ ತೊಂದರೆ ಇಲ್ಲ ಎಂದ ದರ್ಶನ್]
ಚಿತ್ರೀಕರಣ ಶನಿವಾರವೂ ನಡೆಯುತ್ತಿದ್ದು, ನಟ ದರ್ಶನ್ ಅವರೊಂದಿಗೆ ಸಹಕಲಾವಿದರು ಹೆಜ್ಜೆ ಹಾಕುತ್ತಿದ್ದಾರೆ. ನಾಗರಹಾವು ಚಿತ್ರದ ಟ್ರೇಲರ್ ಈಗಾಗಲೇ ಹೊಸ ಅಲೆ ಸೃಷ್ಟಿಸಿದ್ದು, ಹಾಡುಗಳು ಬಿಡುಗಡೆಯಾದ ನಂತರ ಮತ್ತಷ್ಟು ಜನಪ್ರಿಯವಾಗುತ್ತದೆ ಎಂದು ನಟ ದರ್ಶನ್ ಭವಿಷ್ಯ ನುಡಿದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications