ರಾಜ ಕಾಲುವೆ ಒತ್ತುವರಿಯಾಗಿದ್ದರೆ ನಾನೇ ಅಗೆದುಕೊಡ್ತೀನಿ: ನಟ ದರ್ಶನ್
ಮೈಸೂರು, ಸೆಪ್ಟೆಂಬರ್ 3: ನನ್ನ ಮನೆಯಿಂದ ರಾಜಕಾಲುವೆ ಒತ್ತುವರಿಯಾಗಿದ್ದರೆ ನಾನೇ ಸ್ವತಃ ಅಗೆದುಕೊಡುತ್ತೇನೆ. ಕಾನೂನು ಎಲ್ಲರಿಗೂ ಒಂದೇ ಎಂದು ನಟ ದರ್ಶನ್ ಹೇಳಿದ್ದಾರೆ. ಶುಕ್ರವಾರ ನಾಗರಹಾವು ಸಿನಿಮಾ ಡ್ಯಾನ್ಸ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಕಾಲುವೆ ಒತ್ತುವರಿಯಾಗಿ ನನ್ನ ಮನೆಯಿದ್ದರೆ ನಾನೇ ಬರೆದುಕೊಟ್ಟು ಬಿಡ್ತೀನಿ. ಎಲ್ಲರಿಗೂ ಒಂದೇ ನ್ಯಾಯ ಸ್ವಾಮಿ. ಎಲ್ಲರಿಗೂ ಏನಾಗುತ್ತದೆಯೋ ನನಗೂ ಅದೇ ಆಗುತ್ತದೆ. ಆದರೆ ಈ ಬಗ್ಗೆ ನನಗೆ ಸರಿಯಾಗಿ ಮಾಹಿತಿಯಿಲ್ಲ. ನನ್ನದು 100x200 ನಿವೇಶನ ಅಲ್ಲ 40 x50 ನಿವೇಶನ. ಅಧಿಕಾರಿಗಳು ನಿವೇಶನದ ಸರ್ವೇ ಮಾಡಿದ್ದಾರೆ ಈ ಬಗ್ಗೆ ಇನ್ನೂ ವರದಿ ಕೊಟ್ಟಿಲ್ಲ ಎಂದರು.[ರಾಜಕಾಲುವೆ ಒತ್ತುವರಿ ತೆರವು ಎಂಬ ನಿಗೂಢ ರಹಸ್ಯ!]

ಕಾನೂನು ಪ್ರಕಾರ ಉಳಿದವರಿಗೆ ಏನಾಗುತ್ತದೆಯೋ ನನಗೂ ಆಗಲಿ. ಇದು ನಮ್ಮನೆ ಆರ್ಡರ್ ಅಲ್ಲ. ಸುಪ್ರೀಂಕೋರ್ಟ್ ಆದೇಶ ಎಂದು ಅವರು ಹೇಳಿದರು. ಆ ನಂತರ ಹಾಡಿನ ಚಿತ್ರೀಕರಣದ ಬಗ್ಗೆ ಹೇಳಿದ ಅವರು, ನಾಗರಹಾವು ಚಿತ್ರದ ಹಾಡೊಂದರಲ್ಲಿ ನಟಿಸಿ ಮೇರುನಟನಿಗೆ ಈ ಮೂಲಕ ನಾನು ಗೌರವ ಸಲ್ಲಿಸುತ್ತಿದ್ದೇನೆ. ನಾನು ಮತ್ತು ಅವರು ಮೈಸೂರಿನಿಂದ ಚಿತ್ರರಂಗಕ್ಕೆ ಬಂದವರು ಎಂದರು.['ನಾಗರಹಾವು' ಸೆಟ್ ನಲ್ಲಿ 'ರಾಜಕಾಲುವೆ' ಬಗ್ಗೆ ಗುಡುಗಿದ ದರ್ಶನ್]
ನಾಗರಹಾವು ಚಿತ್ರದ ಟೈಟಲ್ ಸಾಂಗ್ ನಲ್ಲಿ ನಟ ದರ್ಶನ್ ಕಾಣಿಸಿಕೊಳ್ಳುತ್ತಿದ್ದು, ಚಿತ್ರೀಕರಣ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಭರದಿಂದ ಸಾಗುತ್ತಿದೆ. ಚಿತ್ರೀಕರಣ ನೋಡಲು ಅಭಿಮಾನಿಗಳು ಮುಗಿಬೀಳುತ್ತಿದ್ದು, ಸೆಲ್ಫಿ ತೆಗೆಸಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಅದರೆ ನಿರಾಸೆಯಿಂದ ಹಿಂತಿರುಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.[ಒತ್ತುವರಿ ತೆರವಿಗೆ ತೊಂದರೆ ಇಲ್ಲ ಎಂದ ದರ್ಶನ್]
ಚಿತ್ರೀಕರಣ ಶನಿವಾರವೂ ನಡೆಯುತ್ತಿದ್ದು, ನಟ ದರ್ಶನ್ ಅವರೊಂದಿಗೆ ಸಹಕಲಾವಿದರು ಹೆಜ್ಜೆ ಹಾಕುತ್ತಿದ್ದಾರೆ. ನಾಗರಹಾವು ಚಿತ್ರದ ಟ್ರೇಲರ್ ಈಗಾಗಲೇ ಹೊಸ ಅಲೆ ಸೃಷ್ಟಿಸಿದ್ದು, ಹಾಡುಗಳು ಬಿಡುಗಡೆಯಾದ ನಂತರ ಮತ್ತಷ್ಟು ಜನಪ್ರಿಯವಾಗುತ್ತದೆ ಎಂದು ನಟ ದರ್ಶನ್ ಭವಿಷ್ಯ ನುಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications